Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Indian Police News

ಪೊಲೀಸರು ಜನಸ್ನೇಹಿ ಆಗಿರಬೇಕು. ಪ್ರವಾಸಿಗರೊಂದಿಗೆ ಪ್ರೀತಿಯಿಂದ ವರ್ತಿಸಬೇಕು: ಸಿ.ಎಂ ಸೂಚನೆ

CREDOPRESS MEDIA PVT LTD by CREDOPRESS MEDIA PVT LTD
June 28, 2025
in Indian Police News,J. JOHN PREM EDITOR,Karnataka News,Karnataka State Police,Latest News,Namma Police,Namma Police News,National News,Police News
0
ಪೊಲೀಸರು ಜನಸ್ನೇಹಿ ಆಗಿರಬೇಕು. ಪ್ರವಾಸಿಗರೊಂದಿಗೆ ಪ್ರೀತಿಯಿಂದ ವರ್ತಿಸಬೇಕು: ಸಿ.ಎಂ ಸೂಚನೆ
0
SHARES
21
VIEWS
Share on FacebookShare on Twitter

ವಿಜ್ರಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು.
ಅನಗತ್ಯವಾಗಿ ಹಣ ಖರ್ಚು ಮಾಡುವುದು ವೈಭವ ಅಲ್ಲ. ಜನರ, ಪ್ರವಾಸಿಗರ ಸುರಕ್ಷತೆ ಮತ್ತು ಅನುಕೂಲಕ್ಕೆ ಪ್ರಥಮ ಆದ್ಯತೆ ಇರಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಾಡಹಬ್ಬ ಮೈಸೂರು ದಸರಾ-2025 ಆಚರಣೆ ಕುರಿತು ನಡೆದ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಸೂಚನೆಗಳನ್ನು ನೀಡಿದರು.

ಸರ್ಕಾರದ ಸಾಧನೆಗಳು, ನಾವು ಪ್ರತೀ ಇಲಾಖೆಯಲ್ಲೂ ಜಾರಿ ಮಾಡಿರುವ ಜನಪರ ಕಾರ್ಯಕ್ರಮಗಳು ಜನರಿಗೆ ಸಮರ್ಪಕವಾಗಿ ಮನವರಿಕೆ ಆಗುವ ರೀತಿಯಲ್ಲಿ ಯೋಜನೆ ರೂಪಿಸಬೇಕು.

ಈ ಬಾರಿ ರಾಜ್ಯದಾದ್ಯಂತ ಮಳೆ ಬೆಳೆ ಉತ್ತಮವಾಗಿದ್ದು, ನದಿ, ಕೆರೆಗಳು ತುಂಬಿದ್ದು, ವೈಭವದಿಂದ ದಸರಾ ಆಚರಿಸಲಾಗುವುದು.

• ಸೆಪ್ಟಂಬರ್‌ 22ರಂದು ದಸರಾ ಹಬ್ಬಕ್ಕೆ ಚಾಲನೆ ದೊರೆಯಲಿದ್ದು, ಅಕ್ಟೋಬರ್‌ 2ರಂದು ವಿಜಯದಶಮಿ, ಜಂಬೂ ಸವಾರಿ ನಡೆಯಲಿದೆ. ದಸರಾ ಈ ಬಾರಿ 10ದಿನಗಳ ಬದಲು 11ದಿನಗಳ ಕಾಲ ನಡೆಯಲಿದೆ.

• ದಸರಾಕ್ಕೆ ತನ್ನದೇ ಆದ ಚಾರಿತ್ರಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ಹಿನ್ನೆಲೆಯಿದ್ದು, ಇದಕ್ಕೆ ಪೂರಕವಾಗಿ ದಸರಾ ಆಚರಿಸಲಾಗುವುದು.
• ವಿಶ್ವ ವಿಖ್ಯಾತ ದಸರಾದ ಪರಂಪರೆಯನ್ನು ಮುಂದುವರೆಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು.

• ಕಳೆದ ವರ್ಷ ದಸರಾ ಆಚರಣೆಗೆ ಒಟ್ಟು ರೂ. 40 ಕೋಟಿ ಅನುದಾನ ಒದಗಿಸಲಾಗಿತ್ತು. ಈ ಬಾರಿ ಅದ್ದೂರಿಯಾಗಿ ದಸರಾ ಆಚರಣೆಗೆ ಬೇಕಾದಷ್ಟು ಅನುದಾನವನ್ನು ಒದಗಿಸಲಾಗುವುದು.
• ಸರ್ಕಾರದ ಸಾಧನೆಗಳನ್ನು ಮತ್ತು ಇಲಾಖಾ ಕಾರ್ಯಕ್ರಮಗಳನ್ನು ಸರಿಯಾಗಿ ಪ್ರತಿಬಿಂಬಿಸುವಂತಹ ವಸ್ತು ಪ್ರದರ್ಶನ, ಸ್ತಬ್ಧಚಿತ್ರ ಪ್ರದರ್ಶನ ಆಯೋಜಿಸಬೇಕು. ಅಕ್ಟೋಬರ್‌ 2ರಂದು ವಿಜಯದಶಮಿ ಬಂದಿರುವ ಕಾರಣ ಸ್ತಬ್ಧ ಚಿತ್ರಗಳಲ್ಲಿ ಗಾಂಧೀಜಿ ವಿಚಾರಧಾರೆಗಳಿಗೆ ಸಹ ಅವಕಾಶ ಕಲ್ಪಿಸಬೇಕು.

• ಕಲ್ಯಾಣ ಕಾರ್ಯಕ್ರಮಗಳು, ಗ್ಯಾರಂಟಿ ಯೋಜನೆಗಳ ಮಾಹಿತಿ ಒದಗಿಸಲು ವ್ಯವಸ್ಥೆ ಮಾಡಬೇಕು.

• ದಸರಾ ಸಂದರ್ಭದಲ್ಲಿ ಜನದಟ್ಟಣೆ ನಿಯಂತ್ರಣಕ್ಕೆ ಹೆಚ್ಚಿನ ಒತ್ತು ನೀಡಬೇಕು. 10ಲಕ್ಷಕ್ಕೂ ಹೆಚ್ಚು ಮಂದಿ ಸೇರುವ ಸಂದರ್ಭ ಇದಾಗಿದೆ. ವಿದೇಶಿಗರೂ ಹೆಚ್ಚಿನ ಪ್ರಮಾಣದಲ್ಲಿ ಆಗಮಿಸುತ್ತಾರೆ. ಯಾವುದೇ ಕಾರಣಕ್ಕೂ ಅನಾಹುತ ಸಂಭವಿಸದಂತೆ ಎಲ್ಲಾ ಕಡೆ ಮುನ್ನೆಚ್ಚರಿಕೆ ವಹಿಸಬೇಕು.

• ಅರಮನೆ ಮುಂಭಾಗದಲ್ಲಿ ಆಸನದ ವ್ಯವಸ್ಥೆಯನ್ನು ಕಳೆದ ಬಾರಿಗಿಂತ ಈ ಬಾರಿ ಕಡಿಮೆ ಮಾಡಿ ಜನದಟ್ಟಣೆಯನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಿ.

• ಪೊಲೀಸರು ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಬೇಕು. ಕಾನೂನು ಸುವ್ಯವಸ್ಥೆಗೆ ಯಾವುದೇ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು.

• ಚಾಮುಂಡಿ ಬೆಟ್ಟಕ್ಕೆ ಹೋಗುವ ರಸ್ತೆ, ಕೆಆರ್‌ಎಸ್‌ಗೆ ಹೋಗುವ ರಸ್ತೆ ಸೇರಿದಂತೆ ಎಲ್ಲಾ ಪ್ರಮುಖ ರಸ್ತೆಗಳನ್ನು ದುರಸ್ತಿ ಮಾಡುವ ಕಾರ್ಯವನ್ನು ಈಗಲೇ ಆರಂಭಿಸಬೇಕು.

• ಜಾನಪದ ಕಲೆಗಳನ್ನು ಪ್ರದರ್ಶಿಸಲು ವೇದಿಕೆ ಕಲ್ಪಿಸಬೇಕು. ಜಾನಪದ ಪ್ರದರ್ಶನದಲ್ಲಿ ಏಕತಾನತೆ ಇಲ್ಲದಂತೆ ನೋಡಿಕೊಳ್ಳಬೇಕು.

• ಕಳೆದ ಬಾರಿ ವಿದ್ಯುತ್‌ ದೀಪ ಅಲಂಕಾರವನ್ನು ವೈಭವದಿಂದ ಮಾಡಲಾಗಿತ್ತು. ಇದಕ್ಕೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಈ ಬಾರಿಯೂ ವಿದ್ಯುತ್‌ ದೀಪಾಲಂಕಾರವನ್ನು ಇನ್ನಷ್ಟು ಉತ್ತಮವಾಗಿ ಮಾಡಬೇಕು.

• ಎಲ್ಲಾ ಜಿಲ್ಲೆಗಳಿಂದ ಆಗಮಿಸುವ ಸ್ತಬ್ಧಚಿತ್ರಗಳು ವೈವಿಧ್ಯಮಯವಾಗಿರುವಂತೆ ನೋಡಿಕೊಳ್ಳಬೇಕು.

• ವಸ್ತು ಪ್ರದರ್ಶನದ ಮಳಿಗೆಗಳು ಉದ್ಘಾಟನೆ ಸಂದರ್ಭದಲ್ಲೇ ಪೂರ್ಣ ಪ್ರಮಾಣದಲ್ಲಿ ಸಜ್ಜುಗೊಂಡಿರಬೇಕು. ಯಾವುದೇ ಮಳಿಗೆಗಳು ಖಾಲಿಯಿರಬಾರದು.

• ಗೋಲ್ಡ್ ಕಾರ್ಡ್‌ ಯಾವುದೇ ಗೊಂದಲಕ್ಕೆ ಆಸ್ಪದವಾಗದಂತೆ ವಿತರಿಸಬೇಕು.

• ಮೈಸೂರು ನಗರದ ಸೌಂದರ್ಯವನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು.

• ದಸರಾ ವೀಕ್ಷಿಸಲು ಆಗಮಿಸುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಶೌಚಾಲಯ, ವಾಹನ ಪಾರ್ಕಿಂಗ್‌ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಸೌಲಭ್ಯಗಳನ್ನು ಕಲ್ಪಿಸಬೇಕು.

• ಈ ಬಾರಿಯೂ ದೊಡ್ಡ ಪ್ರಮಾಣದಲ್ಲಿ ಡ್ರೋಣ್‌ ಶೋ ಆಯೋಜಿಸಲಾಗುವುದು.

• ದಸರಾ ಸಂದರ್ಭದಲ್ಲಿ ಅಧಿಕಾರಿಗಳು ಜನಸಾಮಾನ್ಯರಿಗೆ ದೊರೆಯುವುದಿಲ್ಲ ಎಂಬ ದೂರುಗಳಿದ್ದು, ಇದಕ್ಕೆ ಈ ಬಾರಿ ಅವಕಾಶ ನೀಡಬಾರದು. ಜನಸಾಮಾನ್ಯರ ಕೆಲಸ ಕಾರ್ಯಗಳು, ಅಭಿವೃದ್ದಿ ಕಾರ್ಯಗಳು ಯಾವುದೇ ಕಾರಣಕ್ಕೂ ಕುಂಠಿತವಾಗಬಾರದು.

• ಈ ಬಾರಿ ದಸರಾ ಉದ್ಘಾಟನೆಗೆ ಯಾರನ್ನು ಆಹ್ವಾನಿಸಬೇಕು ಎಂಬುವುದನ್ನು ಮುಖ್ಯಮಂತ್ರಿ ಅವರ ವಿವೇಚನೆಗೆ ಬಿಡಲು ಸಭೆಯಲ್ಲಿ ನಿರ್ಧರಿಸಲಾಯಿತು.

• ಕಳೆದ ಬಾರಿ ಅರಮನೆ ಮುಂದೆ ಆಸನ ವ್ಯವಸ್ಥೆಯನ್ನು 54ಸಾವಿರಕ್ಕೆ ಹೆಚ್ಚಿಸಲಾಗಿತ್ತು. ಇದರಿಂದಾಗಿ ಜಂಬೂ ಸವಾರಿ ಸಂದರ್ಭದಲ್ಲಿ ಜನದಟ್ಟಣೆ ಉಂಟಾಗಿತ್ತು. ಈ ಬಾರಿ ಜನದಟ್ಟಣೆ ಕಡಿಮೆ ಮಾಡಲು ಕ್ರಮ ಕೈಗೊಳ್ಳಬೇಕಾಗಿದೆ. ಯಾವುದೇ ಕಾರ್ಯಕ್ರಮಗಳ ಸ್ಥಳಗಳಲ್ಲಿ ಯಾವುದೇ ಕಾರಣಕ್ಕೂ ಜನದಟ್ಟಣೆಯಾಗದಂತೆ ಎಚ್ಚರಿಕೆ ವಹಿಸಬೇಕು. ಪ್ರಜಾಪ್ರಭುತ್ವ, ಸಂವಿಧಾನ, ಅಭಿವೃದ್ಧಿ, ಉತ್ತಮ ಆಡಳಿತದ ಆಶಯದಲ್ಲಿ ದಸರಾ ಆಚರಿಸಲಾಗುವುದು. – ಡಾ. ಹೆಚ್.ಸಿ.ಮಹದೇವಪ್ಪ

• ಮೈಸೂರು ದಸರಾ ಪ್ರಾಧಿಕಾರ ಸ್ಥಾಪಿಸಿ ಅದರ ಮೂಲಕ ದಸರಾ ವ್ಯವಸ್ಥಿತವಾಗಿ ಆಚರಿಸಬೇಕು. ಕುಳಿತುಕೊಳ್ಳುವ ಸ್ಥಳಾವಕಾಶ ಹೆಚ್ಚಿಸಬೇಕು. ಪಾರ್ಕಿಂಗ್‌ ವ್ಯವಸ್ಥೆಯನ್ನು ವ್ಯವಸ್ಥಿತಗೊಳಿಸಬೇಕು-ತನ್ವೀರ್‌ ಸೇಠ್

• ಉತ್ತಮ ಮಳೆಯಾಗಿದ್ದು, ರೈತರು ಉತ್ತಮ ಬೆಳೆ ನಿರೀಕ್ಷೆಯಲ್ಲಿದ್ದಾರೆ. ನದಿಗಳು ತುಂಬಿದ್ದು, ಕೆಆರ್‌ಎಸ್‌ ಈ ಬಾರಿ ಬೇಗನೇ ತುಂಬಿದೆ. ಜಂಬೂ ಸವಾರಿ ಸಂದರ್ಭದಲ್ಲಿ ಕಲಾ ತಂಡಗಳನ್ನು ಹೊರತುಪಡಿಸಿ ಬೇರೆ ಯಾರೂ ಓಡಾಡಲು ಅವಕಾಶ ಮಾಡಬಾರದು. ಕಲಾ ತಂಡಗಳಲ್ಲಿ ವೈವಿಧ್ಯತೆ ಇರಬೇಕು- ಜಿ.ಟಿ.ದೇವೇಗೌಡ

• ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಇಕೋ ಫ್ರೆಂಡ್ಲಿ ಹಸಿರು ದಸರಾ ಆಚರಿಸಲು ಕ್ರಮ ಕೈಗೊಳ್ಳಬೇಕು. ಮಹಿಳೆಯರ ಸುರಕ್ಷತೆಗೆ ಹೆಚ್ಚಿನ ಕ್ರಮ ಕೈಗೊಳ್ಳಬೇಕು- ಪುಷ್ಪಾ ಅಮರನಾಥ

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಎಚ್.ಸಿ.ಮಹದೇವಪ್ಪ, ಕೆ.ಜೆ.ಜಾರ್ಜ್‌, ಶಿವರಾಜ ತಂಗಡಗಿ, ಕೆ. ವೆಂಕಟೇಶ್, ಸುರೇಶ್‌ ಭೈರತಿ, ಜಿ.ಟಿ.ದೇವೇಗೌಡ, ರಮೇಶ್‌ ಬಂಡಿಸಿದ್ದೇಗೌಡ, ಪುಟ್ಟರಂಗಶೆಟ್ಟಿ,, ತನ್ವೀರ್‌ ಸೇಠ್‌, ಡಾ.ಯತೀಂದ್ರ ಎಸ್‌, ಡಾ.ಡಿ.ತಿಮ್ಮಯ್ಯ, ಅನಿಲ್‌ ಕುಮಾರ್, ಎ.ಆರ್.ಕೃಷ್ಣಮೂರ್ತಿ, ಮಧು ಜಿ ಮಾದೇಗೌಡ, ಕೆ.ಹರೀಶ್‌ ಗೌಡ, ದರ್ಶನ್‌ ಧ್ರುವನಾರಾಯಣ, ಡಾ.ಮಾನಸ, ಪುಷ್ಪಾ ಅಮರನಾಥ್, ಅಯೂಬ್‌ ಖಾನ್, ಅಪರ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತಾ, ಮುಖ್ಯಮಂತ್ರಿ ಅವರ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಮತ್ತಿತರರು ಉಪಸ್ಥಿತರಿದ್ದರು.

    Tags: Karnataka NewsKarnataka State PoliceNamma PoliceNamma Police News
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ಖತರ್ನಾಕ್ ಬೈಕ್ ಕಳ್ಳನೊಬ್ಬನನ್ನು ಜಯನಗರ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಬಂಧಿಸಿದ್ದಾರೆ
    Bengaluru City Police

    ಖತರ್ನಾಕ್ ಬೈಕ್ ಕಳ್ಳನೊಬ್ಬನನ್ನು ಜಯನಗರ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಬಂಧಿಸಿದ್ದಾರೆ

    June 22, 2026
    ಶಾಲಾ ಅವರಣದಲ್ಲಿನ ಗಂಧದ ಮರ ಕಳವು,ಆರೋಪಿಗಳಿಂದ 200 ಕೆ.ಜಿ ಗಂಧದ ತುಂಡುಗಳ ಜಪ್ತಿ
    CREDOPRESS

    ಶಾಲಾ ಅವರಣದಲ್ಲಿನ ಗಂಧದ ಮರ ಕಳವು,ಆರೋಪಿಗಳಿಂದ 200 ಕೆ.ಜಿ ಗಂಧದ ತುಂಡುಗಳ ಜಪ್ತಿ

    June 19, 2026
    ಮನೆಕೆಲಸಕ್ಕೆ ಬಂದು ಕಳ್ಳತನ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರಿಂದ ಕಾರ್ಯಾಚರಣೆ
    Bengaluru City Police

    ಮನೆಕೆಲಸಕ್ಕೆ ಬಂದು ಕಳ್ಳತನ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರಿಂದ ಕಾರ್ಯಾಚರಣೆ

    June 19, 2026
    Next Post
    ಮಾಲಿಕ ಮಲಗಿದ್ದಾಗಲೇ ಮನೆಗಳ್ಳತನ, 75 ಲಕ್ಷ ಮೌಲ್ಯಯುತ ವಸ್ತುಗಳ ಜಪ್ತಿ

    ಮಾಲಿಕ ಮಲಗಿದ್ದಾಗಲೇ ಮನೆಗಳ್ಳತನ, 75 ಲಕ್ಷ ಮೌಲ್ಯಯುತ ವಸ್ತುಗಳ ಜಪ್ತಿ

    ಪರಪ್ಪನ ಅಗ್ರಹಾರ ಪೊಲೀಸರಿಂದ ಕಂಪನಿಯ ಕೆಲಸಗಾರನಿಂದಲೇ ಶೋರೂಮ್ ನಲ್ಲಿಟ್ಟಿದ್ದ 19 ಲಕ್ಷ ಬೆಲೆಬಾಳುವ ಲ್ಯಾಪ್ಟಾಪ್ಗಳು ಮೊಬೈಲ್ ಫೋನ್ ಗಳು ವಶ

    ಪರಪ್ಪನ ಅಗ್ರಹಾರ ಪೊಲೀಸರಿಂದ ಕಂಪನಿಯ ಕೆಲಸಗಾರನಿಂದಲೇ ಶೋರೂಮ್ ನಲ್ಲಿಟ್ಟಿದ್ದ 19 ಲಕ್ಷ ಬೆಲೆಬಾಳುವ ಲ್ಯಾಪ್ಟಾಪ್ಗಳು ಮೊಬೈಲ್ ಫೋನ್ ಗಳು ವಶ

    ಗೋವಿಂದರಾಜ ನಗರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ 29 ಲಕ್ಷ ಮೌಲ್ಯದ ಚಿನ್ನಾಭರ ಮತ್ತು ಒಂದು ದ್ವಿಚಕ್ರ ವಾಹನ ವಶ ಮನೆಗಳಲ್ಲಿ ಕಳುವು ಮಾಡುತ್ತಿದ್ದ ಓರ್ವ ಆರೋಪಿಯ ಬಂಧನ

    ಗೋವಿಂದರಾಜ ನಗರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ 29 ಲಕ್ಷ ಮೌಲ್ಯದ ಚಿನ್ನಾಭರ ಮತ್ತು ಒಂದು ದ್ವಿಚಕ್ರ ವಾಹನ ವಶ ಮನೆಗಳಲ್ಲಿ ಕಳುವು ಮಾಡುತ್ತಿದ್ದ ಓರ್ವ ಆರೋಪಿಯ ಬಂಧನ

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    BBMP B Dayananada Begur Police Belagavi Police Bengaluru City Police Bidar District Police Bidar Police ccb CCB Police Cen Police Chikkabalapura Police CM Siddaramaiah Credo Press CREDOPRESS MEDIA Cyber Crime Davangere police drugs news Electronic city Police Govindaraj Nagar Police Hoskote Police Hulimavu Police Indian Police News J. JOHN PREM EDITOR Jayanagar Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police Malleshwaram Police MDMA Namma Police Namma Police News Police News Prime News Sadashivnagar Police SG Palya Police Siddapura Police Yelahanka police
    No Result
    View All Result

    • 0
      Fans
      0
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ಖತರ್ನಾಕ್ ಬೈಕ್ ಕಳ್ಳನೊಬ್ಬನನ್ನು ಜಯನಗರ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಬಂಧಿಸಿದ್ದಾರೆ
    • ಶಾಲಾ ಅವರಣದಲ್ಲಿನ ಗಂಧದ ಮರ ಕಳವು,ಆರೋಪಿಗಳಿಂದ 200 ಕೆ.ಜಿ ಗಂಧದ ತುಂಡುಗಳ ಜಪ್ತಿ
    • ಮನೆಕೆಲಸಕ್ಕೆ ಬಂದು ಕಳ್ಳತನ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರಿಂದ ಕಾರ್ಯಾಚರಣೆ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved