ಬಾನಸೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಆರ್ ಎಸ್ ಪಾಳ್ಯದಲ್ಲಿ ಮನೆಯಲ್ಲಿ ಕಳುವಾಗಿರುವ ಬಗ್ಗೆ ದೂರನ್ನು ಸಲ್ಲಿಸಿರುತ್ತಾರೆ ದೂರಿನಲ್ಲಿ ತಂಗಿಯ ಮಗಳು ಹಾಸ್ಮಟ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದು ಅವರನ್ನು ನೋಡಲು ಹೋಗಿ ಮರುದಿನ ಬಂದು ನೋಡಲಾಗಿ ಮನೆಯ ಮುಂಬಾಗಿಲು ಹೊಡೆದಿರುವುದು ಕಂಡುಬಂದಿರುತ್ತದೆ ಮನೆಯ ಒಳಗೆ ಹೋಗಿ ನೋಡಲಾಗಿ ವಾರ್ಡ್ರೋಬ್ ಗಳ ಬೀಗಗಳು ಸಹ ಮುರಿದಿದ್ದು ವಾರ್ಡ್ರೋಬ್ ನಲ್ಲಿಟ್ಟಿದ್ದ 2008 ಗ್ರಾಂ ಚಿನ್ನಾಭರಣ ಮತ್ತು 2.30 ಲಕ್ಷನಗದನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆಂದು ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಕಳವು ಪ್ರಕರಣವನ್ನು ದಾಖಲಿಸಿರುತ್ತಾರೆ
ಪ್ರಕರಣದ ತನಕ ನಮ್ಮ ಮುಂದುವರಿಸಿದ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು ಖಚಿತ ಮಾಹಿತಿಯನ್ನು ಕಲೆ ಹಾಕಿ ಶಿವಾಜಿನಗರದ ಬ್ರಾಡ್ ವೆ ಸರ್ಕಲ್ ನಲ್ಲಿ ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆದುಕೊಂಡ ಪೊಲೀಸರು ಸುಧೀರ್ಘವಾಗಿ ವಿಚಾರಣೆಗಳು ಪಡಿಸಿ ಈ ಪ್ರಕರಣದಲ್ಲಿ ಚಿನ್ನಾಭರಣ ಹಾಗೂ ನಗದು ಕಳುವು ಮಾಡಿರುವುದಾಗಿ ಆರೋಪಿತರು ತಪ್ಪು ಒಪ್ಪಿಕೊಂಡಿರುತ್ತಾರೆ
ಪ್ರಕರಣದಲ್ಲಿ ಕಳುವು ಮಾಡಿದ್ದ ಚಿನ್ನಾಭರಣಗಳ ಪೈಕಿ 52.5 ಗ್ರಾಂ ಚಿನ್ನಾಭರಣವನ್ನು ಆರೋಪಿಯ ಒಬ್ಬನ ವಾಸದ ಮನೆಯಲ್ಲಿಟ್ಟಿರುವುದಾಗಿ ಹಾಗೂ 14 ಗ್ರಾಂ ಚಿನ್ನಾಭರಣವನ್ನು ಮತ್ತೊಬ್ಬ ಆರೋಪಿತನು ಮಣಪ್ಪುರಂ ಫೈನಾನ್ಸ್ ನಲ್ಲಿ ಹಡಮಾನ ಇಟ್ಟಿರುವದಾಗಿ ಆರೋಪಿತರು ತಿಳಿಸಿದ್ದು ಅವುಗಳನ್ನು ಪೊಲೀಸರು ವಶಪಡಿಸಿಕೊಳ್ಳುತ್ತಾರೆ
ಈ ಪ್ರಕರಣದ ಆರೋಪಿಗಳಿಂದ 10 ಲಕ್ಷ ಮೌಲ್ಯದ 66.5 ಗ್ರಾಂ ಚಿನ್ನಾಭರಣಗಳನ್ನು ವಶಕ್ಕೆ ಪಡೆದುಕೊಂಡಿರುತ್ತಾರೆ
ಈ ಕಾರ್ಯಾಚರಣೆಯನ್ನು ಪೂರ್ವ ವಿಭಾಗದ ಡಿಸಿಪಿ ದೇವರಾಜ್ ಐಪಿಎಸ್ ರವರ ಮಾರ್ಗದರ್ಶನದಲ್ಲಿ ಬಾಣಸ್ವಾಡಿ ಎಸಿಪಿ ಉಮಾಶಂಕರ್ ಎಚ್ಎಂರವರ ನೇತೃತ್ವದಲ್ಲಿ ಬಾಣಸವಾಡಿ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಅರುಣ್ ಸಾಳುಂಕೆ ರವರು ಹಾಗೂ ಅಧಿಕಾರಿ ಸಿಬ್ಬಂದಿಗಳ ತಂಡ ಈ ಪ್ರಕರಣವನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿರುತ್ತಾರೆ.
ವರದಿ
ಶಶಿಕುಮಾರ್ ವಿ









