ಟೀ ಕುಡಿಯಲು ಹೋಗಿದ್ದ ವ್ಯಕ್ತಿ ಒಬ್ಬರು ದ್ವಿಚಕ್ರ ವಾಹನವನ್ನು ನಿಲ್ಲಿಸಿ, ಅಂಗಡಿಗೆ ತೆರಳಿ ಮತ್ತೆ ಮರಳಿ ಬಂದು ನೋಡಿದಾಗ ಕಳ್ಳತನ ಆಗಿರುವುದು ಕಂಡುಬಂದಿರುತ್ತದೆ
ಪಿರ್ಯಾದು ದಾರರು ಸಲ್ಲಿಸಿದ ದೂರದಲ್ಲಿ ಬಾಣಸವಾಡಿ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆಯನ್ನು ಮುಂದುವರಿಸಿ ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು ಖಚಿತ ಮಾಹಿತಿಯನ್ನು ಕಲೆಹಾಕಿ ಕಮ್ಮನಹಳ್ಳಿಯ ಮುಖ್ಯ ರಸ್ತೆಯಲ್ಲಿ ಕಳುವಾಗಿದ್ದ ಒಂದು ದ್ವಿಚಕ್ರ ವಾಹನ ಸಮೇತ ಓರ್ವ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಿಸಿದಾಗ ದ್ವಿಚಕ್ರ ವಾಹನ ಕಳುವು ಮಾಡಿರುವುದಾಗಿ ತಪ್ಪು ಒಪ್ಪಿಕೊಂಡಿರುತ್ತಾನೆ ಹಾಗೂ ವಿವಿಧ ಕಡೆಗಳಲ್ಲಿ ದ್ವಿಚಕ್ರ ವಾಹನಗಳನ್ನು ಕಳುವು ಮಾಡಿರುವುದಾಗಿ ಹೇಳಿರುತ್ತಾನೆ
ಆರೋಪಿಯನ್ನು ಸುದೀರ್ಘವಾಗಿ ವಿಚಾರಿಸಿದ ಪೊಲೀಸರು ಬೆಂಗಳೂರು ನಗರದ ವಿವಿಧ ಕಡೆಗಳಲ್ಲಿ ಕಳುವು ಮಾಡಿದ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡುವ ಸಲುವಾಗಿ ಕಮ್ಮನಹಳ್ಳಿಯ ಸೆಂಟ್ ಥಾಮಸ್ ಚರ್ಚ್ ಪಕ್ಕದ ಖಾಲಿ ಜಾಗದಲ್ಲಿ 4 ದ್ವಿಚಕ್ರ ವಾಹನಗಳನ್ನು ಹಾಗೂ ಬಾಗಲೂರು ಮುಖ್ಯರಸ್ತೆಯ ಖಾಲಿ ಜಾಗದಲ್ಲಿ ಮೂರು ದ್ವಿಚಕ್ರ ವಾಹನಗಳನ್ನು ನಿಲ್ಲಿಸಿರುವುದಾಗಿ ಆರೋಪಿ ತಿಳಿಸಿರುತ್ತಾನೆ
ಈ ಪ್ರಕರಣದಿಂದ ಆರೋಪಿಯ ವಶದಿಂದ ಒಟ್ಟು ಎಂಟು ದ್ವಿಚಕ್ರ ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿರುತ್ತಾರೆ ಇವುಗಳ ಒಟ್ಟು ಮೌಲ್ಯ 9 ಲಕ್ಷ ರೂಪಾಯಿಗಳಾಗಿರುತ್ತದೆ
ಈ ಪ್ರಕರಣದ ಆರೋಪಿ ಬಂಧನದಿಂದ 1.ಬಾಣಸವಾಡಿ ಪೊಲೀಸ್ ಠಾಣೆಯ 4-ದ್ವಿಚಕ್ರ ವಾಹನ ಕಳವು, 2. ಕೆಜಿ ಹಳ್ಳಿಯ ಪೊಲೀಸ್ ಠಾಣೆಯ 2 ದ್ವಿಚಕ್ರವಾಹನ, 3. ಆರ್ಟಿ ನಗರ ಪೊಲೀಸ್ ಠಾಣೆಯ 1 ದ್ವಿಚಕ್ರ ವಾಹನ, 4. ಗೋವಿಂದಪುರ ಪೊಲೀಸ್ ಠಾಣೆಯ 1 ದ್ವಿಚಕ್ರ ವಾಹನದ ಪ್ರಕರಣ ಸೇರಿದಂತೆ ಒಟ್ಟು ಎಂಟು ದ್ವಿಚಕ್ರವಾಹನ ಕಳವು ಪ್ರಕರಣಗಳು ಪತ್ತೆಯಾಗಿರುತ್ತದೆ
ಈ ಕಾರ್ಯಾಚರಣೆಯನ್ನು ಪೂರ್ವ ವಿಭಾಗದ ಉಪ ಪೊಲೀಸ್ ಕಮಿಷನರ್ ಡಿ ದೇವರಾಜ್ ಐಪಿಎಸ್, ರವರ ಮಾರ್ಗದರ್ಶನದಲ್ಲಿ ಬಾಣಸವಾಡಿ ಉಪ ವಿಭಾಗದ ಸಹಾಯಕ ಪೊಲೀಸ್ ಕಮಿಷನರ್ ಉಮಾಶಂಕರ್ ಎಚ್ಎಂ ರವರ ನೇತೃತ್ವದಲ್ಲಿ ಬಾಣಸವಾಡಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಅರುಣ್ ಸಾಳುಂಕೆ, ರವರ ಅಧಿಕಾರಿ ಸಿಬ್ಬಂದಿ ರವರ ತಂಡ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿರುತ್ತಾರೆ.
ವರದಿ
ಶಶಿಕುಮಾರ್ ವಿ









