ದಿನಾಂಕ:09/05/2026 ರಂದು ಸಿಸಿಬಿಯ ಸಂಘಟಿತ ಅಪರಾಧ ದಳ(ಪೂರ್ವ)ದ ಅಧಿಕಾರಿಗೆ ಭಾತ್ತಿದಾರರಿಂದ ಖಚಿತ ಮಾಹಿತಿಯೊಂದು ದೊರೆತಿರುತ್ತದೆ. ಮಾಹಿತಿಯಲ್ಲಿ ಚಿಕ್ಕಬಾಣಾವರದ ಕಾಲೇಜುವೊಂದರ ಸಮೀಪ ಅಪರಿಚಿತರು ಯಾವುದೋ ಕಾಡು ಪ್ರಾಣಿಯ ಕೊಂಬನ್ನು ಮಾರಾಟ ಮಾಡಲು ಬರುತ್ತಿರುವುದಾಗಿ ತಿಳಿಸಿರುತ್ತಾರೆ. ಮಾಹಿತಿಯನ್ನು ಖಚಿತಪಡಿಸಿಕೊಂಡ ಸಿಸಿಬಿ ಅಧಿಕಾರಿಗಳು ಮುಂದಿನ ತನಿಖೆಗಾಗಿ ಚಿಕ್ಕಬಾಣಾವರ ಪೊಲೀಸ್ ಠಾಣೆಯ ಅಧಿಕಾರಿರವರಿಗೆ ಮಾಹಿತಿಯನ್ನು ತಿಳಿಸಿರುತ್ತಾರೆ. ಈ ಕುರಿತು ಚಿಕ್ಕಬಾಣಾವರ ಪೊಲೀಸ್ ಠಾಣೆಯಲ್ಲಿ ವೈಲ್ಡ್ ಲೈಫ್ ಪ್ರೊಟೆಕ್ಷನ್ ಆಕ್ಟ್-1972 (2022ನೇ ತಿದ್ದುಪಡಿ) ರಂತೆ ಪ್ರಕರಣ ದಾಖಲಾಗಿರುತ್ತದೆ.
ನಂತರ ಸಿಸಿಬಿ ಸಂಘಟಿತ ಅಪರಾಧ ದಳ(ಪೂರ್ವ) ದ ಅಧಿಕಾರಿ/ಸಿಬ್ಬಂದಿಗಳು ಹಾಗೂ ಚಿಕ್ಕಬಾಣಾವರ ಪೊಲೀಸ್ ಠಾಣೆಯ ಅಧಿಕಾರಿ/ಸಿಬ್ಬಂದಿಗಳು ದಿನಾಂಕ:09/05/2026 ರಂದು ಭಾತ್ತಿದಾರರು ತಿಳಿಸಿದ ಸ್ಥಳದ ಮೇಲೆ ದಾಳಿ ಮಾಡಿ, ಮೂವರು ವ್ಯಕ್ತಿಗಳನ್ನು ಒಂದು ಜಿಂಕೆಯ ಕೊಂಬಿನ ಸಮೇತ ವಶಕ್ಕೆ ಪಡೆದುಕೊಳ್ಳಲಾಯಿತು. ವಶಕ್ಕೆ ಪಡೆದ ಮೂವರು ವ್ಯಕ್ತಿಗಳನ್ನು ವಿಚಾರಣೆಗೊಳಪಡಿಸಲಾಗಿ ಹೆಚ್ಚಿನ ಹಣ ಗಳಿಸುವ ಉದ್ದೇಶದಿಂದ ತಮಿಳುನಾಡಿನ ಕೃಷ್ಣಗಿರಿಯಿಂದ ಅಕ್ರಮವಾಗಿ ಸಾಗಾಟಮಾಡಿಕೊಂಡು ಬಂದು ಈ ಕೃತ್ಯವೆಸಗಿರುವುದಾಗಿ ತಪ್ರೊಪ್ಪಿಕೊಂಡಿರುತ್ತಾರೆ.
ದಿನಾಂಕ:10/05/2026 ರಂದು ಮೂವರು ಆರೋಪಿಗಳನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ, 07 ದಿನಗಳ ಕಾಲ ಪೊಲೀಸ್ ಅಭಿರಕ್ಷೆಗೆ ಪಡೆದುಕೊಂಡಿರುತ್ತಾರೆ. ಆರೋಪಿಗಳು ಇದೇ ರೀತಿ ಜಿಂಕೆ ಕೊಂಬುಗಳನ್ನು ಹಲವಾರು ಜನರಿಗೆ ಮಾರಾಟ ಮಾಡಿರುವುದಾಗಿ ತಿಳಿಸಿರುತ್ತಾರೆ. ತನಿಖೆ ಮುಂದುವರೆದಿದೆ









