ದಿನಾಂಕ:15/03/2025 ರಂದು ಮಾರತ್ತಹಳ್ಳಿ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ಬಾತ್ಮೀದಾರರಿಂದ ಖಚಿತ ಮಾಹಿತಿಯೊಂದು ದೊರೆತಿರುತ್ತದೆ. ಮಾಹಿತಿಯಲ್ಲಿ ಠಾಣಾ ಸರಹದ್ದಿನ ಹೋಟೆಲ್ ವೊಂದರ ಹಿಂಭಾಗದ ಖಾಲಿ ಜಾಗದ ಮಣ್ಣಿನ ರಸ್ತೆಯಲ್ಲಿ ಓರ್ವ ವ್ಯಕ್ತಿಯು ನಿಷೇದಿತ ಮಾದಕ ವಸ್ತು ಗಾಂಜಾವನ್ನಿಟ್ಟುಕೊಂಡು ಮಾರಾಟ ಮಾಡಲು ಪ್ರಯತ್ನಿಸುತ್ತಿರುವುದಾಗಿ ಮಾಹಿತಿಯಲ್ಲಿ ತಿಳಿಸಿರುತ್ತಾರೆ. ಈ ಮಾಹಿತಿಯನ್ನಾಧರಿಸಿ ಠಾಣೆಯಲ್ಲಿ ಎನ್.ಡಿ.ಪಿ.ಎಸ್ ಕಾಯ್ದೆಯಡಿಯಲ್ಲಿ ಪ್ರಕರಣವನ್ನು ದಾಖಲಿಸಿ, ಮಾರತ್ತಹಳ್ಳಿ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯವರು ಬಾತ್ಮಿದಾರರು ತಿಳಿಸಿದ ಸ್ಥಳಕ್ಕೆ ಧಾವಿಸಿ, ದಾಳಿ ಮಾಡಿ, ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಳ್ಳಲಾಯಿತು.

ವಶಕ್ಕೆ ಪಡೆದ ವ್ಯಕ್ತಿಯನ್ನು ವಿಚಾರಣೆ ಮಾಡಲಾಗಿ, ಓಡಿಸ್ಸಾ ರಾಜ್ಯದಿಂದ ಕಡಿಮೆ ಬೆಲೆಗೆ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಖರೀದಿ ಮಾಡಿಕೊಂಡು ಬಂದು, ಸಾರ್ವಜನಿಕರಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಿ, ಅಧಿಕ ಲಾಭ ಗಳಿಸುವ ಉದ್ದೇಶದಿಂದ ಈ ಕೃತ್ಯವೆಸಗಿರುವುದಾಗಿ ತನ್ನೊಪ್ಪಿಕೊಂಡಿರುತ್ತಾನೆ. ಆತನ ವಶದಲ್ಲಿದ್ದ 10 ಕೆ.ಜಿ 140 ಗ್ರಾಂ ಗಾಂಜಾ ಮತ್ತು ಕೃತ್ಯಕ್ಕೆ ಬಳಸಿದ ಒಂದು ದ್ವಿ-ಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿರುತ್ತದೆ. ಗಾಂಜಾದ ಮೌಲ್ಯ * 4,40,000/- (ನಾಲ್ಕು ಲಕ್ಷದ ನಲವತ್ತು ಸಾವಿರ ರೂಪಾಯಿ).

ದಿನಾಂಕ:15/03/2025 ರಂದು ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತೆ.
ಈ ಕಾರ್ಯಾಚರಣೆಯನ್ನು ಉಪ ಪೊಲೀಸ್ ಆಯುಕ್ತರು, ವೈಟ್ ಫೀಲ್ಡ್ ಡಾ:ಶಿವಕುಮಾರ್ ಗುಣಾರೇ, ಐಪಿಎಸ್ ಸಹಾಯಕ ಪೊಲೀಸ್ ಆಯುಕ್ತರು, ಮಾರತ್ತಹಳ್ಳಿ ಉಪ ವಿಭಾಗ ಶ್ರೀಮತಿಪ್ರಿಯದರ್ಶಿನಿ ಈಶ್ವರ್ ಸಾಣೇಕೊಪ್ಪ ರವರ ಮಾರ್ಗದರ್ಶನದಲ್ಲಿ ಮಾರತ್ತಹಳ್ಳಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಶ್ರೀ.ಅನಿಲ್ ಕುಮಾರ್ ಪಿ.ಎನ್ಹಾಗೂ ಇತರೆ ಅಧಿಕಾರಿ/ಸಿಬ್ಬಂದಿರವರ ತಂಡ ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.









