ಬಾಣಸವಾಡಿ ಪೊಲೀಸರಿಂದ ಚಿನ್ನದ ಸರಗಳನ್ನು ಕಳುವು ಮಾಡುತ್ತಿದ್ದ ನಾಲ್ವರು ಮಹಿಳೆಯರನ್ನು ಬಂಧಿಸಿ ಬಂಧಿತರಿಂದ 14 ಲಕ್ಷ ಮೌಲ್ಯದ 140 ಗ್ರಾಂ ಚಿನ್ನದ ಸರಗಳನ್ನು ವಶಪಡಿಸಿಕೊಂಡಿರುತ್ತಾರೆ.
ಬಾಣಸವಾಡಿಯಲ್ಲಿ ನಡೆಯುವ ಶ್ರೀ ಜಗನ್ನಾಥ ಸ್ವಾಮಿ ರಥೋತ್ಸವವನ್ನು ನೋಡಲು ಬಂದಿದ್ದ ಮಹಿಳೆಯ ಕೊರಳಿನಲ್ಲಿದ್ದ 48 ಗ್ರಾಂ ಚಿನ್ನದ ಮಾಂಗಲ್ಯ ಸರವನ್ನು ಕಳುವು ಮಾಡಿಕೊಂಡು ಹೋಗಿರುತ್ತಾರೆಂದು ದೂರನ್ನು ಸಲ್ಲಿಸಿರುತ್ತಾರೆ
ಪ್ರಕರಣದ ತನಿಖೆಯನ್ನು ಮುಂದುವರಿಸಿದ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು ಖಚಿತ ಮಾಹಿತಿಯನ್ನು ಕಲೆ ಹಾಕಿ ನಾಲ್ವರು ಮಹಿಳೆಯರೆಯನ್ನು ಎಲೆಕ್ಟ್ರಾನಿಕ್ ಸಿಟಿಯ ಹುಸ್ಕೂರು ಗೇಟ್ ಬಳಿ ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿ ಈ ಪ್ರಕರಣದಲ್ಲಿ ಭಾಗಿಯಾಗಿರುವುದಾಗಿ ತಪ್ಪು ಒಪ್ಪಿಕೊಂಡಿರುತ್ತಾರೆ
ಈ ಪ್ರಕರಣದಲ್ಲಿ ಕಳುವು ಮಾಡಿದ ಚಿನ್ನದ ಸರಗಳನ್ನು ಆರೋಪಿಗಳ ಓರ್ವಳ ವಾಸದ ಮನೆಯಲ್ಲಿಟ್ಟಿರುವುದಾಗಿ ಆರೋಪಿಗಳು ತಿಳಿಸಿರುತ್ತಾರೆ
ಯಡವನಹಳ್ಳಿಯ ಚರ್ಚ್ ಬಳಿ ಇರುವ ಆರೋಪಿ ಒಬ್ಬಳ ವಾಸದ ಮನೆಯಿಂದ 140 ಗ್ರಾಂ ಚಿನ್ನದ ಮಾಂಗಲ್ಯ ಸರಗಳನ್ನು ವಶಪಡಿಸಿಕೊಂಡಿರುತ್ತಾರೆ
ಈ ಪ್ರಕರಣದ ಆರೋಪಿತರ ಬಂದದಿಂದ ಬಾಣಸವಾಡಿ ಪೊಲೀಸ್ ಠಾಣೆಯ ಮೂರು ಕಳವು ಪ್ರಕರಣಗಳು ಪತ್ತೆಯಾಗಿರುತ್ತವೆ
ಈ ಕಾರ್ಯಾಚರಣೆಯನ್ನು ಪೂರ್ವ ವಿಭಾಗದ ಡಿಸಿಪಿ ದೇವರಾಜ್ ಐಪಿಎಸ್ ರವರ ಮಾರ್ಗದರ್ಶನದಲ್ಲಿ ಬಾಣಸವಾಡಿ ಉಪವಿಭಾಗದ ಎಸಿಪಿ ಉಮಾಶಂಕರ್ ಎಚ್ಎಂ ರವರ ನೇತೃತ್ವದಲ್ಲಿ ಬಾಣಸವಾಡಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಅರುಣ್ ಸಾಳುಂಕೆ ಹಾಗೂ ಇತರೆ ಅಧಿಕಾರಿ ಸಿಬ್ಬಂದಿಗಳ ತಂಡ ಪ್ರಕರಣವನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿರುತ್ತಾರೆ.
ವರದಿ
ಶಶಿಕುಮಾರ್ ವಿ









