ತಿಲಕನಗರ ಪೊಲೀಸ್ ಠಾಣೆಯ ಔಟರ್ ರಿಂಗ್ ರಸ್ತೆಯಲ್ಲಿ ಪಿರಾದುದಾರರು ಬಟ್ಟೆ ಅಂಗಡಿಯೊಂದನ್ನು ಇಟ್ಟುಕೊಂಡಿರುತ್ತಾರೆ. ದಿನಾಂಕ:18/10/2024 ರಂದು ಪಿರಾದುದಾರರು ತಿಲಕನಗರ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ದಿನಾಂಕ:16/09/2024 ರಿಂದ 17/09/2024 ರ ನಡುವೆ ಅಂಗಡಿಯ ಹಿಂಭಾಗದಲ್ಲಿ ಅಳವಡಿಸಿದ್ದ 6 ಬ್ಯಾಟರಿಗಳನ್ನು ಯಾರೋ ಅಪರಿಚಿತರು ಕಳವು ಮಾಡಿಕೊಂಡು ಹೋಗಿರುತ್ತಾರೆಂದು ದೂರಿನಲ್ಲಿ ತಿಳಿಸಿರುತ್ತಾರೆ. ಈ ಕುರಿತು ತಿಲಕ್ನಗರ ಪೊಲೀಸ್ ಠಾಣೆಯಲ್ಲಿ ಕಳವು ಪ್ರಕರಣ ದಾಖಲಾಗಿರುತ್ತದೆ.
ಪ್ರಕರಣದ ತನಿಖೆಯನ್ನು ಮುಂದುವರೆಸಿದ ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು, ದಿನಾಂಕ:27/11/2024 ರಂದು ಈ ಪ್ರಕರಣದಲ್ಲಿ ಭಾಗಿಯಾಗಿದ್ದ. ಇಬ್ಬರು ವ್ಯಕ್ತಿಗಳನ್ನು 1 ದ್ವಿ-ಚಕ್ರ ವಾಹನ ಮತ್ತು 1 ಬ್ಯಾಟರಿಸಮೇತ ವಶಕ್ಕೆ ಪಡೆದುಕೊಳ್ಳಲಾಯಿತು. ವಶಕ್ಕೆ ಪಡೆದ ವ್ಯಕ್ತಿಗಳನ್ನು ವಿಚಾರಣೆಗೊಳಪಡಿಸಲಾಗಿ, ಈ ಪ್ರಕರಣದಲ್ಲಿ ಭಾಗಿಯಾಗಿರುವುದಾಗಿ ತಪ್ಪಿಪ್ಪಿಕೊಂಡಿರುತ್ತಾರೆ. ಹಾಗೂ ಬೆಂಗಳೂರು ನಗರದ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದ್ವಿ-ಚಕ್ರ ವಾಹನಗಳನ್ನು, ಗ್ಯಾಸ್ ಸಿಲೆಂಡರ್ಗಳನ್ನು ಹಾಗೂ ಬ್ಯಾಟರಿಗಳನ್ನು ಕಳವು ಮಾಡಿರುವುದಾಗಿ ತಿಳಿಸಿರುತ್ತಾರೆ.
ದಿನಾಂಕ:28/11/2024 ರಂದು ಆರೋಪಿಗಳಿಬ್ಬರನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ, 9 ದಿನಗಳ ಕಾಲ ಪೊಲೀಸ್ ಅಭಿರಕ್ಷೆಗೆ ಪಡೆಯಲಾಯಿತು.

ದಿನಾಂಕ:29/11/2024 ರಂದು ಆರೋಪಿಗಳಿಬ್ಬರು, ಮಾರಾಟ ಮಾಡಿದ್ದ 12 ಸಿಲೆಂಡರ್ಗಳನ್ನು ಗೊಟ್ಟಿಗೆರೆ ರಸ್ತೆಯಲ್ಲಿ ವಾಸವಿರುವ ಓರ್ವ ವ್ಯಕ್ತಿಗೆ ನೋಟಿಸ್ ನೀಡಿದ್ದು, ಆತನು ಠಾಣೆಗೆ ತಂದು ಹಾಜರುಪಡಿಸಿದ ಸಿಲೆಂಡರ್ಗಳನ್ನು ವಶಪಡಿಸಿಕೊಳ್ಳಲಾಯಿತು.
ಅದೇ ದಿನ ಬೆಟ್ಟದಾಸನಪುರದಲ್ಲಿ ವಾಸವಿರುವ ಓರ್ವ ಮಹಿಳೆಗೆ 04 ಸಿಲೆಂಡರ್ಗಳನ್ನು ಮಾರಾಟ ಮಾಡಿರುವುದಾಗಿ ತಿಳಿಸಿದ ಮೇರೆಗೆ, ಆ ಮಹಿಳೆಗೆ ನೋಟಿಸ್ ನೀಡಿದ್ದು, ಆಕೆಯು ಠಾಣೆಗೆ ತಂದು ಹಾಜರುಪಡಿಸಿದ 04 ಸಿಲೆಂಡರ್ಗಳನ್ನು ವಶಪಡಿಸಿಕೊಳ್ಳಲಾಯಿತು.
ದಿನಾಂಕ:30/11/2024 ರಂದು 10 ಸಿಲೆಂಡರ್ಗಳನ್ನು ದೇವನಹಳ್ಳಿ ಗ್ರಾಮದಲ್ಲಿರುವ ಓರ್ವ ವ್ಯಕ್ತಿಗೆ ಮಾರಾಟ ಮಾಡಿದ್ದನ್ನು ನೋಟಿಸ್ ಜಾರಿ ಮಾಡಿದ್ದು, ಆತನು 10 ಸಿಲೆಂಡರ್ಗಳನ್ನು ಠಾಣೆಗೆ ತಂದು ಹಾಜರುಪಡಿಸಿದ್ದನ್ನು ವಶಪಡಿಸಿಕೊಳ್ಳಲಾಯಿತು. ಅದೇ ದಿನ ಪ್ರಕರಣದ ಆರೋಪಿಯೋರ್ವನ ಮನೆಯಿಂದ 14 ಸಿಲೆಂಡರ್ಗಳನ್ನು ವಶಪಡಿಸಿಕೊಳ್ಳಲಾಯಿತು.
ದಿನಾಂಕ:30/11/2024 ರಂದು ಆರೋಪಿಗಳಿಬ್ಬರು 27 ಬ್ಯಾಟರಿಗಳನ್ನು ಬಿ.ಟಿ.ಎಂ ಲೇಔಟ್ನಲ್ಲಿರುವ ಗುಜರಿ ಅಂಗಡಿಗೆ ಮಾರಾಟ ಮಾಡಿದ್ದನ್ನು ವಶಪಡಿಸಿಕೊಳ್ಳಲಾಯಿತು.
ದಿನಾಂಕ:03/12/2024 ರಂದು ತಿಲಕ್ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಜಲಭವನದ ಪಕ್ಕದಲ್ಲಿರುವ ಖಾಲಿ ಜಾಗದಲ್ಲಿ ನಿಲ್ಲಿಸಿದ್ದ 5 ದ್ವಿ-ಚಕ್ರ ವಾಹನಗಳನ್ನು ಹಾಗೂ ಕಾರ್ಪೋರೇಷನ್ ಲೇಔಟ್ನ ಖಾಲಿ ಜಾಗದಲ್ಲಿ ನಿಲ್ಲಿಸಿದ್ದ 5 ದ್ವಿ-ಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಯಿತು.
ಈ ಆರೋಪಿಗಳಿಬ್ಬರಿಂದ ಒಟ್ಟು 11 ದ್ವಿ-ಚಕ್ರ ವಾಹನ, 28 ಬ್ಯಾಟರಿಗಳು ಹಾಗೂ 40 ಸಿಲೆಂಡರ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಇವುಗಳ ಮೌಲ್ಯ 15,00,000/-(ಹದಿನೈದು ಲಕ್ಷ ರೂಪಾಯಿ).

ಈ ಪ್ರಕರಣದ ಆರೋಪಿಗಳಿಬ್ಬರಿಂದ 1) ತಿಲಕ್ನಗರ ಪೊಲೀಸ್ ಠಾಣೆಯ-2 ಬ್ಯಾಟರಿ ಕಳವು ಪ್ರಕರಣ, 2) ಜೆ.ಪಿ.ನಗರ ಪೊಲೀಸ್ ಠಾಣೆಯ-02 ದ್ವಿ-ಚಕ್ರ ವಾಹನ ಕಳವು ಪ್ರಕರಣಗಳು 3) ಮಡಿವಾಳ ಪೊಲೀಸ್ ಠಾಣೆಯ-01 ದ್ವಿ-ಚಕ್ರ ವಾಹನ ಕಳವು ಪ್ರಕರಣ, 4) ಗಿರಿನಗರ ಪೊಲೀಸ್ ಠಾಣೆಯ-01 ದ್ವಿ-ಚಕ್ರ ವಾಹನ ಕಳವು ಪ್ರಕರಣ, 5) ಕೋಣನಕುಂಟೆ ಪೊಲೀಸ್ ಠಾಣೆಯ-01 ದ್ವಿ-ಚಕ್ರ ವಾಹನ ಕಳವು ಪ್ರಕರಣ, 6) ಮೈಕೋಲೇಔಟ್ ಪೊಲೀಸ್ ಠಾಣೆಯ-01 ದ್ವಿ-ಚಕ್ರ ವಾಹನ ಕಳವು ಪ್ರಕರಣ, 7) ಬೊಮ್ಮನಹಳ್ಳಿ ಪೊಲೀಸ್ ಠಾಣೆಯ-01 ದ್ವಿ-ಚಕ್ರ ವಾಹನ ಕಳವು ಪ್ರಕರಣ, 8) ಕೆ.ಎಸ್. ಲೇಔಟ್ ಪೊಲೀಸ್ ಠಾಣೆಯ-01 ದ್ವಿ-ಚಕ್ರ ವಾಹನ ಕಳವು ಪ್ರಕರಣ, 9) ಬೆಳಂದೂರು ಪೊಲೀಸ್ ಠಾಣೆಯ-01 ದ್ವಿ-ಚಕ್ರ ವಾಹನ ಕಳವು ಪ್ರಕರಣ, 10) ಸಿದ್ದಾಪುರ ಪೊಲೀಸ್ ಠಾಣೆಯ-01 ದ್ವಿ-ಚಕ್ರ ವಾಹನ ಕಳವು ಪ್ರಕರಣ, 11) ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯ-01 ದ್ವಿ-ಚಕ್ರ ವಾಹನ ಕಳವು ಪ್ರಕರಣ ಸೇರಿದಂತೆ ಒಟ್ಟು 11 ದ್ವಿ-ಚಕ್ರ ವಾಹನ ಕಳವು ಪ್ರಕರಣಗಳು ಪತ್ತೆಯಾಗಿರುತ್ತವೆ. 40 ಸಿಲೆಂಡರ್ಗಳು ಮತ್ತು 26 ಬ್ಯಾಟರಿಗಳ ಮಾಲೀಕರುಗಳ ಪತ್ತೆ ಕಾರ್ಯ ಮುಂದುವರೆದಿದೆ. ತನಿಖೆ ಪ್ರಗತಿಯಲ್ಲಿದೆ.
ದಿನಾಂಕ:04/12/2024 ರಂದು ಆರೋಪಿಗಳಿಬ್ಬರನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಆರೋಪಿಗಳಿಬ್ಬರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತೆ.
ಈ ಕಾರ್ಯಾಚರಣೆಯನ್ನು ಬೆಂಗಳೂರು ನಗರ, ಆಗ್ನೆಯ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಶ್ರೀಮತಿ ಸಾರಾ ಫಾತೀಮಾ, ಐ.ಪಿ.ಎಸ್ಮತ್ತು ಮೈಕೋಲೇಔಟ್ ಉಪ-ವಿಭಾಗದ ಸಹಾಯಕ ಉಪ ಪೊಲೀಸ್ ಆಯುಕ್ತರಾದ ಶ್ರೀ ಶಿವಶಂಕರ ರೆಡ್ಡಿ ರವರ ಮಾರ್ಗದರ್ಶನದಲ್ಲಿ ತಿಲಕನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಶ್ರೀ. ವಿಶ್ವನಾಥ, ಕೆ ರವರ ನೇತೃತ್ವದ ಅಧಿಕಾರಿ/ಸಿಬ್ಬಂದಿಗಳ ತಂಡ ಪ್ರಕರಣವನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿರುತ್ತಾರೆ..










