5 ದ್ವಿ-ಚಕ್ರ ವಾಹನಗಳ ವಶ, ಮೌಲ್ಯ 1 2.5 ಲಕ್ಷ.
ಬಾಗಲಗುಂಟೆ ಪೊಲೀಸ್ ಠಾಣಾ ಸರಹದ್ದಿನ ಸಿಡೇದೆಹಳ್ಳಿ ಯಲ್ಲಿ ವಾಸವಿರುವ ಪಿರಾದುದಾರರು ದಿನಾಂಕ:12/10/2024 ರಂದು ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ದಿನಾಂಕ:11/10/2024 ರಂದು ರಾತ್ರಿ ಪಿರಾದುದಾರರು ಮನೆಯ ಕೊಠಡಿಯಲ್ಲಿ ಮಲಗಿರುತ್ತಾರೆ. ಅಪರಿಚಿತ ವ್ಯಕ್ತಿಯೊರ್ವನು ಪಿರಾದುದಾರರ ಮನೆಯ ಬಾಗಿಲ ಚಿಲಕವನ್ನು ಕಿಟಕಿಯ ಮೂಲಕ ತೆರೆದು, ಮನೆಯೊಳಗೆ ಪ್ರವೇಶಿಸಿ, ಪಿರಾದುದಾರರ ಕತ್ತಿನಲ್ಲಿದ್ದ ಚಿನ್ನದ ಸರವನ್ನು ಕಿತ್ತುಕೊಳ್ಳುತ್ತಿದಾಗ ಪಿರಾದುದಾರರು ಎಚ್ಚರಗೊಂಡು ತಡೆಯಲು ಹೋದಾಗ, ಪಿರಾದುದಾರರನ್ನು ಮಂಚದಿಂದ ಕೆಳಗೆ ತಳ್ಳಿ 3 85,000/- ಸಾವಿರ ಬೆಲೆ ಬಾಳುವ 13 ಗ್ರಾಂ ಚಿನ್ನದ ಸರವನ್ನು ಕಿತ್ತುಕೊಂಡು ಹೋಗಿರುವುದಾಗಿ ದೂರಿನಲ್ಲಿ ತಿಳಿಸಿರುತ್ತಾರೆ. ಈ ಕುರಿತು ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಪ್ರಕರಣದ ತನಿಖೆಯನ್ನು ಮುಂದುವರೆಸಿದ ಪೊಲೀಸರು, ಬೆರಳಚ್ಚು ತಜ್ಞರು ನೀಡಿದ ಮಾಹಿತಿ ಆಧಾರದ ಮೇರೆಗೆ ಹಾಗೂ ಬಾತ್ಮೀದಾರರಿಂದ ಖಚಿತ ಮಾಹಿತಿಯನ್ನು ಕಲೆಹಾಕಿ, ದಿನಾಂಕ:18/10/2024 ರಂದು ದಾಸರಹಳ್ಳಿ ಪೈಪ್ ಲೈನ್ ರಸ್ತೆಯಲ್ಲಿ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಳ್ಳಲಾಯಿತು. ವಶಕ್ಕೆ ಪಡೆದ ವ್ಯಕ್ತಿಯನ್ನು ವಿಚಾರಣೆಗೊಳಪಡಿಸಿದಾಗ, ಈ ಪ್ರಕರಣದಲ್ಲಿ ಸರ ಅಪಹರಣ ಮಾಡಿರುವುದಾಗಿ ತನ್ನೊಪ್ಪಿಕೊಂಡಿರುತ್ತಾನೆ. ಹಾಗೂ ಬೆಂಗಳೂರು ನಗರದ ವಿವಿಧ ಕಡೆಗಳಲ್ಲಿ ದ್ವಿ-ಚಕ್ರ ವಾಹನಗಳನ್ನು ಕಳವು ಮಾಡಿರುವುದಾಗಿ ತಿಳಿಸಿರುತ್ತಾನೆ.
ದಿನಾಂಕ:19/10/2024 ರಂದು ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ, 7 ದಿನಗಳ ಕಾಲ ಪೊಲೀಸ್ ಅಭಿರಕ್ಷೆಗೆ ಪಡೆದುಕೊಳ್ಳಲಾಯಿತು.
ಪೊಲೀಸ್ ಅಭಿರಕ್ಷೆಗೆ ಪಡೆದ ಆರೋಪಿಯನ್ನು ಸುದೀರ್ಘವಾಗಿ ವಿಚಾರಣೆ ಮಾಡಲಾಗಿ, ಈ ಹಿಂದೆ 2023 ನೇ ಸಾಲಿನಲ್ಲಿ ಮಾದನಾಯಕನಹಳ್ಳಿ ಯಿಂದ 8ನೇ ಮೈಲಿ ಕಡೆಗೆ ಹೋಗುವ ಬಸ್ಸಿನಲ್ಲಿ ವೃದ್ಧೆಯೊಬ್ಬರ ಪರ್ಸ್ನ್ನು ಕಳವು ಮಾಡಿಕೊಂಡು ಬಂದು ಪರ್ಸಿನಲ್ಲಿದ್ದ 25 ಗ್ರಾಂ ಚಿನ್ನದ ಚೈನನ್ನು ಹಾಗೂ ಈ ಪ್ರಕರಣದಲ್ಲಿ 13 ಗ್ರಾಂ ಚಿನ್ನದ ಚೈನನ್ನು ಅಪಹರಣ ಮಾಡಿದ್ದನ್ನು ಬನಶಂಕರಿ ಮಣಪುರಂ ನಲ್ಲಿ ಅಡಮಾನ ಇಟ್ಟಿರುವುದಾಗಿ ತಿಳಿಸಿರುತ್ತಾನೆ.
ದಿನಾಂಕ:25/10/2024 ರಂದು ಆರೋಪಿಯು ಕಳುವು ಮಾಡಿದ್ದ, 5 ದ್ವಿ-ಚಕ್ರ ವಾಹನಗಳನ್ನು ರವೀಂದ್ರ ನಗರ ಬೆಂಕಿ ಮನೇಶ್ವರ ದೇವಸ್ಥಾನದ ಹತ್ತಿರವಿರುವ ಖಾಲಿ ಜಾಗದಲ್ಲಿ ನಿಲ್ಲಿಸಿದನ್ನು ವಶಪಡಿಸಿಕೊಳ್ಳಲಾಯಿತು. ಇವುಗಳ ಮೌಲ್ಯ 32,50,000/-(ಎರಡು ಲಕ್ಷದ ಐವತ್ತು ಸಾವಿರ ರೂಪಾಯಿ).
ಅದೇ ದಿನ ಆರೋಪಿಯು ಅಡಮಾನವಿಟ್ಟಿದ್ದ ಎರಡು ಚಿನ್ನದ ಚೆನ್ನ್ನು ನೀಡುವಂತೆ ಬನಶಂಕರಿಯಲ್ಲಿರುವ ಮಣಪುರಂ ಶಾಖೆಯವರಿಗೆ ನೋಟಿಸ್ ಜಾರಿ ಮಾಡಿದ್ದು, ಮಣಪುರಂ ಶಾಖೆಯವರು ಠಾಣೆಗೆ ತಂದು ಒಪ್ಪಿಸುವುದಾಗಿ ತಿಳಿಸಿರುತ್ತಾರೆ.
ಈ ಪ್ರಕರಣದ ಆರೋಪಿಯ ಬಂಧನದಿಂದ 1) ಬಾಗಲಗುಂಟೆಯ-01 ದ್ವಿ-ಚಕ್ರ ವಾಹನ ಕಳವು ಪ್ರಕರಣ, 1 ಜೇಬುಗಳ್ಳತನ ಪ್ರಕರಣ ಹಾಗೂ 1-ಸರಅಪಹರಣ ಪ್ರಕರಣ 2) ಮಾಗಡಿ ರಸ್ತೆಯ-01 ದ್ವಿ-ಚಕ್ರ ವಾಹನ ಕಳವು ಪ್ರಕರಣ, 3) ವಿಜಯನಗರ ಠಾಣೆಯ-1 ದ್ವಿ-ಚಕ್ರ ವಾಹನ ಕಳವು ಪ್ರಕರಣ, 4) ಕೋರಮಂಗಲ ಠಾಣೆಯ-01 ದ್ವಿ-ಚಕ್ರ ವಾಹನ ಕಳವು ಪ್ರಕರಣ 5) ಜಯನಗರ ಠಾಣೆಯ-1 ದ್ವಿ-ಚಕ್ರ ವಾಹನ ಕಳವು ಪ್ರಕರಣ ಸೇರಿದಂತೆ ಒಟ್ಟು 5 ದ್ವಿ-ಚಕ್ರ ವಾಹನ ಕಳವು ಪ್ರಕರಣಗಳು, ಜೇಬುಗಳ್ಳತನ ಪ್ರಕರಣ ಹಾಗೂ 1-ಸರ ಅಪಹರಣ ಪ್ರಕರಣ ಪತ್ತೆಯಾಗಿರುತ್ತದೆ.
ದಿನಾಂಕ:25/10/2024 ರಂದು ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತೆ.
ಈ ಕಾರ್ಯಾಚರಣೆಯನ್ನು ಶ್ರೀ ಸೈದುಲ್ಲಾ ಅಡವತ್ ಐ.ಪಿ.ಎಸ್, ಉಪ ಪೊಲೀಸ್ ಆಯುಕ್ತರು, ಉತ್ತರ ವಿಭಾಗ ಬೆಂಗಳೂರು ನಗರ ರವರ ಮಾರ್ಗದರ್ಶನದಲ್ಲಿ. ಶ್ರೀ ಸದಾನಂದ ತಿಪ್ಪಣ್ಣವರ್, ಸಹಾಯಕ ಪೊಲೀಸ್ ಆಯುಕ್ತರು ಪೀಣ್ಯ ಉಪ ವಿಭಾಗ ರವರ ನೇತೃತ್ವದಲ್ಲಿ, ಬಾಗಲಗುಂಟೆ ಪೊಲೀಸ್ ಠಾಣೆ ಪೊಲೀಸ್ ಇನ್ಸಪೆಕ್ಟರ್ ಶ್ರೀ ಹನುಮಂತರಾಜ್.ಎಂ ರವರ ಅಧಿಕಾರಿ/ಸಿಬ್ಬಂದಿಗಳ ತಂಡ ಪ್ರಕರಣವನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿರುತ್ತಾರೆ.









