ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಮನೆ ಕಳುವು ಆಗಿರುವ ಬಗ್ಗೆ ದೂರುದಾರರು ದೂರನ್ನು ಸಲ್ಲಿಸಿದ್ದು ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಕನ್ನ ಕಳುವು ಪ್ರಕರಣವನ್ನು ದಾಖಲು ಮಾಡಿರುತ್ತಾರೆ
ಪ್ರಕರಣದ ತನಿಖೆಯನ್ನು ಮುಂದುವರಿಸಿ ತನಿಖೆಯನ್ನು ಕೈಗೊಂಡು ಖಚಿತ ಮಾಹಿತಿಯ ಮೇರೆಗೆ ಓರ್ವ ಆರೋಪಿಯನ್ನು ಘಟ್ಟ ಹಳ್ಳಿಯಲ್ಲಿರುವ ಆರೋಪಿಯ ಮನೆಯ ಬಳಿ ಬಂಧಿಸಿ ವಶಕ್ಕೆ ಪಡೆದ ಆರೋಪಿಯನ್ನು ವಿಚಾರಣೆಗೊಳಪಡಿಸಿದ ಪೊಲೀಸರು ಈ ಪ್ರಕರಣದಲ್ಲಿ ಭಾಗಿಯಾಗಿರುವುದಾಗಿ ತಪ್ಪು ಒಪ್ಪಿಕೊಂಡಿರುತ್ತಾನೆ.

ಆರೋಪಿಯನ್ನು ಸುಧೀರ್ಘವಾಗಿ ವಿಚಾರಣೆಗೆ ಒಳಪಡಿಸಿದ ಪೊಲೀಸರು ಕಳುವು ಮಾಡಿದ ಚಿನ್ನಾಭರಣ ಹಾಗೂ ನಗದನ್ನು ಪರಪ್ಪನ ಅಗ್ರಹಾರದಲ್ಲಿರುವ ಮುತ್ತುಟ್ ಫೈನಾನ್ಸ್ ನಲ್ಲಿ ಮತ್ತು ಸೂರ್ಯ ಸಿಟಿಯಲ್ಲಿರುವ ಬ್ಯಾಂಕ್ ಒಂದರಲ್ಲಿ ನಗದನ್ನು ಇಟ್ಟಿರುವುದಾಗಿ ಹಾಗೂ ಬನ್ನೇರುಘಟ್ಟದಲ್ಲಿ ವಾಸವಿರುವ ಆತನ ಸ್ನೇಹಿತೆಗೆ ಚಿನ್ನಾಭರಣಗಳನ್ನು ನೀಡಿರುವುದಾಗಿ ಆರೋಪಿಯು ತಿಳಿಸಿದ್ದು
ತನಿಖೆಯನ್ನು ಮುಂದುವರಿಸಿ ಆರೋಪಿಯು ತಿಳಿಸಿದ ವಿಳಾಸಗಳಿಂದ ಒಟ್ಟು 47 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ಹಾಗೂ 3.5 ಲಕ್ಷ ಮೌಲ್ಯದ ನಗದನ್ನು ವಶಪಡಿಸಿಕೊಂಡಿರುತ್ತಾರೆ.

ಮತ್ತೊಂದು ಪ್ರಕರಣ ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕೆರೆಯ ಬಳಿ ವಾಕ್ ಮಾಡುತ್ತಿದ್ದ ಸಂದರ್ಭದಲ್ಲಿ ಅಪರಿಚಿತ ವ್ಯಕ್ತಿ ಒಬ್ಬ ಕತ್ತಿನಲ್ಲಿದ್ದ ಚಿನ್ನದ ಸರವನ್ನು ಕಿತ್ತುಕೊಂಡು ಓಡಿಹೋಗಿರುತ್ತಾನೆ ಎಂದು ದೂರನ್ನು ಸಲ್ಲಿಸಿದ್ದು ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಸುಲಿಗೆ ಪ್ರಕರಣ ದಾಖಲಾಗಿರುತ್ತದೆ
ಪ್ರಕರಣದ ತನಿಖೆಯನ್ನು ಮುಂದುವರಿಸಿದ ಪೊಲೀಸರು ಒಬ್ಬ ಆರೋಪಿಯನ್ನು ಗೊಲ್ಲಹಳ್ಳಿಯಲ್ಲಿ ಬಂಧಿಸಿ ಆರೋಪಿಯಿಂದ ಹಾಸನದ ಜ್ಯುವೆಲರಿ ಅಂಗಡಿಯಲ್ಲಿ ಅಡಮಾನ ಇಟ್ಟಿದ್ದ ಒಂಬತ್ತು ಲಕ್ಷ ರೂಪಾಯಿ ಮೌಲ್ಯದ 86 ಗ್ರಾಂ ಚಿನ್ನದ ಸರವನ್ನು ವಶಪಡಿಸಿಕೊಂಡರು
ಈ ಕಾರ್ಯಾಚರಣೆಗಳಲ್ಲಿ ಇಬ್ಬರು ಆರೋಪಿಗಳ ಬಂಧನದಿಂದ 52 ಲಕ್ಷ ಮೌಲ್ಯದ 502 ಗ್ರಾಂ ಚಿನ್ನಾಭರಣ 3.5 ಲಕ್ಷ ನಗದು ವಶ ಪಡಿಸಿಕೊಳ್ಳುವಲ್ಲಿ ಪೊಲೀಸರು ಯಶಸ್ವಿಯಾಗಿರುತ್ತಾರೆ

ಈ ಕಾರ್ಯಾಚರಣೆಯಲ್ಲಿ ಎಲೆಕ್ಟ್ರಾನಿಕ್ ಸಿಟಿ ವಿಭಾಗದ ಡಿಸಿಪಿ ನಾರಾಯಣ್ ಎಂ ಐಪಿಎಸ್ರವರ ಮಾರ್ಗದರ್ಶನದಲ್ಲಿ ಎಲೆಕ್ಟ್ರಾನಿಕ್ ಸಿಟಿ ಎಸಿಪಿ ಕೆಎಂ ಸತೀಶ್ರವರ ನೇತೃತ್ವದಲ್ಲಿ ಹೆಬ್ಬಗೋಡಿ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಸೋಮಶೇಖರ್ ಹಾಗೂ ಸಿಬ್ಬಂದಿಗಳ ತಂಡ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿರುತ್ತಾರೆ.
ವರದಿ
ಶಶಿಕುಮಾರ್ ವಿ










