ಸಂಚಾರಿ ನಿಯಮ ಉಲ್ಲಂಘಿಸಿ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ:ಹೊಸಕೋಟೆ ಪೊಲೀಸ್ ಇನ್ಸ್ಪೆಕ್ಟರ್ ಬಿ ಎಸ್ ಅಶೋಕ್
ಹೊಸಕೋಟೆ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ನೆಹರು ಯುವ ಕೇಂದ್ರದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ರಸ್ತೆ ಸುರಕ್ಷತೆ ಜಾಗೃತಿ ಅಭಿಯಾನ 2025 ಅಂಗವಾಗಿ ನಡೆದ ಜಾತ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ದೇಶದಲ್ಲಿ ಸಂಚಾರ ನಿಯಮಗಳನ್ನು ಉಲ್ಲಂಘಿಸುವ ವಾಹನ ಸವಾರರ ಮೇಲೆ ನಿಗಾ ಇಡುವ ಕಾರಣಕ್ಕಾಗಿ ಹೆಚ್ಚು ಸುಧಾರಿತ ತಂತ್ರಜ್ಞಾನ ಹೊಂದಿರುವ ಸಿಸಿ ಕ್ಯಾಮೆರಾ ಗಳನ್ನು ಅಳವಡಿಸಲಾಗಿದೆ. ಆದ್ದರಿಂದ ಸಂಚಾರಿ ನಿಯಮ ಉಲ್ಲಂಘನೆಯಿಂದ ಯಾರು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೊಸಕೋಟೆ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಬಿ ಎಸ್ ಅಶೋಕ್ ಹೇಳಿದರು.
ಸಂಚಾರಿ ನಿಯಮ ಉಲ್ಲಂಘಿಸಿದ ಸವಾರರ ಾಹನಗಳ ಎಚ್ಎಸ್ಆರ್ಪಿ ಸಂಖ್ಯೆಯ ಆಧಾರವಾಗಿ ನಮ್ಮ ಮೊಬೈಲ್ ಗೆ ದಂಡದ ಸಂದೇಶದೊಂದಿಗೆ ಮನೆಗೆ ನೋಟಿಸ್ ಬರುತ್ತದೆ. ಆದ್ದರಿಂದಲೇ ಇಂದು ಎಲ್ಲೆಂದರಲ್ಲಿ ವಾಹನಸವರರನ್ನು ತಡೆದು ಅಡ್ಡಗಟ್ಟಿ ದಂಡ ವಿಧಿಸುವ ಘಟನೆಗಳು ನಡೆಯುತ್ತಿಲ್ಲ. ಆದ್ದರಿಂದ ವಾಹನಸವರರು ಸಂಚಾರಿ ನಿಯಮಗಳ ಪಾಲನೆಗೆ ಆದ್ಯತೆ ನೀಡಬೇಕು ಎಂದು ಸೂಚಿಸಿದರು. ವಾಹನಗಳನ್ನು ತನಿಷ್ಟದಂತೆ ಬದಲಾಯಿಸಿಕೊಳ್ಳುವುದು, ವೀಲಿಂಗ್ ಮಾಡುವುದು, ಅತಿ ವೇಗದಲ್ಲಿ ವಾಹನ ಓಡಿಸುವುದು, ಇನ್ನೂ ಹಲವು ಕಾನೂನು ವಿರೋಧಿ ಚಟುವಟಿಕೆಗಳ ಮೂಲಕ ಕ್ರಿಮಿನಲ್ ಕೇಸ್ ಗಳಲ್ಲಿ ಸಿಕ್ಕಿ ಹಾಕಿಕೊಂಡರೆ ತಮ್ಮ ಭವಿಷ್ಯ ಸಮಸ್ಯೆಯಲ್ಲಿ ಸಿಕ್ಕಿಕೊಳ್ಳುತ್ತದೆ, ಪೊಲೀಸ್ ದಾಖಲೆಗಳಲ್ಲಿ ದೇಶದ ಯಾವುದೇ ಮೂಲೆಯಲ್ಲಿ ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಇದ್ದಲ್ಲಿ ಸರ್ಕಾರಿ ಉದ್ಯೋಗದಿಂದ ವಂಚಿತವಾಗುತ್ತೀರಿ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಕಾರ್ಯಕ್ರಮದ ನಿಮಿತ್ತ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ಕೆಇಬಿ ವೃತ್ತದ ವರೆಗೆ ರಸ್ತೆ ಸುರಕ್ಷತೆಯ ಜಾಗೃತಿ ಮೂಡಿಸುವ ಘೋಷಣೆಗಳನ್ನು ಕೂಗುತ್ತಾ ಜಾತ ಕಾರ್ಯಕ್ರಮವನ್ನು ನಡೆಸಿದರು.
ರಸ್ತೆ ಉದ್ದಕ್ಕೂ ಹೆಲ್ಮೆಟ್ ಧರಿಸದೆ ವಾಹನಗಳನ್ನು ಸವಾರಿ ಮಾಡುತ್ತಿದ್ದವರಿಗೆ ಹೂಗಳನ್ನು ನೀಡುತ್ತಾ ಹೆಲ್ಮೆಟ್ ಧರಿಸದೆ ವಾಹನ ಚಲನೆ ಮಾಡುವುದರಿಂದ ಆಗುವ ತೊಂದರೆಯ ಬಗ್ಗೆ ಜಾಗೃತಿ ಮೂಡಿಸಿದರು.
ಕಾರ್ಯಕ್ರಮದಲ್ಲಿ ನೆಹರು ಯುವ ಕೇಂದ್ರದ ಜಿಲ್ಲಾಧಿಕಾರಿ ಶ್ರೀವಾಣಿ ಕೋನರೆಡ್ಡಿ, ಸಂಚಾರಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ರಮೇಶ್, ಕಾಲೇಜಿನ ಪ್ರಾಧ್ಯಾಪಕರಾದ ಪ್ರೊ.ದೊಡ್ಡ ಹನುಮಯ್ಯ ಹಲವರು ಪಾಲ್ಗೊಂಡಿದ್ದರು.
ವರದಿ
ಶಶಿಕುಮಾರ್ ವಿ









