ಜ್ಯೂವೆಲ್ಲರಿ ಅಂಗಡಿಯೊಂದರ ಹೆಸರು ಹೇಳಿ ನಂಬಿಸಿ, ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಪಡೆದು ಪರಾರಿಯಾಗಿದ್ದ ಆರೋಪಿಯನ್ನು ಭಾರತಿನಗರ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ.
ಆರೋಪಿಯು ತಾನು ಕೆಲಸ ಮಾಡುತ್ತಿದ್ದ ಜ್ಯೂವೆಲ್ಲರಿ ಅಂಗಡಿಯ ಮಾಲೀಕರು ಹೇಳಿದ್ದಾರೆಂದು ನಂಬಿಸಿ, ಓ.ಪಿ.ಹೆಚ್ ರಸ್ತೆಯ ಮತ್ತೊಂದು ಅಂಗಡಿಯಿಂದ 7 ಚಿನ್ನದ ಹಾರಗಳನ್ನು ಪಡೆದುಕೊಂಡಿದ್ದ. ಆದರೆ ಆಭರಣಗಳೊಂದಿಗೆ ತನ್ನ ಅಂಗಡಿಗೆ ಹೋಗದೆ ವಂಚಿಸಿ ತಲೆಮರೆಸಿಕೊಂಡಿದ್ದ.
ತನಿಖೆ ಕೈಗೊಂಡ ಪೊಲೀಸರು ಫೆಬ್ರವರಿ 19, 2026 ರಂದು ಯಶವಂತಪುರ ರೈಲ್ವೆ ನಿಲ್ದಾಣದ ಬಳಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಬಂಧಿತನಿಂದ 239 ಗ್ರಾಂ ತೂಕದ 7 ಚಿನ್ನದ ಹಾರಗಳನ್ನು ವಶಪಡಿಸಿಕೊಳ್ಳಲಾಗಿದೆ. ಇವುಗಳ ಅಂದಾಜು ಮಾರುಕಟ್ಟೆ ಮೌಲ್ಯ 33,50,000/-.
ಸುಲಭವಾಗಿ ಹಣ ಗಳಿಸುವ ಉದ್ದೇಶದಿಂದ ಈ ಕೃತ್ಯ ಎಸಗಿರುವುದಾಗಿ ಮತ್ತು ಚಿನ್ನವನ್ನು ಮಾರಾಟ ಮಾಡಲು ಬಂದಿದ್ದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ. ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಪೂರ್ವ ವಿಭಾಗದ ಡಿಸಿಪಿ ಡಾ. ವಿಕ್ರಮ್ ಅಮಟೆ (IPS)ಮತ್ತು ಎಸಿಪಿ ಶ್ರೀಮತಿ ಗೀತಾ ಸಿ.ಆರ್. ಅವರ ಮಾರ್ಗದರ್ಶನದಲ್ಲಿ, ಭಾರತಿನಗರ ಇನ್ಸ್ಪೆಕ್ಟರ್ ಫಿರೋಜ್ ಮಹಮದ್ಹಾಗೂ ತಂಡ ಈ ಯಶಸ್ವಿ ಕಾರ್ಯಾಚರಣೆ ನಡೆಸಿದೆ.









