Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home National News

“ಮನೆಯಲ್ಲೇ ಇದ್ದು ಇಟ್ಟಳು ಕನ್ನ: 50 ಲಕ್ಷದ ಚಿನ್ನ-ಬೆಳ್ಳಿಯೊಂದಿಗೆ ಸಿಕ್ಕಿಬಿದ್ದ ಕಿಲಾಡಿ ಕಿರಾತಕಿ!”

CREDOPRESS MEDIA PVT LTD by CREDOPRESS MEDIA PVT LTD
July 8, 2026
in National News
0
“ಮನೆಯಲ್ಲೇ ಇದ್ದು ಇಟ್ಟಳು ಕನ್ನ: 50 ಲಕ್ಷದ ಚಿನ್ನ-ಬೆಳ್ಳಿಯೊಂದಿಗೆ ಸಿಕ್ಕಿಬಿದ್ದ ಕಿಲಾಡಿ ಕಿರಾತಕಿ!”
0
SHARES
11
VIEWS
Share on FacebookShare on Twitter

ನಂಬಿಕಸ್ಥರೇ ದ್ರೋಹ ಬಗೆದರೆ ಏನಾಗಬಹುದು ಎಂಬುದಕ್ಕೆ ಬೆಂಗಳೂರಿನ ಜಯನಗರದಲ್ಲಿ ನಡೆದ ಈ ಘಟನೆಯೇ ಸಾಕ್ಷಿ. ಬರೋಬ್ಬರಿ 18 ವರ್ಷಗಳಿಂದ ಮನೆಯ ಮಗಳಂತೆ ಇದ್ದು ಕೆಲಸ ಮಾಡುತ್ತಿದ್ದ ಮನೆಗೆಲಸದ ಮಹಿಳೆಯೊಬ್ಬಳು, ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನ-ಬೆಳ್ಳಿ ಹಾಗೂ ನಗದನ್ನು ಕಳ್ಳತನ ಮಾಡಿ ಈಗ ಪೊಲೀಸರ ಅತಿಥಿಯಾಗಿರುವ ಘಟನೆ ಜಯನಗರದಲ್ಲಿ ನಡೆದಿದೆ.ಜಯನಗರ 5ನೇ ಬ್ಲಾಕ್‌ನ ನಿವಾಸಿಯೊಬ್ಬರು ಬಸವನಗುಡಿಯ ಬುಲ್ ಟೆಂಪಲ್ ರಸ್ತೆಯಲ್ಲಿರುವ ಆಸ್ಪತ್ರೆಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಕಳೆದ ಮಾರ್ಚ್ 4 ರಂದು ಇವರು ಕಬೋರ್ಡ್‌ನಲ್ಲಿ ಕುಟುಂಬದ ಸಮಾರಂಭಕ್ಕಾಗಿ ಪುರೋಹಿತರಿಗೆ ನೀಡಲು 1,25,000/- ನಗದು ಹಣವನ್ನು ಇಟ್ಟಿದ್ದರು. ಆದರೆ ಮಾರನೇ ದಿನ ಅಂದರೆ ಮಾರ್ಚ್ 5 ರಂದು ಪರಿಶೀಲಿಸಿದಾಗ ಅದರಲ್ಲಿ 65,000/- ಹಣ ಮಾಯವಾಗಿತ್ತು. ಇದರಿಂದ ಅನುಮಾನಗೊಂಡು ಮನೆಯಲ್ಲಿದ್ದ ಇತರೆ ಲಾಕರ್‌ಗಳನ್ನು ತಪಾಸಣೆ ಮಾಡಿದಾಗ, ಮನೆಯಲ್ಲಿದ್ದ ಚಿನ್ನಾಭರಣಗಳು, ಬೆಳ್ಳಿಯ ಬಿಸ್ಕೆಟ್‌ಗಳು ಹಾಗೂ ಬೆಳ್ಳಿ ವಸ್ತುಗಳು ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ.

ಕಳೆದ 18 ವರ್ಷಗಳಿಂದ ತಮ್ಮ ಮನೆಯಲ್ಲೇ ನಂಬಿಕಸ್ಥಳಾಗಿ ಕೆಲಸ ಮಾಡಿಕೊಂಡಿದ್ದ ಕೆಲಸದಾಕೆಯ ಮೇಲೆಯೇ ಮಾಲೀಕರಿಗೆ ತೀವ್ರ ಅನುಮಾನ ಮೂಡಿದೆ. ಈ ಹಿನ್ನೆಲೆಯಲ್ಲಿ ಏಪ್ರಿಲ್ 9 ರಂದು ಜಯನಗರ ಪೊಲೀಸ್ ಠಾಣೆಗೆ ಭೇಟಿ ನೀಡಿ ಮಾಲೀಕರು ದೂರನ್ನು ದಾಖಲಿಸಿದ್ದರು.ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಜಯನಗರ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದರು. ಜೂನ್ 22 ರಂದು ಸಂಶಯಾಸ್ಪದ ಕೆಲಸದಾಕೆಯನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದಾಗ, ಆಕೆ ತಾನೇ ಕಳ್ಳತನ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾಳೆ.

ಕೂಡಲೇ ಪೊಲೀಸರು ಆರೋಪಿತೆಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, ಹೆಚ್ಚಿನ ತನಿಖೆಗಾಗಿ 4 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದಿದ್ದಾರೆ. ಸುದೀರ್ಘ ವಿಚಾರಣೆಯ ಬಳಿಕ, ತಾನು ಕದ್ದ ಮಾಲುಗಳನ್ನೆಲ್ಲಾ ಪೂರ್ಣ ಪ್ರಜ್ಞಾ ಲೇಔಟ್‌ನಲ್ಲಿರುವ ತನ್ನ ಸ್ವಂತ ಮನೆಯಲ್ಲಿ ಬಚ್ಚಿಟ್ಟಿರುವುದಾಗಿ ಆಕೆ ಬಾಯಿಬಿಟ್ಟಿದ್ದಾಳೆ.ಆರೋಪಿ ನೀಡಿದ ಮಾಹಿತಿಯ ಮೇರೆಗೆ ಜೂನ್ 23 ರಂದು ಆಕೆಯ ಮನೆಯ ಮೇಲೆ ದಾಳಿ ನಡೆಸಿದ ಪೊಲೀಸರು ಕೋಟ್ಯಂತರ ರೂಪಾಯಿ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ವಶಪಡಿಸಿಕೊಳ್ಳಲಾದ ವಸ್ತುಗಳ ವಿವರ ಹೀಗಿದೆ:

262 ಗ್ರಾಂ ತೂಕದ ಚಿನ್ನಾಭರಣಗಳು ,2 ಕೆಜಿ 366 ಗ್ರಾಂ ತೂಕದ ಬೆಳ್ಳಿ ಬಿಸ್ಕೆಟ್‌ಗಳು ಮತ್ತು ಬೆಳ್ಳಿ ವಸ್ತುಗಳು ,₹65,000/- ನಗದು ಹಣ,05 ದುಬಾರಿ ರೇಷ್ಮೆ ಸೀರೆಗಳು

ಪೊಲೀಸರು ವಶಪಡಿಸಿಕೊಂಡಿರುವ ಈ ಎಲ್ಲಾ ಮಾಲುಗಳ ಒಟ್ಟು ಮೌಲ್ಯ ಬರೋಬ್ಬರಿ ₹50 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ. ಸದ್ಯ ಕಳವು ಮಾಲನ್ನು ಜಪ್ತಿ ಮಾಡಿರುವ ಪೊಲೀಸರು, ಆರೋಪಿತೆಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ದಕ್ಷಿಣ ವಿಭಾಗದ ಉಪ ಪೊಲೀಸ್ ಆಯುಕ್ತರಾದ (DCP) ಡಾ: ಕೆ. ವಂಶಿಕೃಷ್ಣ ಐಪಿಎಸ್ ಅವರ ಮಾರ್ಗದರ್ಶನದಲ್ಲಿ, ಜಯನಗರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ (ACP) ಶ್ರೀ ಲಕ್ಷ್ಮೀನಾರಾಯಣ ಅವರ ನೇತೃತ್ವದಲ್ಲಿ, ಜಯನಗರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಶ್ರೀ ಗಿರೀಶ್ ಎಂ.ಎಲ್ ಹಾಗೂ ಅವರ ಸಿಬ್ಬಂದಿ ತಂಡವು ಅತ್ಯಂತ ಚಾತುರ್ಯದಿಂದ ಈ ಕಳವು ಪ್ರಕರಣವನ್ನು ಭೇದಿಸಿ, ಯಶಸ್ವಿ ಕಾರ್ಯಾಚರಣೆ ನಡೆಸಿದ್ದಾರೆ. ಇಲಾಖೆಯ ಈ ಯಶಸ್ವಿ ಕಾರ್ಯಾಚರಣೆಗೆ ಸಾರ್ವಜನಿಕ ವಲಯದಲ್ಲಿ ಭಾರೀ ಶ್ಲಾಘನೆ ವ್ಯಕ್ತವಾಗುತ್ತಿದೆ.

ಮನೆಯಲ್ಲಿ ಎಷ್ಟೇ ವರ್ಷಗಳಿಂದ ಕೆಲಸಕ್ಕಿದ್ದರೂ, ಅಮೂಲ್ಯ ವಸ್ತುಗಳು ಹಾಗೂ ನಗದು ಇಡುವಾಗ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂಬುದು ಈ ಘಟನೆಯಿಂದ ಮತ್ತೊಮ್ಮೆ ಸಾಬೀತಾಗಿದೆ.

    CREDOPRESS MEDIA PVT LTD

    CREDOPRESS MEDIA PVT LTD

    Related Posts

    Nasha Mukt Bharat Abhiyan: Drug-Free India Campaign Held at Government Higher School in Yeshwantpura
    Bengaluru City Police

    Nasha Mukt Bharat Abhiyan: Drug-Free India Campaign Held at Government Higher School in Yeshwantpura

    August 13, 2026
    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    Bengaluru City Police

    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    July 24, 2026
    4 ಆರೋಪಿಗಳನ್ನು ಬಂಧಿಸಿ, 70 ಪ್ರಕರಣಗಳನ್ನು ಭೇದಿಸುವಲ್ಲಿ ಯಶಸ್ವಿ
    Bengaluru City Police

    4 ಆರೋಪಿಗಳನ್ನು ಬಂಧಿಸಿ, 70 ಪ್ರಕರಣಗಳನ್ನು ಭೇದಿಸುವಲ್ಲಿ ಯಶಸ್ವಿ

    July 19, 2026
    Next Post
    ಖದೀಮನಿಂದ 18 ಮಾರಕಾಸ್ತ್ರಗಳು, 771 ಗ್ರಾಂ ಗಾಂಜಾ ಜಪ್ತಿ

    ಖದೀಮನಿಂದ 18 ಮಾರಕಾಸ್ತ್ರಗಳು, 771 ಗ್ರಾಂ ಗಾಂಜಾ ಜಪ್ತಿ

    ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ನಗದು ಬಹುಮಾನ

    ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ನಗದು ಬಹುಮಾನ

    ತುಮಕೂರು ನಗರದಲ್ಲಿ ಗಾಂಜಾ ಮತ್ತು ಹೈಡ್ರೋವೀಡ್ ಮಾರಾಟ ಮಾಡುತ್ತಿದ್ದ ಖದೀಮರ ಗ್ಯಾಂಗ್‌ಗೆ ಪೊಲೀಸರು ಬಿಗ್ ಶಾಕ್ ನೀಡಿದ್ದಾರೆ.

    ತುಮಕೂರು ನಗರದಲ್ಲಿ ಗಾಂಜಾ ಮತ್ತು ಹೈಡ್ರೋವೀಡ್ ಮಾರಾಟ ಮಾಡುತ್ತಿದ್ದ ಖದೀಮರ ಗ್ಯಾಂಗ್‌ಗೆ ಪೊಲೀಸರು ಬಿಗ್ ಶಾಕ್ ನೀಡಿದ್ದಾರೆ.

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    Amruthalli Police B Dayananada Begur Police Belagavi Police Bengaluru City Police Bidar District Police Bidar Police ccb CCB Police Cen Police CM Siddaramaiah Credo Press CREDOPRESS MEDIA Cyber Crime Dakshina kannada district police Davangere police drugs news Electronic city Police Hoskote Police Hulimavu Police Indian Police News J. JOHN PREM EDITOR Jayanagar Police Kalaburagi Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police Malleshwaram Police MDMA Namma Police Namma Police News Police News Prime News Sadashivnagar Police SG Palya Police Siddapura Police Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ಹಣ ಸಂಪಾದನೆ ಮಾಡುವ ದುರುದ್ದೇಶದಿಂದ ಡಿಜಿಟಲ್ ಇಸ್ಪೀಟ್ ಸ್ಕ್ಯಾನರ್ ಕಾರ್ಡ್‌ಗಳನ್ನು ಹಾಗೂ ಎಲೆಕ್ಟ್ರಾನಿಕ್ ಡಿವೈಜ್‌ಗಳನ್ನು ತಯಾರು ಮಾಡಿ, ಕೆಲವು ವ್ಯಕ್ತಿಗಳಿಗೆ ಮಾರಾಟ ಮಾಡಿ ಜೂಜಾಟಾಗಳಲ್ಲಿ ತೊಡಗಿಸಿಕೊಂಡು ಸಾರ್ವಜನಿಕರಿಗೆ ವಂಚಿಸುತ್ತಿದ್ದ ಐವರು ವ್ಯಕ್ತಿಗಳ ಬಂಧನ
    • ಹೊಲದಲ್ಲೇ ಬೆಳೆದಿತ್ತು ₹30 ಲಕ್ಷದ ಗಾಂಜಾ! ಔರಾದ್-ಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ — ಆರೋಪಿ ಬಂಧನ
    • Nasha Mukt Bharat Abhiyan: Drug-Free India Campaign Held at Government Higher School in Yeshwantpura

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved