ಬೆಂಗಳೂರಿನಲ್ಲಿ ಸಿಸಿಬಿ ಭರ್ಜರಿ ಕಾರ್ಯಾಚರಣೆ: ಅಕ್ರಮ ಪಿಸ್ತೂಲ್ ಮತ್ತು 50 ಜೀವಂತ ಗುಂಡುಗಳ ವಶ, ಇಬ್ಬರ ಬಂಧನ
ಬೆಂಗಳೂರು: ನಗರದಲ್ಲಿ ಅಕ್ರಮವಾಗಿ ಶಸ್ತ್ರಾಸ್ತ್ರಗಳನ್ನು ಸರಬರಾಜು ಮಾಡುತ್ತಿದ್ದ ಜಾಲವನ್ನು ಸಿಸಿಬಿ ಪೊಲೀಸರು ಭೇದಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಿಂದ ಮಾರಕಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.
ಅಕ್ರಮವಾಗಿ ಶಸ್ತ್ರಾಸ್ತ್ರ ತರಿಸಿಕೊಳ್ಳುತ್ತಿದ್ದ ಬೆಂಗಳೂರಿನ ಒಬ್ಬ ವ್ಯಕ್ತಿ ಹಾಗೂ ಶಸ್ತ್ರಾಸ್ತ್ರ ಸರಬರಾಜು ಮಾಡುತ್ತಿದ್ದ ಹೊರರಾಜ್ಯದ ಮತ್ತೊಬ್ಬ ವ್ಯಕ್ತಿ ಸೇರಿ ಒಟ್ಟು ಇಬ್ಬರನ್ನು ಬಂಧಿಸಲಾಗಿದೆ.
ಒಂದು 0.32 ಎಂ.ಎಂ. ಕಂಟ್ರಿಮೇಡ್ ಪಿಸ್ತೂಲ್.50 ಜೀವಂತ ಗುಂಡುಗಳು (Live Bullets)
ಸಿಸಿಬಿ ಇನ್ಸ್ಪೆಕ್ಟರ್ ರಕ್ಷಿತ್ ಎ.ಕೆ. ಅವರಿಗೆ ಲಭಿಸಿದ ಖಚಿತ ಮಾಹಿತಿಯ ಮೇರೆಗೆ ಫೆಬ್ರವರಿ 25, 2026 ರಂದು ಈ ಕಾರ್ಯಾಚರಣೆ ನಡೆಸಲಾಗಿದೆ. ಆರೋಪಿಗಳ ವಿರುದ್ಧ ಸಿಸಿಬಿ ಪೊಲೀಸ್ ಠಾಣೆಯಲ್ಲಿ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಮಾನ್ಯ ನ್ಯಾಯಾಲಯವು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಶ್ರೀ ಸೀಮಾಂತ್ ಕುಮಾರ್ ಸಿಂಗ್ (IPS)ಅವರ ನಿರ್ದೇಶನದಲ್ಲಿ, ಅಪರ ಪೊಲೀಸ್ ಆಯುಕ್ತ (ಅಪರಾಧ) ಶ್ರೀ ಅಜಯ್ ಹಿಲೋರಿ (IPS) ಮತ್ತು ಡಿಸಿಪಿ ಶ್ರೀ ರಾಜಾ ಇಮಾಮ್ ಕಾಸಿಂ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ಯಶಸ್ವಿಯಾಗಿದೆ. ಸಿಸಿಬಿ ಎಸಿಪಿಗಳಾದ ಮಹಾನಂದ್ ಮತ್ತು ಎಂ.ಎನ್. ನಾಗರಾಜು ನೇತೃತ್ವದ ಇನ್ಸ್ಪೆಕ್ಟರ್ಗಳ ತಂಡ ಈ ಪ್ರಕರಣವನ್ನು ಭೇದಿಸಿದೆ.









