ಬೆಂಗಳೂರು ನಗರದ ವಿವಿಧ ಪ್ರದೇಶಗಳಲ್ಲಿ ಮನೆ ಕನ್ನ ಕಳವು ಮಾಡುತ್ತಿದ್ದ ಹೊರರಾಜ್ಯದ ಓರ್ವ ವ್ಯಕ್ತಿಯನ್ನು ಕೆ.ಆರ್.ಪುರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಯಿಂದ 504 ಗ್ರಾಂ ಚಿನ್ನಾಭರಣ, 1 ಕೆ.ಜಿ 460 ಗ್ರಾಂ ಬೆಳ್ಳಿಯ ವಸ್ತುಗಳು ಹಾಗೂ 34,000 ನಗದು ವಶಪಡಿಸಿಕೊಳ್ಳಲಾಗಿದೆ.ವಶಪಡಿಸಿಕೊಂಡ ವಸ್ತುಗಳ ಒಟ್ಟು ಮೌಲ್ಯ 70 ಲಕ್ಷಎಂದು ಅಂದಾಜಿಸಲಾಗಿದೆ.
ಈ ಆರೋಪಿಯ ಬಂಧನದಿಂದಾಗಿ, ಕೆ.ಆರ್.ಪುರ ಮತ್ತು ರಾಮಮೂರ್ತಿನಗರ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿನ ಒಟ್ಟು 17 ಕಳವು ಪ್ರಕರಣಗಳು ಪತ್ತೆಯಾದಂತಾಗಿದೆ.
ಈ ಕಾರ್ಯಾಚರಣೆಯನ್ನು ಉಪ ಪೊಲೀಸ್ ಆಯುಕ್ತರು ವೈಟ್ ಪೀಲ್ಡ್ ಶ್ರೀ ಕೆ. ಪರಶುರಾಮ್ ಐಪಿಎಸ್, ಸಹಾಯಕ ಪೊಲೀಸ್ ಆಯುಕ್ತರು, ವೈಟ್ ಫೀಲ್ಡ್ ಉಪ ವಿಭಾಗ ಶ್ರೀಮತಿ ರೀನಾ ಸುವರ್ಣ ರವರ ಮಾರ್ಗದರ್ಶನದಲ್ಲಿ ಕೆ.ಆರ್ ಪುರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಶ್ರೀ ರಾಮಮೂರ್ತಿ.ಬಿ ಹಾಗು ಇತರೆ ಅಧಿಕಾರಿ ಮತ್ತು ಸಿಬ್ಬಂದಿಯವರ ತಂಡ ಪ್ರಕರಣವನ್ನು ಭೇಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.







