ಗಿರಿನಗರ ಪೊಲೀಸ್ ಠಾಣಾ ಸರಾ ದಿನ ಬನಶಂಕರಿ ಮೂರನೇ ಹಂತದಲ್ಲಿ ವಾಸವಿರುವ ಪಿರಿಯಾದುದಾರರು ಗಿರಿನಗರ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ
ಪಿರಿಯಾದುದಾರರು ಪತ್ನಿಯ ಜೊತೆ ಕೆಲಸದ ನಿಮಿತ್ತ ಮುಂಬೈಗೆ ತೆರಳಿದ್ದು ವಾಪಸ್ ಬಂದು ನೋಡಲಾಗಿ ಮನೆಯಲ್ಲಿಟ್ಟಿದ್ದ ಗೋದ್ರೆಜ್ ಲಾಕರನ್ನು ತೆಗೆಯಲು ಹೋದಾಗ ಲಾಕರ್ನ ಬಾಗಿಲು ತೆರೆದಿರುವುದು ಕಂಡುಬಂದಿರುತ್ತದೆ ಲಾಕರ್ ನಲ್ಲಿಟ್ಟಿದ್ದ 325 ಗ್ರಾಂ ಚಿನ್ನಾಭರಣಗಳು ಕಾಣೆಯಾಗಿರುತ್ತವೆ
ಪ್ರಕರಣದ ತನಿಖೆಯನ್ನು ಕೈಗೊಂಡ ಗಿರಿನಗರ ಪೊಲೀಸರು ಪಿರಿಯಾದುದಾರರ ಪತ್ನಿಯ ತಂಗಿಯ ಒಂದು ಕಂಪನಿಯಲ್ಲಿ ಉದ್ಯೋಗಿಯಾಗಿದ್ದವನನ್ನು ವಶಕ್ಕೆ ಪಡೆದು ವಿಚಾರಣೆ ಪಡಿಸಿದಾಗ ಈ ಪ್ರಕರಣದಲ್ಲಿ ಚಿನ್ನಾಭರಣಗಳನ್ನು ಕಳುವು ಮಾಡಿರುವುದಾಗಿ ತಪ್ಪು ಒಪ್ಪಿಕೊಂಡಿರುತ್ತಾನೆ
ಕಳುವು ಮಾಡಿದ ಚಿನ್ನಾಭರಣಗಳನ್ನು ಸ್ನೇಹಿತನ ಮುಖಾಂತರ ಬೆಂಗಳೂರಿನ ಪ್ಯಾಲೇಸ್ ಗುಟ್ಟ ಹಳ್ಳಿಯಲ್ಲಿರುವ ಎರಡು ಜ್ಯುವೆಲ್ಲರಿ ಅಂಗಡಿಗಳಲ್ಲಿ ಮತ್ತು ಚೆನ್ನೈನಲ್ಲಿರುವ ಜುವೆಲ್ಲರಿ ಅಂಗಡಿಯೊಂದರಲ್ಲಿ ಮಾರಾಟ ಮಾಡಿರುವುದಾಗಿ ಆರೋಪಿ ತಿಳಿಸಿರುತ್ತಾನೆ
ಪೊಲೀಸರು ಎರಡು ಜೆವೆಲ್ಲರಿ ಅಂಗಡಿಯ ಮಾಲೀಕರಿಗೆ ನೋಟಿಸ್ ಜಾರಿ ಮಾಡಿ ಆರೋಪಿತನು ಮಾರಿದ್ದ ಚಿನ್ನಾಭರಣಗಳನ್ನು ಜೆವೆಲರಿ ಅಂಗಡಿ ಮಾಲೀಕರಿಂದ 258 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಯಿತು
ಈ ಕಾರ್ಯಚರಣೆಯನ್ನು ದಕ್ಷಿಣ ವಿಭಾಗದ ಉಪ ಪೊಲೀಸ್ ಆಯುಕ್ತರದ ಲೋಕೇಶ್ ಭರಮಪ್ಪ ಹಾಗೂ ವಿವಿ ಪುರಂ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರದ ಸಮೀದ್ ಪಾಷಾ ರವರ ಮಾರ್ಗದರ್ಶನದಲ್ಲಿ ಗಿರಿನಗರ ಪೊಲೀಸ್ ಇನ್ಸ್ಪೆಕ್ಟರ್ ಸತೀಶ್ ಕುಮಾರ್ ಹಾಗೂ ಅಧಿಕಾರಿ ಸಿಬ್ಬಂದಿಗಳ ತಂಡ ಪ್ರಕರಣವನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿರುತ್ತಾರೆ.









