ಗಿರಿನಗರ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ನ್ಯೂ ಬೀಡಿ ಲೇಔಟ್ ನಲ್ಲಿ ಹೊಸ ವಿರುವ ವ್ಯಕ್ತಿಯೊಬ್ಬರು ಮನೆಯಲ್ಲಿ ಕಳ್ಳತನವಾಗಿರುವ ಬಗ್ಗೆ ದೂರನ್ನು ಸಲ್ಲಿಸಿರುತ್ತಾರೆ
ದೂರಿನಲ್ಲಿ ಮನೆಯ ಮುಂಭಾಗದಲ್ಲಿನ ಬೀಗವನ್ನು ಹಾಕಿಕೊಂಡು ಕೆಲಸಕ್ಕೆ ಹೋಗಿದ್ದು ಕೆಲಸ ಮುಗಿಸಿಕೊಂಡು ರಾತ್ರಿ ವಾಪಸ್ ಬಂದು ನೋಡಲಾಗಿ ಯಾರೋ ಕಳ್ಳರು ಮನೆಯ ಡೋರ್ ಲಾಕ್ ಅನ್ನು ಮುರಿದು ಕೊಠಡಿಯಲ್ಲಿದ್ದ ಬಿರುವಿನ ಬೇಗುವನ್ನು ಮುರಿದು ಬಿರುವಿನಲ್ಲಿಟ್ಟಿದ್ದ 105 ಗ್ರಾಂ ಚಿನ್ನಾಭರಣ ಮತ್ತು ಬೆಳ್ಳಿ ವಸ್ತುಗಳನ್ನು ಕಳುವು ಮಾಡಿಕೊಂಡು ಹೋಗಿರುವ ಬಗ್ಗೆ ದೂರನ್ನು ಸಲ್ಲಿಸಿರುತ್ತಾರೆ. ಈ ಕುರಿತು ಗಿರಿನಗರ ಪೊಲೀಸ್ ಠಾಣೆಯಲ್ಲಿ ಒಂದು ಕಳುವು ಪ್ರಕರಣ ದಾಖಲಾಗಿರುತ್ತದೆ
ಪ್ರಕರಣದ ತನಿಖೆಯನ್ನು ಮುಂದುವರಿಸಿದ ಗಿರಿನಗರ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು ಆರೋಪಿಯ ಖಚಿತ ಮಾಹಿತಿಯನ್ನು ಕಲೆ ಹಾಕಿದ ಪೊಲೀಸರು ಹೊಸಕೆರೆಹಳ್ಳಿಯ ಕೆರೆಕೋಡಿ ಬಸ್ ನಿಲ್ದಾಣದ ಬಳಿ ಒಬ್ಬ ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು ವಿವಿಧ ಆಯಾಮಗಳಲ್ಲಿ ವಿಚಾರಣೆಗೊಳಪಡಿಸಿ ಈ ಪ್ರಕರಣದಲ್ಲಿ ಚಿನ್ನಾಭರಣ ಮತ್ತು ಬೆಳ್ಳಿ ವಸ್ತುಗಳನ್ನು ಕಳುವು ಮಾಡಿರುವುದಾಗಿ ಆರೋಪಿಯು ತಪ್ಪು ಒಪ್ಪಿಕೊಂಡಿರುತ್ತಾನೆ
ಆರೋಪಿಯು ಕಳುವು ಮಾಡಿದ ಆಭರಣಗಳನ್ನು ಬೆಂಗಳೂರು ಹಾಗೂ ತುಮಕೂರಿನ ಜ್ಯುವೆಲ್ಲರಿ ಅಂಗಡಿಗಳಲ್ಲಿ ಮಾರಾಟ ಮಾಡಿರುತ್ತಾನೆ
ತನಿಖೆಯನ್ನು ಮುಂದುವರಿಸಿ ಬೆಂಗಳೂರು ಹಾಗೂ ತುಮಕೂರಿನ ಜುವೆಲ್ಲರಿ ಅಂಗಡಿಗಳಲ್ಲಿ ಮಾರಾಟ ಮಾಡಿದ್ದ 10 ಲಕ್ಷ ಮೌಲ್ಯ 117 ಗ್ರಾಂಚಿನ್ನಾಭರಣಗಳನ್ನು ಗಿರಿನಗರ ಪೊಲೀಸರು ವಶಕ್ಕೆ ಪಡೆದು, ಆರೋಪಿಯ ಬಂಧನದಿಂದ ಗಿರಿನಗರ ಪೊಲೀಸ್ ಠಾಣೆಯ 2 ಮನೆಗಳು ಪ್ರಕರಣಗಳು ಪತ್ತೆಯಾಗಿರುತ್ತವೆ.
ಈ ಕಾರ್ಯಾಚರಣೆಯಲ್ಲಿ ದಕ್ಷಿಣ ವಿಭಾಗದ ಉಪ ಪೊಲೀಸ್ ಆಯುಕ್ತರದ ಲೋಕೇಶ್ ಬರಮಪ್ಪ ಜಗಳ ಸರ್ ಹಾಗೂ ವಿವಿ ಪುರಂ ಉಪ ವಿಭಾಗದ ಎಸಿಪಿ ಸಮೀದ್ ಭಾಷಾ ರವರ ಮಾರ್ಗದರ್ಶನದಲ್ಲಿ ಗಿರಿನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಸತೀಶ್ ಕುಮಾರ್ ಹಾಗೂ ಇಲಾಖೆಯ ಅಧಿಕಾರಿ ಸಿಬ್ಬಂದಿಗಳ ತಂಡ ಈ ಪ್ರಕರಣವನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿರುತ್ತಾರೆ.
ವರದಿ
ಶಶಿಕುಮಾರ್ ವಿ
ನಮ್ಮ ಪೊಲೀಸ್ ನ್ಯೂಸ್









