ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಬಂದಿಖಾನೆ ಮತ್ತು ಸುಧಾರಣಾ ಸೇವೆಗಳ ಇಲಾಖೆಯು ಜಂಟಿಯಾಗಿ ಭಾನುವಾರ, 31 ಮೇ 2026 ರಂದು ಮಧ್ಯಾಹ್ನ 12.00 ಗಂಟೆಗೆ ಬೆಂಗಳೂರಿನ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿ “ಪರೋಲ್ ಹಕ್ಕು, ಸಜೆ ಕಡಿತ ಮತ್ತು ಬಡ ಕೈದಿಗಳ ಯೋಜನೆಯಡಿ ಬಿಡುಗಡೆ” ಕಾರ್ಯಕ್ರಮವನ್ನು ಆಯೋಜಿಸಿದ್ದವು.
ಭಾರತದ ಸರ್ವೋಚ್ಚ ನ್ಯಾಯಾಲಯದ ಮಾನ್ಯ ನ್ಯಾಯಮೂರ್ತಿಗಳು ಹಾಗೂ ನವದೆಹಲಿಯ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯಾಧ್ಯಕ್ಷರಾದ ಮಾನ್ಯ ಶ್ರೀ ನ್ಯಾಯಮೂರ್ತಿ ವಿಕ್ರಮ್ ನಾಥ್ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿ ‘ಕಂಪ್ಯೂಟರ್ ಲ್ಯಾಬ್’ (ಆರ್.ವಿ. ಎಂಜಿನಿಯರಿಂಗ್ ಕಾಲೇಜಿನ ಉಪಕ್ರಮ) ಮತ್ತು ‘ಟೆಲಿ ಮಾನಸ್ – TELE MANAS’ (ನಿಮ್ಹಾನ್ಸ್ ಸಂಸ್ಥೆಯ ಉಪಕ್ರಮ) ಅನ್ನು ಉದ್ಘಾಟಿಸಿದರು.
ಈ ಭೇಟಿಯ ಸಂದರ್ಭದಲ್ಲಿ, ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಗಳು ಹಾಗೂ ಬೆಂಗಳೂರಿನ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಮುಖ್ಯ ಪೋಷಕರಾದ ಮಾನ್ಯ ಶ್ರೀ ನ್ಯಾಯಮೂರ್ತಿ ವಿಭು ಬಖ್ರು; ಕರ್ನಾಟಕ ಹೈಕೋರ್ಟ್ನ ನ್ಯಾಯಮೂರ್ತಿಗಳು ಹಾಗೂ ಬೆಂಗಳೂರಿನ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯಾಧ್ಯಕ್ಷರಾದ ಮಾನ್ಯ ಶ್ರೀಮತಿ ನ್ಯಾಯಮೂರ್ತಿ ಅನು ಶಿವರಾಮನ್; ಕರ್ನಾಟಕ ಹೈಕೋರ್ಟ್ನ ರಿಜಿಸ್ಟ್ರಾರ್ ಜನರಲ್ ಆದ ಶ್ರೀ ಕೆ.ಎಸ್. ಭರತ್ ಕುಮಾರ್; ಕೆ.ಎಸ್.ಎಲ್.ಎಸ್.ಎ. ಬೆಂಗಳೂರಿನ ಸದಸ್ಯ ಕಾರ್ಯದರ್ಶಿಯಾದ ಶ್ರೀ ಎಚ್. ಶಶಿಧರ ಶೆಟ್ಟಿ ಮತ್ತು ನವದೆಹಲಿಯ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯಾದ ಶ್ರೀ ಸಂಜೀವ್ ಪಾಂಡೆ ಅವರು ಮಾನ್ಯ ನ್ಯಾಯಮೂರ್ತಿಗಳೊಂದಿಗೆ ಉಪಸ್ಥಿತರಿದ್ದರು.
ಭೇಟಿಯ ಅವಧಿಯಲ್ಲಿ, ಮಾನ್ಯ ನ್ಯಾಯಮೂರ್ತಿಗಳು ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ (DLSA) ಹಾಗೂ ಕಾನೂನು ನೆರವು ರಕ್ಷಣಾ ವಕೀಲರ (LADC) ಕಚೇರಿಯಿಂದ ಕಾನೂನು ನೆರವು/ಸೇವೆಗಳನ್ನು ಪಡೆದ ಕೈದಿಗಳೊಂದಿಗೆ ಸಂವಾದ ನಡೆಸಿದರು. ಅಲ್ಲದೆ, ಮಾನ್ಯ ನ್ಯಾಯಮೂರ್ತಿಗಳು ಬ್ಯಾರಕ್ಗಳು, ಜೈಲು ಕಾನೂನು ನೆರವು ಚಿಕಿತ್ಸಾಲಯ (Prison Legal Aid Clinic) ಮತ್ತು ವ್ಯಸನ ಮುಕ್ತಿ ಕೇಂದ್ರವನ್ನು ಪರಿಶೀಲಿಸಿದರು.






