ಸರಕಾರಿ ಗುರುತಿನ ಚೀಟಿಗಳು, ನಕಲಿ ಅಂಕಪಟ್ಟಿಗಳು, ಆಧಾರ್ ಕಾರ್ಡ್ಗಳನ್ನು ಮಾರ್ಪಡಿಸಿ ಮತ್ತು ತಿದ್ದಿ ನೀಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಬೆಂಗಳೂರು ನಗರದ ಹೆಬ್ಬಗೋಡಿ ಪೊಲೀಸರು ಬಂಧಿಸಿದ್ದಾರೆ.

ಠಾಣಾ ವ್ಯಾಪ್ತಿಯ ಭವಾನಿ ರಸ್ತೆಯಲ್ಲಿರುವ ಕಂಪ್ಯೂಟರ್ ಅಂಗಡಿಯೊಂದರಲ್ಲಿ ದಾಖಲೆಗಳನ್ನು ತಿದ್ದುವ ಬಗ್ಗೆ ಖಚಿತ ಮಾಹಿತಿ ಲಭಿಸಿದೆ. ಪೊಲೀಸರು ದಾಳಿ ನಡೆಸಿ, ಅಂಗಡಿಯಲ್ಲಿದ್ದ ಒಬ್ಬ ವ್ಯಕ್ತಿ ಮತ್ತು ಅಂಗಡಿಯ ಮಾಲೀಕರನ್ನೂ ಸಹ ಬಂಧಿಸಿದ್ದಾರೆ. ಮಾಲೀಕ ಕೂಡ ಪ್ರಕರಣದಲ್ಲಿ ಭಾಗಿಯಾಗಿರುವುದಾಗಿ ಒಪ್ಪಿಕೊಂಡಿದ್ದಾನೆ. ಅಂಗಡಿಯಿಂದ ಒಂದು ಕಂಪ್ಯೂಟರ್, ಒಂದು ಪ್ರಿಂಟರ್, ಒಂದು ಲ್ಯಾಮಿನೇಷನ್ ಯಂತ್ರ, ಒಂದು ಹಾರ್ಡ್ ಡಿಸ್ಕ್, ಮೊಬೈಲ್ ಫೋನ್ಗಳು, ₹2,000 ನಗದು ಮತ್ತು ನಕಲಿ ಆಧಾರ್ ಕಾರ್ಡ್ಗಳು ಹಾಗೂ ಅಂಕಪಟ್ಟಿಗಳನ್ನು ವಶಪಡಿಸಿಕೊಳ್ಳಲಾಗಿದೆ.
ಈ ಕಾರ್ಯಾಚರಣೆಯು ಎಲೆಕ್ಟ್ರಾನಿಕ್ ಸಿಟಿ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಶ್ರೀ ನಾರಾಯಣ್.ಎಂ ಮತ್ತು ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀ ಕೆ.ಎಂ. ಸತೀಶ್ ಅವರ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿದೆ. ಹೆಬ್ಬಗೋಡಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಶ್ರೀ ಸೋಮಶೇಖರ್ ಹಾಗೂ ಇತರೆ ಸಿಬ್ಬಂದಿಗಳ ತಂಡ ಈ ಪ್ರಕರಣವನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದೆ.ವರದಿ :- ಮೋಹನ್ ಕುಮಾರ್ ಎಸ್ ನಾಯ್ಕ್









