ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಕಾರಿನ ಡಿಕ್ಕಿಯಲ್ಲಿದ್ದ ಬೆಲೆಬಾಳುವ ವಸ್ತುಗಳು ಕಳ್ಳತನವಾಗಿರುವ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ
ಬೆಳಗ್ಗೆ 8:00 ವೇಳೆಗೆ ಕೋರಮಂಗಲದಿಂದ ಕಬ್ಬನ್ ಪಾರ್ಕ್ ಗೆ ವಾಕ್ಮಾಡುವ ಸಲುವಾಗಿ ಕಾರಿನಲ್ಲಿ ಬಂದಿದ್ದ ಪಿರಿಯಾದುದಾರರು ಕಾರನ್ನು ಕ್ವೀನ್ಸ್ ರಸ್ತೆಯ ಬಸ್ ನಿಲ್ದಾಣದ ಹತ್ತಿರ ನಿಲ್ಲಿಸಿ, ಪಾರ್ಕ್ ಒಳಗಡೆ ವಾಕಿಂಗ್ ಎಂದು ಹೋಗಿರುತ್ತಾರೆ ವಾಕ್ ಮುಗಿಸಿ ಒಂಬತ್ತು ಗಂಟೆಗೆ ಕಾರ್ ಹತ್ತಿರ ಬಂದು ಕಾರಿನ ಡಿಕ್ಕಿಯಲ್ಲಿದ್ದ ಬ್ಯಾಗನ್ನು ತೆಗೆದುಕೊಳ್ಳಲು ಹೋದಾಗ ಡಿಕ್ಕಿಯಲ್ಲಿ ಬ್ಯಾಗ್ ಕಾಣೆಯಾಗಿರುತ್ತದೆ ಬ್ಯಾಗಿನಲ್ಲಿ ಇಟ್ಟಿದ್ದ ಸುಮಾರು 22 ಲಕ್ಷ ಬೆಲೆಬಾಳುವ ವಸ್ತುಗಳನ್ನು ಯಾರು ಅಪರಿಚಿತರು ಕಳುವು ಮಾಡಿಕೊಂಡು ಹೋಗಿರುತ್ತಾರೆಂದು ಪಿರಿಯಾದುದಾರರು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿರುತ್ತಾರೆ
ಈ ಪ್ರಕರಣದ ತನಿಖೆಯನ್ನು ಮುಂದುವರಿಸಿದ್ದ ಕಬ್ಬನ್ ಪಾರ್ಕ್ ಪೊಲೀಸರು ತನಿಖೆಯನ್ನು ಕೈಗೊಂಡು ಖಚಿತ ಮಾಹಿತಿ ಕಲೆ ಹಾಕಿ ಓರ್ವ ವ್ಯಕ್ತಿಯನ್ನು ಮಹಾಲಕ್ಷ್ಮಿ ಲೇಔಟ್ ನ ಗಣೇಶ ಬ್ಲಾಕ್ ಹತ್ತಿರ ವಶಕ್ಕೆ ಪಡೆದುಕೊಂಡರು
ವಶಕ್ಕೆ ಪಡೆದ ಆರೋಪಿಯನ್ನು ವಿಚಾರಣೆಗೊಳಪಡಿಸಲಾಗಿ ಈ ಪ್ರಕರಣದ ಕೃತ್ಯ ಎಸಗಿರುವುದಾಗಿ ತಪ್ಪು ಒಪ್ಪಿಕೊಂಡಿರುತ್ತಾನೆ
ಆರೋಪಿಯಿಂದ ಅದೇ ದಿನ ವಾಸದ ಮನೆಯಾದ ಲಗ್ಗೆರೆಯಿಂದ ಒಟ್ಟು 22.50 ಲಕ್ಷ ಮೌಲ್ಯದ ವಸ್ತುಗಳನ್ನು ಕಬ್ಬನ್ ಪಾರ್ಕ್ ಪೊಲೀಸರು ವಶಪಡಿಸಿಕೊಂಡಿರುತ್ತಾರೆ
ಈ ಕಾರ್ಯಾಚರಣೆಯನ್ನು ಕೇಂದ್ರ ವಿಭಾಗದ ಉಪ ಪೊಲೀಸ್ ಆಯುಕ್ತರದ ಶೇಖರ್ ಎಚ್ಟಿ ಐಪಿಎಸ್ ರವರ ಮಾರ್ಗದರ್ಶನದಲ್ಲಿ ಕಬ್ಬನ್ ಪಾರ್ಕ್ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಬಾಲಕೃಷ್ಣ ಸಿ ರವರ ನೇತೃತ್ವದಲ್ಲಿ ಹಾಗೂ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಗಿರೀಶ್ A K ಹಾಗೂ ಅಧಿಕಾರಿ ಸಿಬ್ಬಂದಿಗಳ ತಂಡ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿರುತ್ತಾರೆ.
ವರದಿ
ಶಶಿಕುಮಾರ್ ವಿ









