ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿಶ್ವಪ್ರಿಯ ಲೇಔಟ್ ನಲ್ಲಿ ಮನೆಯ ಕಳ್ಳತನ ಆಗಿರುವ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ
ಪ್ರಕರಣದ ತನಿಖೆಯನ್ನು ಮುಂದುವರಿಸಿದ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು ಖಚಿತ ಮಾಹಿತಿ ಮೇರೆಗೆ ಪರಪ್ಪನ ಅಗ್ರಹಾರದಲ್ಲಿರುವ ಬಾಸ್ ಕಂಪನಿಯ ಹತ್ತಿರ ಒಬ್ಬ ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ಮಾಡಲಾಗಿ ಚಿನ್ನಾಭರಣ ಮತ್ತು ನಗುದುವನ್ನು ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿರುತ್ತಾನೆ
ಬಾಲಕನೊಂದಿಗೆ ಸೇರಿಕೊಂಡು ಮಡಿವಾಳ, ಬೇಗೂರು ಮತ್ತು ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯ ಮನೆಗಳಲ್ಲಿ ಮನೆಕಳು ಮತ್ತು ದ್ವಿಚಕ್ರ ವಾಹನ ಕಳುವು ಮಾಡಿರುವುದಾಗಿ ತಿಳಿಸಿರುತ್ತಾನೆ
ಚಿನ್ನಾಭರಣಗಳನ್ನು ಕಾಟನ್ ಪೇಟೆಯಲ್ಲಿರುವ ಮುತ್ತುಟ್ ಗೋಲ್ಡ್ ಫೈನಾನ್ಸ್ ಕಂಪನಿ ಮತ್ತು ಜುವೆಲ್ಲರಿ ಅಂಗಡಿ ಒಂದರಲ್ಲಿ ಅಡಮಾನ ಇಟ್ಟಿರುವುದಾಗಿ ಹಾಗೂ ಕಳುವು ಮಾಡಿರುವ ಎರಡು ದ್ವಿಚಕ್ರ ವಾಹನವನ್ನು ತಾನೇ ಉಪಯೋಗಿಸುತ್ತಿರುವುದಾಗಿ ಆರೋಪಿಯು ತಿಳಿಸಿರುತ್ತಾನೆ
ಒಟ್ಟಾರೆಯಾಗಿ ಪ್ರಕರಣದಲ್ಲಿ 7 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳನ್ನು ಆರೋಪಿಯಿಂದ ಬೇಗೂರು ಪೊಲೀಸರು ವಶಪಡಿಸಿಕೊಂಡಿರುತ್ತಾರೆ
ಈ ಪ್ರಕರಣದ ಆರೋಪಿಗಳ ಬಂದನದಿಂದ ಬೇಗೂರು, ಮಡಿವಾಳ, ಹಲಸೂರು ಗೇಟ್, ಹುಳಿಮಾವು, ಪೊಲೀಸ್ ಠಾಣೆಗಳ ಒಟ್ಟು ಆರು ಪ್ರಕರಣಗಳು ಪತ್ತೆ ಆಗಿರುತ್ತವೆ
ಈ ಕಾರ್ಯಚರಣೆಯನ್ನು ಆಗ್ನೇ ವಿಭಾಗದ ಉಪ ಪೊಲೀಸ್ ಆಯುಕ್ತರದ ಸಾರ ಫಾತಿಮಾ ಐಪಿಎಸ್ ರವರ ಮಾರ್ಗದರ್ಶನದಲ್ಲಿ ಮತ್ತು ಎಲೆಕ್ಟ್ರಾನಿಕ್ ಸಿಟಿ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಕೆಎಂ ಸತೀಶ್ರವರ ನೇತೃತ್ವದಲ್ಲಿ ಬೇಗೂರು ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಕೃಷ್ಣಕುಮಾರ್ ಹಾಗೂ ಸಿಬ್ಬಂದಿಗಳ ತಂಡ ಈ ಪ್ರಕರಣವನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿರುತ್ತಾರೆ.
ವರದಿ
ಶಶಿಕುಮಾರ್ ವಿ









