ಸೋಲದೇವನಹಳ್ಳಿ ಪೊಲೀಸ್ ಠಾಣೆ ಸರ ದಿನ ಚಿಕ್ಕಬಾಣವಾರದ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ವಾಸವಿರುವ ಪಿರಿಯಾದುದಾರರು ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿದೂರನ್ನು ಸಲ್ಲಿಸಿರುತ್ತಾರೆ.
ಪಿರಿಯಾದುದಾರರು ಸಪ್ತಗಿರಿ ಆಸ್ಪತ್ರೆಯಲ್ಲಿ ಕೆಲಸ ಮಾಡಿಕೊಂಡಿದ್ದು ಆಸ್ಪತ್ರೆ ಪಾರ್ಕಿಂಗ್ ಜಾಗದಲ್ಲಿ ದ್ವಿಚಕ್ರ ವಾಹನವನ್ನು ಬೀಗ ಹಾಕಿ ನಿಲ್ಲಿಸಿ ಹೋಗಿರುತ್ತಾರೆ.
ಆಸ್ಪತ್ರೆಯಲ್ಲಿ ಕರ್ತವ್ಯ ಮುಗಿಸಿಕೊಂಡು ಅದೇ ದಿನ ಸಂಜೆ ಬಂದು ನೋಡಲಾಗಿ ದ್ವಿಚಕ್ರ ವಾಹನವನ್ನು ಯಾರೂ ಅಪರಿಚಿತರು ಕಳವು ಮಾಡಿಕೊಂಡು ಹೋಗಿರುತ್ತಾರೆಂದು ದೂರಿನಲ್ಲಿ ತಿಳಿಸಿರುತ್ತಾರೆ. ಈ ಕುರಿತು ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ ದಾಖಲಾಗಿರುತ್ತದೆ
ಪ್ರಕರಣದ ತನಿಖೆಯನ್ನು ಮುಂದುವರಿಸಿದ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು ಖಚಿತ ಮಾಹಿತಿಯನ್ನು ಕಲೆಹಾಕಿ ಸೋಲದೇವನಹಳ್ಳಿ ಪೊಲೀಸ್ ಠಾಣ ವ್ಯಾಪ್ತಿಯ ಹೆಸರಘಟ್ಟ ಕೆರೆ ರಸ್ತೆಯಲ್ಲಿ ಪ್ರಕರಣದಲ್ಲಿ ಕಳುವು ಮಾಡಿದ ದ್ವಿಚಕ್ರ ವಾಹನ ಸಮೇತ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಳ್ಳಲಾಯಿತು.
ವಶಕ್ಕೆ ಪಡೆದ ವ್ಯಕ್ತಿಯನ್ನು ವಿಚಾರಣೆಗಳು ಪಡಿಸಲಾಗಿ ಈ ಪ್ರಕರಣದಲ್ಲಿ ದ್ವಿಚಕ್ರ ವಾಹನವನ್ನು ಕಳೆದು ಮಾಡಿರುವುದಾಗಿ ಒಪ್ಪಿಕೊಂಡಿರುತ್ತಾನೆ ಹಾಗೂ ಬೆಂಗಳೂರು ನಗರದ ವಿವಿಧ ಕಡೆ ದ್ವಿಚಕ್ರ ವಾಹನಗಳನ್ನು ಕಳುವು ಮಾಡಿರುವುದಾಗಿ ತಿಳಿಸಿರುತ್ತಾನೆ.

ಪೊಲೀಸ್ ಅಭಿವ್ಯರಕ್ಷೆಗೆ ಪಡೆದ ಆರೋಪಿಯನ್ನು ಸುದೀರ್ಘವಾಗಿ ವಿಚಾರಗೊಳಪಡಿಸಲಾಗಿ ಆರೋಪಿಯು ಕಳವು ಮಾಡಿದ ದ್ವಿಚಕ್ರ ವಾಹನಗಳನ್ನು ಆಂಧ್ರಪ್ರದೇಶದ ಹಿಂದೂಪುರದಲ್ಲಿ ತನ್ನ ಪರಿಚಯ ಹೆಸರ ಮನೆ ಪಕ್ಕದ ಖಾಲಿ ಜಾಗದಲ್ಲಿ 19 ದ್ವಿಚಕ್ರ ವಾಹನಗಳನ್ನು ನಿಲ್ಲಿಸಿರುವುದಾಗಿ ತಿಳಿಸಿರುತ್ತಾನೆ
ಆರೋಪಿಗಳು ಮಾಡಿದ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡುವ ಸಲುವಾಗಿ ಹಿಂದುಪುರದಲ್ಲಿರುವ ತನ್ನ ಇಬ್ಬರು ಸ್ನೇಹಿತರಿಗೆ 14 ದ್ವಿಚಕ್ರ ವಾಹನಗಳನ್ನು ನೀಡಿರುವುದಾಗಿ ತಿಳಿಸಿದ್ದು ಅವರಿಗೆ ಹಾಜರು ಪಡಿಸುವಂತೆ ನೋಟಿಸ್ ಜಾರಿ ಮಾಡಿದ್ದು ಓರ್ವ ಸ್ನೇಹಿತರು 7 ದ್ವಿಚಕ್ರ ವಾಹನಗಳನ್ನು ಹಾಗೂ ಮತ್ತೊಬ್ಬ ಸ್ನೇಹಿತ ಏಳು ದ್ವಿಚಕ್ರ ವಾಹನಗಳನ್ನು ಪೊಲೀಸ್ ಠಾಣೆಗೆ ತಂದು ಹಾಜರುಪಡಿಸಿರುತ್ತಾರೆ
ಈ ಪ್ರಕರಣದ ಆರೋಪಿಯ ವಶದಿಂದ ಒಟ್ಟು 34 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿರುತ್ತದೆ.
ಇವುಗಳ ಒಟ್ಟು ಮೌಲ್ಯ 23,50,000/– ರೂಪಾಯಿಗಳು
ಈ ಕಾರ್ಯಾಚರಣೆಯನ್ನು ಉಪಪೋಲಿ ಸಾಯುಕ್ತರು ಉತ್ತರ ವಿಭಾಗ ಶ್ರೀ ಸೈಯದ್ಲ ಅಡಾವತ್ ಐಪಿಎಸ್, ರವರ ಮಾರ್ಗದರ್ಶನದಲ್ಲಿ ಶ್ರೀಮತಿ ಮೇರಿ ಶೈಲಜಾ, ಸಹಾಯಕ ಪೊಲೀಸ್ ಆಯುಕ್ತರು ಯಶವಂತಪುರ ಉಪ ವಿಭಾಗ ರವರ ನೇತೃತ್ವದಲ್ಲಿ, ಸೂಲ ದೇವನಹಳ್ಳಿ ಪೊಲೀಸ್ ಠಾಣೆ ಪೊಲೀಸ್ ಇನ್ಸ್ಪೆಕ್ಟರ್, ಶ್ರೀ ರಘು ಕೆಕೆರವರ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿರುತ್ತಾರೆ.
ವರದಿ
ಶಶಿಕುಮಾರ್ ವಿ









