ಹೊಸಕೋಟೆ ಪೊಲೀಸರ ಬಲೆಗೆ ಬಿದ್ದ ಐದು ಜನರ ಖತರ್ನಾಕ್ ಗ್ಯಾಂಗ್
ಹೊಸಕೋಟೆ, ನಂದಗುಡಿ, ಶಿಡ್ಲಘಟ್ಟದಲ್ಲಿ ಎಂಟು ಮಂದಿಗೆ 64 ಲಕ್ಷ ವಂಚನೆ
ಬೆಂಗಳೂರು ಹೊರಹೊಲಯವೇ ಇವರ ಟಾರ್ಗೆಟ್ ಏರಿಯಾಗಳು
ಹೊಸಕೋಟೆ ಠಾಣಾ ವ್ಯಾಪ್ತಿಯ ಸಂತೋಷ್ ಎಂಬ ವ್ಯಕ್ತಿಗೆ ಅಸಲಿ ಚಿನ್ನ ಕೊಡುತ್ತೇವೆ ಅಂತ ಹೇಳಿ ನಕಲಿ ಚಿನ್ನವನ್ನು ಕೊಟ್ಟು ಹದಿನೈದು ಲಕ್ಷ ರೂಪಾಯಿ ಪಡೆದು ವಂಚಿಸಿದ ಬಗ್ಗೆ ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಪ್ರಕರಣ ದಾಖಲಾದ ದಿನವೇ ಆರೋಪಿಗಳು ಅಂದರ್
ತೆಲುಗು ಭಾಷೆ ಮಾತಾಡುವ ಜನರೇ ಇವರ ಟಾರ್ಗೆಟ್
ಆತ್ಮೀಯ ಪರಿಚಿತರಂತೆ ಬಿಲ್ಡಪ್ ಕೊಟ್ಟು ಬ್ರೈನ್ ವಾಶ್
ಕೇರಳದ ಒಂದು ಜಾಗದಲ್ಲಿ ಭೂಮಿ ಕೆಲಸ ಮಾಡುವಾಗ ಚಿನ್ನದ ಹಾರ ಸಿಕ್ಕಿದೆ
ಅದು ರಾಜಮಹಾರಾಜರ ಕಾಲದ ಚಿನ್ನದ ಹಾರ, ಕಡಿಮೆ ರೇಟಿಗೆ ಮಾರುತ್ತವೆ ಎಂದು ಹೇಳಿ
ಹೀಗೆ ವ್ಯಕ್ತಿಗಳನ್ನ ಬ್ರೈನ್ ವಾಶ್ ಮಾಡಿ ಮೊಬೈಲ್ ನಲ್ಲಿ ನಕಲಿ ಚಿನ್ನದ ಹಾರವನ್ನು ತೋರಿಸೋದು
ನಂಬಿಕೆ ಬರಲಿ ಅಂತ ಎರಡು ಚಿನ್ನದ ಅಸಲಿ ಗುಂಡುಗಳನ್ನ ತೋರಿಸಿ ಇದು ಸರದ ತುದಿಯ ಗುಂಡುಗಳು ಎಂದು ನಂಬಿಸುವುದು
ಎಂಟು ಕೆಜಿ ಚಿನ್ನದ ಹಾರವನ್ನು ಕಡಿಮೆ ಬೆಲೆಗೆ ಕೊಡ್ತೇವೆಂದು ಯಾಮಾರಿಸಿ ಹಣ ಪಡೆದು ವಂಚನೆ
ಎಲ್ಲಾ ಮೊಬೈಲ್ ನಲ್ಲೇ ನೋಡಿ ವಿಡಿಯೋ ಕಾಲ್ ಮೂಲಕ ಜಾಗ ಪಿಕ್ಸ್
ಈ ಮೂಲಕ ನಕಲಿ ಚಿನ್ನದ ಸರವನ್ನು ಅಸಲಿ ಚಿನ್ನದ ಸರ ಅಂತ ಕೊಟ್ಟು ಎಸ್ಕೇಪ್
ಮನೆಗೆ ಹೋಗಿ ಪರಿಶೀಲಿಸಿದ್ದ ಹಣ ಕೊಟ್ಟಿದ್ದ ವ್ಯಕ್ತಿಗಳು ಶಾಕ್
ಮೋಸ ಹೋದ ವಿಷಯ ಗೊತ್ತಾಗಿ ಹೊಸಕೋಟೆ ಪೊಲೀಸ್ ಠಾಣೆಗೆ ದೂರು
ಸದ್ಯ ಪೊಲೀಸ್ರಿಂದ ಪ್ರಮುಖ ಆರೋಪಿ ರಾಜೇಶ್ ಎಂಬಾತ ಸೇರಿ ನಾಲ್ವರ ಬಂಧನ
63 ಲಕ್ಷ ಮೌಲ್ಯದ ನಗದು ಎಂಟು ಕೆಜಿ ನಕಲಿ ಚಿನ್ನ ಕೃತ್ಯಕ್ಕೆ ಬಳಸಿದ್ದ ಕಾರು ಹಾಗೂ ಲಾಂಗು ಮಚ್ಚುಗಳನ್ನು ವಶಪಡಿಸಿಕೊಂಡ ಪೊಲೀಸರು
ಈ ಕಾರ್ಯಚರಣೆಯನ್ನು ಬೆಂಗಳೂರು ಗ್ರಾಮಾಂತರ ಎಸ್ ಪಿ ಸಿ ಕೆ ಬಾಬಾ, ಅಪಾರ ಪೊಲೀಸ್ ಅಧೀಕ್ಷಕರಾದ ವೆಂಕಟೇಶ್ ಪ್ರಸನ್ನ, ಮತ್ತು ನಾಗರಾಜ್ ರವರ ಮಾರ್ಗದರ್ಶನದಲ್ಲಿ ಹೊಸಕೋಟೆ ಉಪವಿಭಾಗದ ಡಿವೈಎಸ್ಪಿ ಮಲ್ಲೇಶ್ ಎಂ ರವರ ಹಾಗೂ ಹೊಸಕೋಟೆ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಗೋವಿಂದ್ ಬಿಟಿ ರವರ ನೇತೃತ್ವದಲ್ಲಿ ಸಬ್ ಇನ್ಸ್ಪೆಕ್ಟರ್ ಮುನಿರಾಜು, ಎಎಸ್ಐ ಶಂಕರ್, ಕೆ ಮಂಜು, ಹೆಡ್ ಕಾನ್ಸ್ಟೇಬಲ್ಗಳದ ದತ್ತಾತ್ರೇಯ, ರಮೇಶ್, ಗೋಪಾಲಕೃಷ್ಣ, ವನಿತಾ, ನಾರಾಯಣ್, ಜಗನ್ನಾಥ್, ಧನಶೇಖರ್, ಅಂಬರೀಶ್ , ಬಸವರಾಜ್ ಬಕಾಲಿ, ಮಂಜುನಾಥ ಅಕ್ಕಿ, ಮಹಾಂತಪ್ಪ ಬಿರಾದರ್,
ಮಿಂಚಿನ ಕಾರ್ಯಾಚರಣೆ ನಡೆಸಿ ಪ್ರಕರಣ ದಾಖಲಾದ ದಿನದಂದು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿರುತ್ತಾರೆ.
ವರದಿ
ಶಶಿಕುಮಾರ್ ವಿ









