ಮಾನ್ಯ ಪ್ರದೀಪ್ ಗುಂಟಿ, ಐ.ಪಿ.ಎಸ್. ಪೊಲೀಸ್ ವರೀಷ್ಠಾಧಿಕಾರಿಗಳು, ಬೀದರ ಜಿಲ್ಲೆ ರವರ ನೇರ ನಿರ್ದೇಶನ ಮತ್ತು ಮಾರ್ಗದರ್ಶನದಂತೆ, ” ಜಿಲ್ಲೆಯನ್ನು ಶಾಂತಯುತವಾಗಿ ಇಡಲು ಕಾನೂನು ಸೂ ವ್ಯವಸ್ಥೆ ಕಾಪಾಡುವುದು ಅತೀ ಮುಖ್ಯವಾಗಿದ್ದು, ಈ ನಿಟ್ಟಿನಲ್ಲಿ ಕಳೆದ ಒಂದು ವಾರದಲ್ಲಿ ಮಾರ್ಕೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೀದರ ಭಿಕ್ಷು ಭಿಕ್ಷುಣ & ಪಾಸರ ಪಾಸಕಿಯರ ಸಂಘದ ವತಿಯಿಂದ ಭೋಧಗಯ ಮಹಾಭೋಧಿ ಮಹಾವಿಹಾರ ಮುಕ್ತಿ ಆಂದೋಲನ, ಚಿಂತಾಕಿ ಪೊಲೀಸ್ ಠಾಣಾ ವ್ಯಾಪ್ತಿಯ ಬರದಾಪೂರ ಗ್ರಾಮದಲ್ಲಿ ದಸ್ತಮಹೇಬುಬಸುಭಾನಿ ಜಾತ್ರಾ, ಮುಡುಬಿ ಪೊಲೀಸ್ ಠಾಣಾ ವ್ಯಾಪ್ತಿಯ ಘಾಟ್ ಹಿಪ್ಪರಗ ಗ್ರಾಮದಲ್ಲಿ ಶ್ರೀ ರಾಮಲಿಂಗೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಶ್ರೀ ರಾಮಲಿಂಗೇಶ್ವರ ಪಲ್ಲಕ್ಕಿ ಮೆರವಣಿಗೆ, ಹಳ್ಳಿಖೇಡ್-ಬಿ ಪೊಲೀಸ್ ಠಾಣಾ ವ್ಯಾಪ್ತಿಯ ದುಬಲಗುಂಡಿ ಗ್ರಾಮದಲ್ಲಿ. ಶ್ರೀ ದೇವರ ದಾಸಿಮಯ್ಯ ರವರ ಜಯಂತಿ ಪ್ರಯುಕ್ತ ಮೆರವಣಿಗೆ, ಹಾಗೂ ಅತೀ ಮುಖ್ಯವಾಗಿ ಜಿಲ್ಲಾದಾದ್ಯಂತ ರಂಜಾನ್ ಹಬ್ಬದ ಪ್ರಯುಕ್ತ ಬ/ಬ, ಜಿಲ್ಲಾದಾದ್ಯಂತ ರಾಜಕೀಯ ಪ್ರತಿ ಭಟನಾ ಬ/ಬ, ಸಾಂಸ್ಕೃತಿಕ ಕಾರ್ಯಕ್ರಮ, ಜಯಂತಿ ಬ/ಬಗಳನ್ನು ಹಾಗೂ ಜಿಲ್ಲೆಯಲ್ಲಿ ಗಣ್ಯರ ಮತ್ತು ಅತೀ ಗಣ್ಯರ ಕಾರ್ಯಕ್ರಮಗಳು, ಪ್ರವಾಸಗಳ ಸಮಯದಲ್ಲಿ ಅವರ ಸುರಕ್ಷತೆಯನ್ನು ಒದಗಿಸುದ್ದು ಮತ್ತು ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ಜರುಗದಂತೆ ಸೂಕ್ತ ಕಾನೂನು ಸುವ್ಯವಸ್ಥೆಗೆ ಯಶಸ್ವಿಯಾಗಿ ಜಿಲ್ಲೆಯ ಪೊಲೀಸರು ನಿರ್ವಹಿಸಿರುತ್ತಾರೆ.

ಜಿಲ್ಲೆಯ ಮೂರು ಉಪ-ವಿಭಾಗದ ಅಧಿಕಾರಿ ಮತ್ತು ಸಿಬ್ಬಂದಿಯವರು ತಮ್ಮ ತಮ್ಮ ಕಾರ್ಯ ವ್ಯಾಪ್ತಿಯಲ್ಲಿ ಕಾನೂನು ಸೂ ವ್ಯವಸ್ಥೆ ಕಾಡುವಲ್ಲಿ ಅಚ್ಚು ಕಟ್ಟಾಗಿ ಬ/ಬ ಕರ್ತವ್ಯ ನಿರ್ವಹಿಸಿದ ಅಧಿಕಾರಿ, ಸಿಬ್ಬಂದಿಯವರ ಕಾರ್ಯಕ್ಕೆ ಶ್ಲಾಘಿಸಲಾಗಿದೆ.








