ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಏಪ್ರಿಲ್ 5 ರಂದು ನಡೆದ ಆರ್.ಸಿ.ಬಿ ಮತ್ತು ಸಿ.ಎಸ್.ಕೆ ನಡುವಿನ ಹೈವೋಲ್ಟೇಜ್ ಪಂದ್ಯದ ವೇಳೆ ಟಿಕೆಟ್ಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ಜಾಲವನ್ನು ಸಿಸಿಬಿಯ ವಿಶೇಷ ವಿಚಾರಣಾ ದಳ ಭೇದಿಸಿದೆ.
ನಗರ ಪೊಲೀಸ್ ಆಯುಕ್ತರಾದ ಶ್ರೀ ಸೀಮಾಂತ್ ಕುಮಾರ್ ಸಿಂಗ್ ಅವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ, ಕಬ್ಬನ್ಪಾರ್ಕ್ ಮತ್ತು ಚಾಮರಾಜಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಟಿಕೆಟ್ ದಂಧೆಯಲ್ಲಿ ತೊಡಗಿದ್ದ ಒಟ್ಟು 11 ಮಂದಿಯನ್ನು ಬಂಧಿಸಲಾಗಿದೆ.
ಬಂಧಿತರಿಂದ ಒಟ್ಟು 28 ಐಪಿಎಲ್ ಟಿಕೆಟ್ಗಳು, 08 ಮೊಬೈಲ್ ಫೋನ್ಗಳು ಮತ್ತು ಆನ್ಲೈನ್ನಲ್ಲಿ ಟಿಕೆಟ್ ಮಾರಾಟ ಮಾಡಲು ಯತ್ನಿಸಿದ ವಾಟ್ಸಾಪ್ ಸ್ಕ್ರೀನ್ಶಾಟ್ ಪ್ರತಿಗಳನ್ನು ವಶಕ್ಕೆ ಪಡೆಯಲಾಗಿದೆ. ಇವುಗಳ ಒಟ್ಟು ಮೌಲ್ಯ ಅಂದಾಜು 4,53,000ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಬ್ಬನ್ಪಾರ್ಕ್ ಠಾಣೆಯಲ್ಲಿ 10 ಮಂದಿ ಹಾಗೂ ಚಾಮರಾಜಪೇಟೆ ಠಾಣೆಯಲ್ಲಿ ಓರ್ವ ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿದ್ದು, ಸಿಸಿಬಿ ಅಧಿಕಾರಿಗಳ ತಂಡ ಹೆಚ್ಚಿನ ತನಿಖೆಯನ್ನು ಮುಂದುವರಿಸಿದೆ. ಸಾರ್ವಜನಿಕರು ಅಧಿಕೃತ ಮೂಲಗಳಿಂದ ಮಾತ್ರ ಟಿಕೆಟ್ ಖರೀದಿಸಬೇಕೆಂದು ಪೊಲೀಸ್ ಇಲಾಖೆ ಮನವಿ ಮಾಡಿದೆ.
ಈ ಕಾರ್ಯಾಚರಣೆಯನ್ನು ಬೆಂಗಳೂರು ನಗರದ ಪೊಲೀಸ್ ಆಯುಕ್ತರಾದ ಶ್ರೀ.ಸೀಮಾಂತ್ ಕುಮಾರ್ ಸಿಂಗ್, ಐಪಿಎಸ್ ರವರ ಮಾರ್ಗದರ್ಶನದಲ್ಲಿ, ಶ್ರೀ.ಅಜಯ್ ಹಿಲೋರಿ, ಅಪರ ಪೊಲೀಸ್ ಆಯುಕ್ತರು, ಅಪರಾಧ ಮತ್ತು ಶ್ರೀ.ಶ್ರೀಹರಿಬಾಬು.ಬಿ.ಎಲ್, ಉಪ ಪೊಲೀಸ್ ಆಯುಕ್ತರು, ಅಪರಾಧ-1 ರವರ ನೇತೃತ್ವದಲ್ಲಿ, ಸಿಸಿಬಿಯಲ್ವಿಶೇಷ ವಿಚಾರಣಾ ದಳದ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀ.ಗೋಪಾಲ್ ಡಿ.ಜೋಗಿನ್ಮತ್ತು ಪೊಲೀಸ್ ಇನ್ಸ್ಪೆಕ್ಟರ್ ಶ್ರೀ.ದಯಾನಂದ.ಎಂ.ಜೆ, ಶ್ರೀ.ವರುಣ್ ಕುಮಾರ್.ಎಂ.ಆರ್, ಡಾ:ಬಿ.ಎಸ್.ಸುಧಾಕರ್, ಶ್ರೀ.ವೀರೇಂದ್ರ ಪ್ರಸಾದ್, ಶ್ರೀ.ಷಣ್ಮುಗಂ.ಎಂ. ಮತ್ತು ಇತರೆ ಅಧಿಕಾರಿ ಸಿಬ್ಬಂದಿಯವರ ತಂಡ ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.








