ಮೈಕೋ ಲೇಔಟ್ ಪೊಲೀಸ್ ಠಾಣಾ ಸರಹದ್ದಿನ, ಕುವೆಂಪು ನಗರ ಬಿ.ಟಿ.ಎಂ ಲೇಔಟ್ನ ಪಿ.ಜಿ ಯೊಂದರಲ್ಲಿ ವಾಸವಿರುವ ಪಿರಾದುದಾರರು, ದಿನಾಂಕ:24/11/2024 ರಂದು ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಪಿರಾದುದಾರರು ದಿನಾಂಕ:23/11/2024 ರಂದು ಸಂಜೆ ದ್ವಿ-ಚಕ್ರ ವಾಹನವನ್ನು ಪಿ.ಜಿ ಯ ಮುಂಭಾಗದಲ್ಲಿ ನಿಲ್ಲಿಸಿ ಹೋಗಿದ್ದು, ದಿನಾಂಕ:24/11/2024 ರಂದು ಮಧ್ಯಾಹ್ನ ಬಂದು ದ್ವಿ-ಚಕ್ರ ವಾಹನವನ್ನು ನೋಡಲಾಗಿ, ಯಾರೋ ಅಪರಿಚಿತರು ದ್ವಿ-ಚಕ್ರ ವಾಹನವನ್ನು ಕಳವು ಮಾಡಿಕೊಂಡು ಹೋಗಿರುವುದಾಗಿ ದೂರಿನಲ್ಲಿ ತಿಳಿಸಿರುತ್ತಾರೆ. ಈ ಕುರಿತು ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಪ್ರಕರಣದ ತನಿಖೆಯನ್ನು ಮುಂದುವರೆಸಿದ ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು, ಬಾತ್ಮೀದಾರರಿಂದ ಖಚಿತ ಮಾಹಿತಿಯನ್ನು ಕಲೆಹಾಕಿ, ದಿನಾಂಕ:05/12/2024 ರಂದು ಅರೆಕೆರೆ ಸಾಮ್ರಾಟ್ ಲೇಔಟ್ ಬಳಿ ಓರ್ವ ವ್ಯಕ್ತಿಯನ್ನು ಪ್ರಕರಣದಲ್ಲಿ ಕಳುವಾಗಿದ್ದ 1-ದ್ವಿ-ಚಕ್ರ ವಾಹನ ಮತ್ತು 10 ಮೊಬೈಲ್ ಫೋನ್ಗಳ ಸಮೇತ ವಶಕ್ಕೆ ಪಡೆದುಕೊಳ್ಳಲಾಯಿತು. ವಶಕ್ಕೆ ಪಡೆದ ವ್ಯಕ್ತಿಯನ್ನು ವಿಚಾರಣೆ ಮಾಡಲಾಗಿ, ಈ ಪ್ರಕರಣದಲ್ಲಿ ದ್ವಿ-ಚಕ್ರ ವಾಹನವನ್ನು ಕಳವು ಮಾಡಿರುವುದಾಗಿ ತನ್ನೊಪ್ಪಿಕೊಂಡಿರುತ್ತಾನೆ. ಹಾಗೂ ಬೆಂಗಳೂರು ನಗರದ ವಿವಿಧ ಕಡೆಗಳಲ್ಲಿ ದ್ವಿ-ಚಕ್ರ ವಾಹನ ಮತ್ತು ಮೊಬೈಲ್ ಫೋನ್ಗಳನ್ನು ಕಳವು ಮಾಡಿರುವುದಾಗಿ ತಿಳಿಸಿರುತ್ತಾನೆ.
ದಿನಾಂಕ:06/12/2024 ರಂದು ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ, 8 ದಿನಗಳ ಕಾಲ ಪೊಲೀಸ್ ಅಭಿರಕ್ಷೆಗೆ ಪಡೆದುಕೊಳ್ಳಲಾಯಿತು.

ಪೊಲೀಸ್ ಅಭಿರಕ್ಷೆಗೆ ಪಡೆದ ಆರೋಪಿಯನ್ನು ಸುದೀರ್ಘವಾಗಿ ವಿಚಾರಣೆ ಮಾಡಲಾಗಿ, ಬೆಂಗಳೂರಿನ ವಿವಿಧ ಕಡೆಗಳಲ್ಲಿ ಕಳವು ಮಾಡಿದ್ದ ದ್ವಿ-ಚಕ್ರ ವಾಹನವನ್ನು ಬಿ.ಟಿ.ಎಂ.ಲೇಔಟ್ನ ವಿವೇಕಾನಂದ ಮೈದಾನದ ಪಕ್ಕದ ಖಾಲಿ ಜಾಗದಲ್ಲಿ ನಿಲ್ಲಿಸಿರುವುದಾಗಿ ತಿಳಿಸಿದ್ದು, ದಿನಾಂಕ:07/12/2024 ರಂದು 1 ದ್ವಿ-ಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಯಿತು.
ದಿನಾಂಕ:08/12/2024 ರಂದು ಆರೋಪಿಯು ಬನ್ನೇರುಘಟ್ಟದಲ್ಲಿ ವಾಸವಿರುವ ಆತನ ಮನೆಯಿಂದ 30 ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಳ್ಳಲಾಯಿತು.
ಈ ಪ್ರಕರಣದ ಆರೋಪಿಯ ವಶದಿಂದ ಒಟ್ಟಾರೆಯಾಗಿ 2 ದ್ವಿ-ಚಕ್ರ ವಾಹನಗಳು ಮತ್ತು 40 ಮೊಬೈಲ್ಫೋನ್ಗಳನ್ನು ವಶಪಡಿಸಿಕೊಳ್ಳಲಾಗಿರುತ್ತದೆ. ಇವುಗಳ ಮೌಲ್ಯ * 5,60,000/-(ಐದು ಲಕ್ಷದ ಆರವತ್ತು ಸಾವಿರ ರೂಪಾಯಿ).
ಈ ಪ್ರಕರಣದ ಆರೋಪಿಯ ಬಂಧನದಿಂದ, ಮೈಕೋಲೇಔಟ್ ಪೊಲೀಸ್ ಠಾಣೆಯ-2 ದ್ವಿ-ಚಕ್ರ ವಾಹನ ಕಳವು ಪ್ರಕರಣಗಳು ಪತ್ತೆಯಾಗಿರುತ್ತವೆ.
ದಿನಾಂಕ:09/12/2024 ರಂದು ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತೆ.

ಈ ಕಾರ್ಯಾಚರಣೆಯನ್ನು ಬೆಂಗಳೂರು ನಗರ, ಆಗ್ನೆಯ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಶ್ರೀಮತಿ ಸಾರಾ ಫಾತೀಮಾ, ಐ.ಪಿ.ಎಸ್ ಮತ್ತು ಮೈಕೋಲೇಔಟ್ ಉಪ-ವಿಭಾಗದ ಸಹಾಯಕ ಉಪ ಪೊಲೀಸ್ ಆಯುಕ್ತರಾದ ಶ್ರೀ ಶಿವಶಂಕರ ರೆಡ್ಡಿ ರವರ ಮಾರ್ಗದರ್ಶನದಲ್ಲಿ ಮೈಕೋಲೇಔಟ್ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ರವರ ನೇತೃತ್ವದ ಅಧಿಕಾರಿ/ಸಿಬ್ಬಂದಿಗಳ ತಂಡ ಪ್ರಕರಣವನ್ನು ಪತ್ತೆ ಮಾಡುವಲ್ಲಿ
ಶ್ರೀ.ಗಿರೀಶ್.ಎಂ.ಎಲ್ಯಶಸ್ವಿಯಾಗಿರುತ್ತಾರೆ.








