ಮನೆಯ ಕೆಲಸದಾಕೆಯಿಂದಲೇ ಚಿನ್ನಾಭರಣ ಕಳವು. 74 ಗ್ರಾಂ ಚಿನ್ನಾಭರಣ ವಶ. ಮೌಲ್ಯ 8 ಲಕ್ಷ.
ತಲಘಟ್ಟಪುರ ಪೊಲೀಸ್ ಠಾಣಾ ಸರಹದ್ದಿನ ಹೆಮ್ಮಿಗೆಪುರದ ಹೆಚ್.ಗೊಲ್ಲಹಳ್ಳಿಯಲ್ಲಿ ವಾಸವಿರುವ ಪಿರಾದುದಾರರು 0:17/02/2025 ರಂದು ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಫಿರಾದುದಾರರು ಓರ್ವ ಮಹಿಳೆಯನ್ನು ಈಗ್ಗೆ 3 ವರ್ಷಗಳ ಹಿಂದೆ ಮನೆ ಕೆಲಸಕ್ಕೆ ನೇಮಕ ಮಾಡಿಕೊಂಡಿರುತ್ತಾರೆ. ಮನೆಕೆಲಸದಾಕೆಯು ಕೌಟುಂಬಿಕ ಸಮಸ್ಯೆ ಇರುವುದಾಗಿ ತಿಳಿಸಿ, ಫಿರಾದುದಾರರ ಬಳಿಯಿಂದ ಆಗಾಗ್ಗೆ ಬೆಲೆ ಬಾಳುವ ಚಿನ್ನಾಭರಣಗಳನ್ನು ಪಡೆದುಕೊಂಡು ಹೋಗಿ ಅಡಮಾನವಿಟ್ಟು ಹಣವನ್ನು ಪಡೆದುಕೊಂಡು ಸಮಸ್ಯೆ ಬಗೆಹರಿಸಿಕೊಳ್ಳುತ್ತಿದ್ದಳು ಹಾಗೂ ಪಿರಾದುದಾರರ ಗಮನಕ್ಕೆ ಬಾರದಂತೆ ಮನೆಯಲ್ಲಿಟ್ಟಿದ್ದ ಚಿನ್ನಾಭರಣಗಳನ್ನು ಕಳವು ಮಾಡಿಕೊಂಡು ಪಿರಾದುದಾರರಿಗೆ ನಂಬಿಕೆ ದ್ರೋಹ ಮಾಡಿ ಪರಾರಿಯಾಗಿರುತ್ತಾಳೆಂದು ದೂರಿನಲ್ಲಿ ತಿಳಿಸಿರುತ್ತಾರೆ. ಈ ಕುರಿತು ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಕಳವು ಪ್ರಕರಣ ದಾಖಲಾಗಿರುತ್ತದೆ.

ಈ ಪ್ರಕರಣದ ತನಿಖೆಯನ್ನು ಮುಂದುವರೆಸಿದ ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು ಬಾತ್ಮೀದಾರರಿಂದ ಖಚಿತ ಮಾಹಿತಿಯನ್ನು ಕಲೆಹಾಕಿ, ದಿನಾಂಕ:10/03/2025 ರಂದು ಹಾಸನ ಜಿಲ್ಲೆಯ ದಾಸರಕೊಪ್ಪಲಿನ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಮನೆಕೆಲಸದಾಕೆಯನ್ನು ವಶಕ್ಕೆ ಪಡೆದುಕೊಳ್ಳಲಾಯಿತು. ವಶಕ್ಕೆ ಪಡೆದ ಮಹಿಳೆಯನ್ನು ವಿಚಾರಣೆ ಮಾಡಲಾಗಿ, ಈ ಪ್ರಕರಣದಲ್ಲಿ ಚಿನ್ನಾಭರಣಗಳನ್ನು ಕಳವು ಮಾಡಿರುವುದಾಗಿ ತನ್ನೊಪ್ಪಿಕೊಂಡಿರುತ್ತಾಳೆ ಹಾಗೂ ಆರೋಪಿತೆಯು ಮೂಲತಃ ತಮಿಳುನಾಡು ರಾಜ್ಯದ ಕೊಯಮತ್ತೂರು ಜಿಲ್ಲೆಯವಳಾಗಿರುತ್ತಾಳೆಂದು ತಿಳಿಸಿರುತ್ತಾಳೆ.
ದಿನಾಂಕ:10/03/2025 ರಂದು ಆರೋಪಿತೆಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ, 05 ದಿನಗಳ ಕಾಲ ಪೊಲೀಸ್ ಅಭಿರಕ್ಷೆಗೆ ಪಡೆದುಕೊಳ್ಳಲಾಯಿತು.
ಪೊಲೀಸ್ ಅಭಿರಕ್ಷೆಗೆ ಪಡೆದುಕೊಂಡ ಆರೋಪಿತೆಯನ್ನು ಸುದೀರ್ಘವಾಗಿ ವಿಚಾರಣೆಗೊಳಪಡಿಸಲಾಗಿ, ಪ್ರಕರಣದಲ್ಲಿ ಕಳವು ಮಾಡಿದ್ದ ಚಿನ್ನಾಭರಣಗಳನ್ನು ಹೆಮ್ಮಿಗೆಪುರದಲ್ಲಿರುವ ಗಿರವಿ ಅಂಗಡಿಗಳಲ್ಲಿ ಅಡಮಾನವಿಟ್ಟಿರುವುದಾಗಿ ತಿಳಿಸಿದ್ದು, ದಿನಾಂಕ:13/03/2025 ರಂದು 74 ಗ್ರಾಂ ಚಿನ್ನಾಭರಣವನ್ನು ಗಿರವಿ ಅಂಗಡಿಗಳಿಂದ ವಶಪಡಿಸಿಕೊಳ್ಳಲಾಯಿತು. ಇದರ ಮೌಲ್ಯ 18,00,000/- (ಎಂಟು ಲಕ್ಷ ರೂಪಾಯಿ).
ದಿನಾಂಕ:14/03/2025 ರಂದು ಆರೋಪಿತೆಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಆರೋಪಿತೆಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತೆ.
ಈ ಕಾರ್ಯಾಚರಣೆಯನ್ನು ದಕ್ಷಿಣ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಶ್ರೀ. ಲೋಕೇಶ್ ಜಗಲಾಸ ಐ.ಪಿ.ಎಸ್. ರವರ ಮಾರ್ಗದರ್ಶನದಲ್ಲಿ, ಸುಬ್ರಮಣ್ಯಪುರ ಉಪ-ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀ. ಗಿರೀಶ್ ಎಸ್.ಬಿ ಕೆ.ಎಸ್.ಪಿ.ಎಸ್. ರವರ ನೇತೃತ್ವದಲ್ಲಿ, ತಲಘಟ್ಟಪುರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಶ್ರೀ. ಜಗದೀಶ ಎನ್, ಮತ್ತು ಅಧಿಕಾರಿ/ಸಿಬ್ಬಂದಿಗಳ ತಂಡ ಪ್ರಕರಣವನ್ನು ಪತ್ತೆಮಾಡುವಲ್ಲಿ ಯಶಸ್ವಿಯಾಗಿರುತ್ತಾರೆ.









