3 ಕೆಜಿ ಗಾಂಜಾ, 55 ಗ್ರಾಂ ಎಂ.ಡಿ.ಎಂ.ಎ ಕ್ರಿಸ್ಟೆಲ್ ವಶ. ಮೌಲ್ಯ 6.5 ಲಕ್ಷ.
ಹೆಣ್ಣೂರು ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ದಿನಾಂಕ:07/02/2025 ರಂದು ಬಾತ್ಮೀದಾರರಿಂದ ಖಚಿತ ಮಾಹಿತಿಯೊಂದು ದೊರೆತಿರುತ್ತದೆ. ಮಾಹಿತಿಯಲ್ಲಿ ಪೊಲೀಸ್ ಠಾಣಾ ಸರಹದ್ದಿನ ಚೇಳಿಕೆರೆ ಮೈದಾನದಲ್ಲಿ ಓರ್ವ ವ್ಯಕ್ತಿಯು ನಿಷೇದಿತ ಮಾದಕ ವಸ್ತುವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿಯಲ್ಲಿ ತಿಳಿಸಿರುತ್ತಾರೆ. ಈ ಮಾಹಿತಿಯನ್ನು ಆದರಿಸಿ ಠಾಣೆಯಲ್ಲಿ ಎನ್.ಡಿ.ಪಿ.ಎಸ್ ಕಾಯ್ದೆಯಡಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡು, ಬಾತ್ಮೀದಾರರು ತಿಳಿಸಿದ ಸ್ಥಳದ ಮೇಲೆ ದಾಳಿ ಮಾಡಿ, ಓರ್ವ ವಿದೇಶಿ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಳ್ಳಲಾಯಿತು. ವಶಕ್ಕೆ ಪಡೆದ ವ್ಯಕ್ತಿಯನ್ನು ವಿಚಾರಣೆ ಮಾಡಲಾಗಿ, ಎಂ.ಜಿ ರಸ್ತೆಯ ಬಳಿ ಓರ್ವ ಅಪರಿಚಿತ ವಿದೇಶಿ ವ್ಯಕ್ತಿಯಿಂದ ನಿಷೇದಿತ ಮಾದಕ ವಸ್ತು ಗಾಂಜಾ ಮತ್ತು ಎಂ.ಡಿ.ಎಂ.ಎ ಕ್ರಿಸ್ಟೆಲ್ ನ್ನು ಕಡಿಮೆ ಬೆಲೆಗೆ ಖರೀದಿ ಮಾಡಿಕೊಂಡು ಬಂದು, ಹೆಚ್ಚಿನ ಬೆಲೆಗೆ ಮಾರಾಟ ಮಾಡಿ, ಅಧಿಕ ಲಾಭ ಗಳಿಸುವ ಉದ್ದೇಶದಿಂದ ಈ ಕೃತ್ಯವೆಸಗಿರುವುದಾಗಿ ತನ್ನೊಪ್ಪಿಕೊಂಡಿರುತ್ತಾನೆ.
ಆರೋಪಿತನ ವಶದಲ್ಲಿದ್ದ ನಿಷೇದಿತ ಮಾದಕ ವಸ್ತು 3 ಕೆ.ಜಿ ಗಾಂಜಾ, 55 ಗ್ರಾಂ ಎಂ.ಡಿ.ಎಂ.ಎ ಕ್ರಿಸ್ಟೆಲ್ ಹಾಗೂ 1 ದ್ವಿ-ಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿರುತ್ತದೆ. ಇವುಗಳ ಮೌಲ್ಯ 6,50,000/-(ಆರು ಲಕ್ಷದ ಐವತ್ತು ಸಾವಿರ ರೂಪಾಯಿ).
ದಿನಾಂಕ:08/02/2025 ರಂದು ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತೆ.
ಬೆಂಗಳೂರು ನಗರ ಪೂರ್ವ ವಿಭಾಗದ ಉಪ ಪೊಲೀಸ್ ಆಯುಕ್ತರವರಾದ ಶ್ರೀ.ಡಿ.ದೇವರಾಜ ಐ.ಪಿ.ಎಸ್ ರವರ ನಿರ್ದೇಶನದಲ್ಲಿ, ಶ್ರೀ. ಉಮಾಶಂಕರ್ ಎಂ.ಹೆಚ್ ಸಹಾಯಕ ಪೊಲೀಸ್ ಕಮೀಷನರ್, ಬಾಣಸವಾಡಿ ಉಪ ವಿಭಾಗ ರವರ ಮಾರ್ಗದರ್ಶನದಲ್ಲಿ ಶ್ರೀ. ದೀಪಕ್.ಎಲ್ ಪೊಲೀಸ್ ಇನ್ಸ್ಪೆಕ್ಟರ್ ರವರ ನೇತೃತ್ವದ ಅಧಿಕಾರಿ/ಸಿಬ್ಬಂದಿಗಳ ತಂಡ ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.









