3 ಕಾರುಗಳು, 2 ದ್ವಿ-ಚಕ್ರ ವಾಹನಗಳ ವಶ. ಮೌಲ್ಯ 10.40 ಲಕ್ಷ.
ಕಾಡುಗೋಡಿ ಪೊಲೀಸ್ ಠಾಣೆಯ ಸರಹದ್ದಿನಲ್ಲಿ ವಾಸವಿರುವ ಪಿರಾದುದಾರರು, ದಿನಾಂಕ:19/03/2025 ರಂದು ಪಿರಾದುದಾರರು ತಮ್ಮ ದ್ವಿ-ಚಕ್ರ ವಾಹನವನ್ನು ಎ.ಕೆ.ಜಿ ಕಾಲೋನಿ, ಚನ್ನಸಂದ್ರದ ಹತ್ತಿರ ನಿಲ್ಲಿಸಿದ್ದು, ಅದೇ ದಿನ ವಾಪಸ್ ಬಂದು ನೋಡಲಾಗಿ, ಪಿರಾದುದಾರರ ದ್ವಿ-ಚಕ್ರ ವಾಹನವನ್ನು ಯಾರೋ ಅಪರಿಚಿತರು ಕಳವು ಮಾಡಿಕೊಂಡು ಹೋಗಿರುತ್ತಾರೆಂದು ದೂರಿನ್ನು ಸಲ್ಲಿಸಿರುತ್ತಾರೆ. ಈ ಕುರಿತು ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಪ್ರಕರಣದ ತನಿಖೆಯನ್ನು ಮುಂದುವರೆಸಿದ ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು, ಬಾತ್ಮೀದಾರರಿಂದ ಖಚಿತ ಮಾಹಿತಿಯನ್ನು ಕಲೆಹಾಕಿ, ದಿನಾಂಕ:10/04/2025 ರಂದು ಹೋಫ್ ಫಾರಂ, ಚನ್ನಸಂದ್ರ ವೃತ್ತದ ಬಳಿ ಪ್ರಕರಣದಲ್ಲಿ ಕಳುವಾಗಿದ್ದ ದ್ವಿ-ಚಕ್ರ ವಾಹನ ಸಮೇತ ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆಯಲಾಯಿತು. ವಶಕ್ಕೆ ಪಡೆದ ವ್ಯಕ್ತಿಗಳನ್ನು ವಿಚಾರಣೆಗೊಳಪಡಿಸಲಾಗಿ ಈ ಪ್ರಕರಣದಲ್ಲಿ ದ್ವಿ-ಚಕ್ರ ವಾಹನವನ್ನು ಕಳವು ಮಾಡಿರುವುದಾಗಿ ತನ್ನೊಪ್ಪಿಕೊಂಡಿರುತ್ತಾರೆ. ಹಾಗೂ ಬೆಂಗಳೂರಿನ ಕಾಡುಗೋಡಿ, ವರ್ತೂರು ಮತ್ತು ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಟ್ಟು 3 ಕಾರುಗಳನ್ನು ಕಳವು ಮಾಡಿರುವುದಾಗಿ ತಿಳಿಸಿರುತ್ತಾರೆ.
ದಿನಾಂಕ: 11/04/2025 ರಂದು ಆರೋಪಿಗಳಿಬ್ಬರನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ, 6 ದಿನಗಳ ಕಾಲ ಪೊಲೀಸ್ ಅಭಿರಕ್ಷೆಗೆ ಪಡೆದುಕೊಳ್ಳಲಾಯಿತು.
ಪೊಲೀಸ್ ಅಭಿರಕ್ಷೆಗೆ ಪಡೆದ ಆರೋಪಿಗಳಿಬ್ಬರನ್ನು ಸುದೀರ್ಘವಾಗಿ ವಿಚಾರಣೆಗೊಳಪಡಿಸಿದಾಗ, ಕಳವು ಮಾಡಿದ 3 ಕಾರುಗಳ ಪೈಕಿ 2 ಕಾರುಗಳನ್ನು ದಿಣ್ಣೂರಿನ ಟೆಂಪೊ ಸ್ಟ್ಯಾಂಡ್ ಬಳಿ ನಿಲ್ಲಿಸಿರುವುದಾಗಿ, 1 ಕಾರನ್ನು ವೈಟ್ ಫೀಲ್ಡ್-ಹೊಸಕೋಟೆ ಮುಖ್ಯರಸ್ತೆಯ ಖಾಲಿ ಜಾಗವೊಂದರಲ್ಲಿ ನಿಲ್ಲಿಸಿದ್ದು, 1 ದ್ವಿ-ಚಕ್ರ ವಾಹನವನ್ನು ಸೊಟ್ಟೇನಹಳ್ಳಿ ನೀಲಗಿರಿ ತೋಪಿನಲ್ಲಿ ನಿಲ್ಲಿಸಿರುವುದಾಗಿ ತಿಳಿಸಿರುತ್ತಾರೆ. ದಿನಾಂಕ:13/04/2025 ರಂದು 2 ಕಾರುಗಳನ್ನು ದಿಣ್ಣೂರಿನ ಟೆಂಪೊ ಸ್ಟ್ಯಾಂಡ್ ಬಳಿಯಿಂದ ವಶಪಡಿಸಿಕೊಳ್ಳಲಾಯಿತು.
ದಿನಾಂಕ: 14/04/2025 ರಂದು ಮತ್ತೊಂದು ಕಾರನ್ನು ವೈಟ್ ಫೀಲ್ಡ್-ಹೊಸಕೋಟೆ ಮುಖ್ಯರಸ್ತೆಯ ಖಾಲಿ ಜಾಗವೊಂದರಲ್ಲಿ ನಿಲ್ಲಿಸಿದ್ದನ್ನು ವಶಪಡಿಸಿಕೊಳ್ಳಲಾಯಿತು. ಅದೇ ದಿನ ಸೊಣ್ಣೆನಹಳ್ಳಿ ನೀಲಗಿರಿ ತೋಪಿನಲ್ಲಿ ನಿಲ್ಲಿಸಿದ್ದ 1 ದ್ವಿ-ಚಕ್ರ
ವಾಹನವನ್ನು ವಶಪಡಿಸಿಕೊಳ್ಳಲಾಯಿತು.
ಈ ಪ್ರಕರಣದ ಆರೋಪಿಗಳಿಬ್ಬರಿಂದ 03 ಕಾರುಗಳು ಮತ್ತು 02 ದ್ವಿ-ಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿರುತ್ತದೆ.
ಇವುಗಳ ಒಟ್ಟು ಮೌಲ್ಯ ₹ 10,40,000/- (ಹತ್ತು ಲಕ್ಷದ ನಲವತ್ತು ಸಾವಿರ ರೂಪಾಯಿ).
ಆರೋಪಿಗಳಿಬ್ಬರ ಬಂಧನದಿಂದ 1) ಕಾಡುಗೋಡಿ ಪೊಲೀಸ್ ಠಾಣೆಯ-01 ಕಾರು ಕಳವು ಪ್ರಕರಣ, ಮತ್ತು 2 ದ್ವಿ-ಚಕ್ರ ವಾಹನ ಕಳವು ಪ್ರಕರಣಗಳು, 2) ವರ್ತೂರು ಪೊಲೀಸ್ ಠಾಣೆಯ-01 ಕಾರು ಕಳವು ಪ್ರಕರಣ, ಹಾಗೂ 3) ಯಲಹಂಕ ಪೊಲೀಸ್ ಠಾಣೆಯ-01 ಕಾರು ಕಳವು ಪ್ರಕರಣ ಸೇರಿದಂತೆ ಒಟ್ಟು 5 ವಾಹನ ಕಳವು ಪ್ರಕರಣಗಳು ಪತ್ತೆಯಾಗಿರುತ್ತವೆ.
ದಿನಾಂಕ:16/04/2025 ರಂದು ಆರೋಪಿಗಳಿಬ್ಬರನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಆರೋಪಿಗಳಿಬ್ಬರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತೆ.
ಈ ಕಾರ್ಯಾಚರಣೆಯನ್ನು ಉಪ ಪೊಲೀಸ್ ಆಯುಕ್ತರು, ವೈಟ್ ಫೀಲ್ಡ್ ಡಾ:ಶಿವಕುಮಾರ್ ಗುಣಾರೇ, ಐಪಿಎಸ್ ಸಹಾಯಕ ಪೊಲೀಸ್ ಆಯುಕ್ತರು, ವೈಟ್ ಫೀಲ್ಡ್ ಉಪ ವಿಭಾಗ ಶ್ರೀಮತಿ.ರೀನಾ ಸುವರ್ಣ ರವರ ಮಾರ್ಗದರ್ಶನದಲ್ಲಿ ಕಾಡುಗೋಡಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಶ್ರೀ.ರಂಗಸ್ವಾಮಿ. ಹೆಚ್.ಎಂ ಹಾಗೂ ಅಧಿಕಾರಿ/ಸಿಬ್ಬಂದಿರವರ ತಂಡ ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.









