ಬಸವೇಶ್ವರ ನಗರ ಪೊಲೀಸ್ ಠಾಣಾ ಸರಹದ್ದಿನಲ್ಲಿ 35 ಲಕ್ಷ ಬೆಲೆಬಾಳುವ ಚಿನ್ನಾಭರಣ ಹಾಗೂ ಬೆಳ್ಳಿ ವಸ್ತುಗಳು ಕಳ್ಳತನವಾಗಿರುವ ಬಗ್ಗೆ ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ
ಈ ಪ್ರಕರಣದ ತನಿಖೆಯನ್ನು ಕೈಗೊಂಡ ಬಸವೇಶ್ವರನಗರ ಪೊಲೀಸರು
ವಿವಿಧಾಯಮಗಳಲ್ಲಿ ತನಿಖೆಯನ್ನು ಕೈಗೊಂಡು ಖಚಿತ ಮಾಹಿತಿಯನ್ನು ಕಲೆ ಹಾಕಿದ ಪೊಲೀಸರು ಕುರುಬರಹಳ್ಳಿ ವೃತ್ತದ ಬಳಿ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ಮಾಡಲಾಗಿ ಬಾಲ್ಕನಿಯ ಬಾಗಿಲಿನಿಂದ ಮನೆಗೆ ಪ್ರವೇಶಿಸಿ ಒಂದು ರೈಮಂಡ್ ವೈಲ್ ಕಂಪನಿಯ ಕೈಗಡಿಯಾರ ಒಂದು ಪ್ಲಾಟಿನಮ್ ಚೈನ್ ಮೂರು ಚಿನ್ನದ ಓಲೆಗಳು 300 ಅಮೆರಿಕನ್ ಡಾಲರ್ ಕಳ್ಳತನ ಮಾಡಿರುವುದಾಗಿ ತಪ್ಪು ಒಪ್ಪಿಕೊಂಡಿರುತ್ತಾನೆ
ಈ ಕಳ್ಳತನದಲ್ಲಿ ಮತ್ತಿಬ್ಬರು ಸಹಚರರೊಂದಿಗೆ ಸೇರಿಕೊಂಡು ಕೃತ್ಯ ಎಸೆಯಾಗಿರುವುದಾಗಿ ಆರೋಪಿ ತಿಳಿಸಿದ್ದು ಮತ್ತಿಬ್ಬರು ವ್ಯಕ್ತಿಗಳನ್ನು ಜೆಸಿ ನಗರದ ವಾಸದ ಮನೆಯ ಬಳಿ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡರು

ಮೂವರು ಆರೋಪಿಗಳನ್ನು ಸುದೀರ್ಘವಾಗಿ ವಿಚಾರಣೆಗೊಳಪಡಿಸಿದ ಪೊಲೀಸರು ಎರಡು ಪ್ರಕರಣದಲ್ಲಿ ಕಳುವು ಮಾಡಿದ್ದ ಚಿನ್ನದ ಚೈನು ಕುರುಬರ ಹಳ್ಳಿಯಲ್ಲಿರುವ ಮಣಪ್ಪುರಂ ಫೈನಾನ್ಸ್ ಕಚೇರಿಯಲ್ಲಿ ಗಿರವಿ ಇಟ್ಟಿರುವುದಾಗಿ ಹಾಗೂ ರಾಜಾಜಿನಗರದಲ್ಲಿ ನಿರ್ಮಾಣದ ಹಂತದಲ್ಲಿರುವ ಕಟ್ಟಡ ಒಂದರಲ್ಲಿ ಕಳುವು ಮಾಡಿದ ಇತರೆ ವಸ್ತುಗಳನ್ನು ಬಚ್ಚಿಟ್ಟಿರುವದಾಗಿ ಆರೋಪಿಗಳು ತಿಳಿಸಿರುತ್ತಾರೆ
ಈ ಮೂವರು ಆರೋಪಿಗಳ ಬಂದನದಿಂದ ಬಸವೇಶ್ವರ ಪೊಲೀಸ್ ಠಾಣೆಯ ಹಗಲು ಮನೆ ಕಳವು ಪ್ರಕರಣಗಳು ಪತ್ತೆಯಾಗಿರುತ್ತದೆ
ಸುಮಾರು 35 ಲಕ್ಷ ಬೆಲೆಬಾಳುವ ವಸ್ತುಗಳನ್ನು ಬಸವೇಶ್ವರನಗರ ಪೊಲೀಸರು ವಶಪಡಿಸಿಕೊಂಡಿರುತ್ತಾರೆ
ಈ ಕಾರ್ಯಾಚರಣೆಯನ್ನು ಉಪ ಪೊಲೀಸ್ ಆಯುಕ್ತರು ಪಶ್ಚಿಮ ವಿಭಾಗ ಗಿರೀಶ್ ಐಪಿಎಸ್ರವರ ನೇತೃತ್ವದಲ್ಲಿ ಚಂದನ್ ಕುಮಾರ್ ಎನ್ ಸಹಾಯಕ ಪೊಲೀಸ್ ಕಮಿಷನರ್ ವಿಜಯನಗರ ಉಪ ವಿಭಾಗ ರವರ ಮಾರ್ಗದರ್ಶನದಲ್ಲಿ ಬಸವೇಶ್ವರ ನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಚಿಕ್ಕಸ್ವಾಮಿ ಮತ್ತು ಅಧಿಕಾರಿ ಸಿಬ್ಬಂದಿಗಳ ತಂಡ ಈ ಪ್ರಕರಣವನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿರುತ್ತಾರೆ
ವರದಿ
ಶಶಿಕುಮಾರ್ ವಿ









