Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Bengaluru City Police

ದ್ವಿ-ಚಕ್ರ ವಾಹನ ಕಳವು ಮಾಡುತ್ತಿದ್ದ ನಾಲ್ವರು ವ್ಯಕ್ತಿಗಳ ಬಂಧನ. 13 ದ್ವಿ-ಚಕ್ರ ವಾಹನಗಳ ವಶ. ಮೌಲ್ಯ 21 ಲಕ್ಷ.

CREDOPRESS MEDIA PVT LTD by CREDOPRESS MEDIA PVT LTD
December 14, 2024
in Bengaluru City Police,J. JOHN PREM EDITOR,Latest News,Namma Police,Namma Police News
0
ದ್ವಿ-ಚಕ್ರ ವಾಹನ ಕಳವು ಮಾಡುತ್ತಿದ್ದ ನಾಲ್ವರು ವ್ಯಕ್ತಿಗಳ ಬಂಧನ. 13 ದ್ವಿ-ಚಕ್ರ ವಾಹನಗಳ ವಶ. ಮೌಲ್ಯ 21 ಲಕ್ಷ.
0
SHARES
51
VIEWS
Share on FacebookShare on Twitter


ಸುದ್ದಗುಂಟೆಪಾಳ್ಯ ಪೊಲೀಸ್‌ ಠಾಣಾ ಸರಹದ್ದಿನಲ್ಲಿರುವ ಬಿ.ಟಿ.ಎಂ ಲೇಔಟ್‌ನಲ್ಲಿ ವಾಸವಿರುವ ಪಿರಾದುದಾರರು ದಿನಾಂಕ:17/05/2024 ರಂದು ಸುದ್ದಗುಂಟೆಪಾಳ್ಯ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ದಿನಾಂಕ:16/05/2024 ರಂದು ರಾತ್ರಿ ಪಿರಾದುದಾರರು ವಾಸವಿರುವ ಮನೆಯ ಮುಂದೆ ನಿಲ್ಲಿಸಿದ್ದ 2 ದ್ವಿ-ಚಕ್ರ ವಾಹನಗಳನ್ನು ಯಾರೋ ಅಪರಿಚಿತರು ಕಳವು ಮಾಡಿಕೊಂಡು ಹೋಗಿರುತ್ತಾರೆಂದು ದೂರಿನಲ್ಲಿ ತಿಳಿಸಿರುತ್ತಾರೆ. ಈ ಕುರಿತು ಸುದ್ದಗುಂಟೆಪಾಳ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಪ್ರಕರಣದ ತನಿಖೆಯನ್ನು ಮುಂದುವರೆಸಿದ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡರೂ ಆರೋಪಿಗಳ ಬಗ್ಗೆ ಮಾಹಿತಿ ದೊರೆತಿರುವುದಿಲ್ಲ. ತನಿಖೆಯನ್ನು ಮುಂದುವರೆಸಿದ ಬಾತ್ಮೀದಾರರಿಂದ ಈ ಪ್ರಕರಣದ ಆರೋಪಿಗಳ ಬಗ್ಗೆ ಖಚಿತ ಮಾಹಿತಿಯನ್ನು ಕಲೆಹಾಕಿ, ದಿನಾಂಕ:20/11/2024 ರಂದು ಕಡಪ ಜಿಲ್ಲೆಯ ಪೋರಮಮಿಲ್ಲಾ ಟೌನ್‌ನಲ್ಲಿರುವ ಒಂದು ಗ್ಯಾರೇಜ್‌ನಲ್ಲಿ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಳ್ಳಲಾಯಿತು. ವಶಕ್ಕೆ ಪಡೆದ ವ್ಯಕ್ತಿಯನ್ನು ವಿಚಾರಣೆಗೊಳಪಡಿಸಿದಾಗ, ಈ ಪ್ರಕರಣದ 2 ದ್ವಿ-ಚಕ್ರ ವಾಹನ ಸೇರಿದಂತೆ ಒಟ್ಟು 7 ದ್ವಿ-ಚಕ್ರ ವಾಹನಗಳನ್ನು ಬೆಂಗಳೂರಿನ ಶಿವಾಜಿನಗರದ ವಾಸಿಯಾದ ಓರ್ವ ವ್ಯಕ್ತಿಯು ನೀಡಿದ್ದಾಗಿ ತಿಳಿಸಿರುತ್ತಾನೆ. ಆರೋಪಿಯ ಅಣ್ಣನಿಗೆ 7 ದ್ವಿ-ಚಕ್ರ ವಾಹನಗಳನ್ನು ಬೆಂಗಳೂರಿನ ಸುದ್ದಗುಂಟೆ ಪಾಳ್ಯ ಪೊಲೀಸ್ ಠಾಣೆಗೆ ಹಾಜರುಪಡಿಸುವಂತೆ ನೋಟಿಸ್ ಜಾರಿ ಮಾಡಿರುತ್ತೆ.
ದಿನಾಂಕ:21/11/2024 ರಂದು ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ, 10 ದಿನಗಳ ಕಾಲ ಪೊಲೀಸ್‌ ಅಭಿರಕ್ಷೆಗೆ ಪಡೆಯಲಾಯಿತು.
ತನಿಖೆಯನ್ನು ಮುಂದುವರೆಸಿ, ದಿನಾಂಕ:22/11/2024 ರಂದು ಆರೋಪಿಯ ಸಹಚರನನ್ನು ಶಿವಾಜಿನಗರದ ರಸ್ತೆಯಲ್ಲಿರುವ ದ್ವಿ-ಚಕ್ರ ವಾಹನಗಳ ಸ್ಪೇರ್ ಪಾರ್ಟ್ಸ್ ಅಂಗಡಿಯೊಂದರಿಂದ ವಶಕ್ಕೆ ಪಡೆದುಕೊಳ್ಳಲಾಯಿತು. ವಶಕ್ಕೆ ಪಡೆದ ವ್ಯಕ್ತಿಯನ್ನು ವಿಚಾರಣೆಗೊಳಪಡಿಸಲಾಗಿ ಈ ಪ್ರಕರಣದಲ್ಲಿ 2 ದ್ವಿ-ಚಕ್ರ ವಾಹನಗಳನ್ನು ಕಡಪದಲ್ಲಿರುವ ಒಂದು ಗ್ಯಾರೇಜ್‌ನಲ್ಲಿರುವ ಓರ್ವ ವ್ಯಕ್ತಿಗೆ ಮಾರಾಟ ಮಾಡಿರುವುದಾಗಿ ತನ್ನೊಪ್ಪಿಕೊಂಡಿರುತ್ತಾನೆ ಅಲ್ಲದೆ ಇತರ 5 ದ್ವಿ-ಚಕ್ರ ವಾಹನಗಳನ್ನು ಕೇಂದ್ರ ಕಾರಾಗೃಹದಲ್ಲಿರುವ ಓರ್ವ ಆರೋಪಿಯಿಂದ ಪಡೆದಿರುವುದಾಗಿ ತಿಳಿಸಿರುತ್ತಾನೆ.
ದಿನಾಂಕ:23/11/2024 ರಂದು ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ, 12 ದಿನಗಳ ಕಾಲ ಪೊಲೀಸ್‌ ಅಭಿರಕ್ಷೆಗೆ ಪಡೆಯಲಾಯಿತು.
ದಿನಾಂಕ:27/11/2024 ರಂದು ಕಡಪ ಜಿಲ್ಲೆಯ ಆಂದ್ರಪ್ರದೇಶದಲ್ಲಿ ನೀಡಿದ ನೋಟಿಸ್ ಮೇರೆಗೆ 7 ದ್ವಿ-ಚಕ್ರ ವಾಹನಗಳನ್ನು ಆರೋಪಿಯ ಅಣ್ಣನು ಠಾಣೆಗೆ ತಂದು ಹಾಜರುಪಡಿಸಿದ್ದನ್ನು ವಶಪಡಿಸಿಕೊಳ್ಳಲಾಯಿತು.

ದಿನಾಂಕ:04/12/2024 ರಂದು ಶಿವಾಜಿನಗರದಲ್ಲಿರುವ ಆರೋಪಿಯ ಅಣ್ಣನು 6 ದ್ವಿ-ಚಕ್ರ ವಾಹನಗಳನ್ನು ಠಾಣೆಗೆ ತಂದು ಹಾಜರುಪಡಿಸಿದ್ದನ್ನು ವಶಪಡಿಸಿಕೊಳ್ಳಲಾಯಿತು.
ಶಿವಾಜಿನಗರದ ಆರೋಪಿಯು ತನಗೆ ಕೇಂದ್ರ ಕಾರಾಗೃಹದಲ್ಲಿರುವ ಇಬ್ಬರು ಆರೋಪಿಗಳು ಒಟ್ಟು 13 ದ್ವಿ-ಚಕ್ರ ವಾಹನಗಳನ್ನು ನೀಡಿ ಹಣವನ್ನು ಪಡೆದಿರುವುದಾಗಿ ತಿಳಿಸಿರುತ್ತಾನೆ.
ಕೇಂದ್ರ ಕಾರಾಗೃಹದಲ್ಲಿರುವ ಇಬ್ಬರು ಆರೋಪಿಗಳನ್ನು ದಿನಾಂಕ:30/11/2024 ರಂದು ಮಾನ್ಯ ನ್ಯಾಯಾಲಯದ ಅದೇಶದ ಮೇರೆಗೆ 5 ದಿನಗಳ ಕಾಲ ಪೊಲೀಸ್‌ ಅಭಿರಕ್ಷೆಗೆ ಪಡೆಯಲಾಯಿತು.
ಪೊಲೀಸ್‌ ಅಭಿರಕ್ಷೆಗೆ ಪಡೆದ ಆರೋಪಿಗಳಿಬ್ಬರನ್ನು ವಿಚಾರಣೆಗೊಳಪಡಿಸಿದಾಗ, ಈ ಪ್ರಕರಣದಲ್ಲಿ ಕಳುವಾಗಿದ್ದ 2 ದ್ವಿ-ಚಕ್ರ ವಾಹನಗಳು ಸೇರಿದಂತೆ, ಇತರ 11 ದ್ವಿ-ಚಕ್ರ ವಾಹನಗಳ ಬಗ್ಗೆ ಮಾಹಿತಿಯನ್ನು ನೀಡಿ, ತನ್ನೊಪ್ಪಿಕೊಂಡಿರುತ್ತಾರೆ.
ಈ ಆರೋಪಿಗಳ ಬಂಧನದಿಂದ, ಒಟ್ಟು 13 ದ್ವಿ-ಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಇವುಗಳ ಮೌಲ್ಯ 21,00,000/-(ಇಪ್ಪತ್ತೊಂದು ಲಕ್ಷ ರೂಪಾಯಿ).
ಈ ಪ್ರಕರಣದ ಆರೋಪಿಗಳ ಬಂಧನದಿಂದ, 1) ಸುದ್ದುಗುಂಟೆ ಪಾಳ್ಯ ಪೊಲೀಸ್ ಠಾಣೆಯ-2 ದ್ವಿ-ಚಕ್ರ ವಾಹನ ಕಳವು ಪ್ರಕರಣ, 2) ಮಡಿವಾಳ ಪೊಲೀಸ್‌ ಠಾಣೆಯ-1 ದ್ವಿ-ಚಕ್ರ ವಾಹನ ಕಳವು ಪ್ರಕರಣ, 3) ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯ-1 ದ್ವಿ-ಚಕ್ರ ವಾಹನ ಕಳವು ಪ್ರಕರಣ, 4) ಹಲಸೂರು ಪೊಲೀಸ್ ಠಾಣೆಯ-1 ದ್ವಿ-ಚಕ್ರ ವಾಹನ ಕಳವು ಪ್ರಕರಣ, 5) ಹೆಚ್.ಎ.ಎಲ್ ಪೊಲೀಸ್‌ ಠಾಣೆಯ-1 ದ್ವಿ-ಚಕ್ರ ವಾಹನ ಕಳವು ಪ್ರಕರಣ, 6) ಜಿಗಣಿ ಪೊಲೀಸ್ ಠಾಣೆಯ-1 ದ್ವಿ ಚಕ್ರ ವಾಹನ ಕಳವು ಪ್ರಕರಣ, ಒಟ್ಟು 7 ದ್ವಿ-ಚಕ್ರ ವಾಹನ ಕಳವು ಪ್ರಕರಣಗಳು ಪತ್ತೆಯಾಗಿರುತ್ತವೆ. ಉಳಿದ 5 ದ್ವಿ-ಚಕ್ರ ವಾಹನಗಳ ಮಾಲೀಕರುಗಳು ಪತ್ತೆಯಾಗಬೇಕಾಗಿರುತ್ತದೆ. ತನಿಖೆ ಪ್ರಗತಿಯಲ್ಲಿದೆ.
ದಿನಾಂಕ:04/12/2024 ರಂದು ಈ ಪ್ರಕರಣದ ನಾಲ್ವರು ಆರೋಪಿಗಳನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ನಾಲ್ವರು ಆರೋಪಿಗಳಿಗೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತೆ.


ಈ ಕಾರ್ಯಾಚರಣೆಯನ್ನು ಆಗ್ನೆಯ ವಿಭಾಗದ ಉಪ ಪೊಲೀಸ್ ಆಯುಕ್ತರವರಾದ ಶ್ರೀಮತಿ, ಸಾರಾ ಫಾತೀಮಾ, ಐ.ಪಿ.ಎಸ್ ರವರ ನಿರ್ದೇಶನದಲ್ಲಿ, ಶ್ರೀ. ಶಿವಶಂಕರ ರೆಡ್ಡಿ, ಸಹಾಯಕ ಪೊಲೀಸ್ ಕಮೀಷನರ್, ಮೈಕೋಲೇಔಟ್ ಉಪ ವಿಭಾಗ ರವರ ಮಾರ್ಗದರ್ಶನದಲ್ಲಿ ಶ್ರೀ.ಮಾರುತಿ ಜಿ. ನಾಯಕಪೊಲೀಸ್ ಇನ್ಸ್ಪೆಕ್ಟರ್ ರವರ ನೇತೃತ್ವದಲ್ಲಿ ಅಧಿಕಾರಿ/ಸಿಬ್ಬಂದಿಗಳ ತಂಡ ಪ್ರಕರಣವನ್ನು ಪತ್ತೆಮಾಡುವಲ್ಲಿ ಯಶಸ್ವಿಯಾಗಿರುತ್ತಾರೆ.

    Tags: Bengaluru City PoliceKarnataka NewsKarnataka State PoliceNamma PoliceNamma Police NewsPolice NewsSG Palya Police
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ಕರ್ನಾಟಕ ಪೊಲೀಸ್ ಇಲಾಖೆಯ ಕೀರ್ತಿ ಹೆಚ್ಚಿಸಿದ ಫೆನ್ಸಿಂಗ್ ಸಾಧಕ
    Bengaluru City Police

    ಕರ್ನಾಟಕ ಪೊಲೀಸ್ ಇಲಾಖೆಯ ಕೀರ್ತಿ ಹೆಚ್ಚಿಸಿದ ಫೆನ್ಸಿಂಗ್ ಸಾಧಕ

    May 12, 2026
    ಶಿಡ್ಲಘಟ್ಟ: ಐದು ದ್ವಿಚಕ್ರ ವಾಹನಗಳ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು – ಓರ್ವನ ಬಂಧನ
    CREDOPRESS

    ಶಿಡ್ಲಘಟ್ಟ: ಐದು ದ್ವಿಚಕ್ರ ವಾಹನಗಳ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು – ಓರ್ವನ ಬಂಧನ

    May 11, 2026
    ಈಶಾನ್ಯ ವಿಭಾಗದ ಪೊಲೀಸರ ವಿಶೇಷ ಕಾರ್ಯಾಚರಣೆ.
    Bengaluru City Police

    ಈಶಾನ್ಯ ವಿಭಾಗದ ಪೊಲೀಸರ ವಿಶೇಷ ಕಾರ್ಯಾಚರಣೆ.

    May 8, 2026
    Next Post
    ಮನೆಗಳ ಹೊರಗೆ ಒಣಗಿಸಿದ್ದ ಮಹಿಳೆಯರ ಒಳ ಉಡುಪುಗಳು ನಾಪತ್ತೆ ಸೈಕೋ ಬಂಧನ!

    ಮನೆಗಳ ಹೊರಗೆ ಒಣಗಿಸಿದ್ದ ಮಹಿಳೆಯರ ಒಳ ಉಡುಪುಗಳು ನಾಪತ್ತೆ ಸೈಕೋ ಬಂಧನ!

    ಕಳ್ಳತನವಾದ ಕಾರು 24 ಗಂಟೆಯಲ್ಲಿ ಪತ್ತೆ

    ಕಳ್ಳತನವಾದ ಕಾರು 24 ಗಂಟೆಯಲ್ಲಿ ಪತ್ತೆ

    ಧನ್ನೂರ ಪೊಲೀಸ ರವರಿಂದ ಸುಲಿಗೆ ಪ್ರಕರಣದಲ್ಲಿ ಐದು ಜನ ಆರೋಪಿತರ ಬಂಧನ, 4 ಲಕ್ಷಕ್ಕೂ ಅಧಿಕ ನಗದು ಹಣ ಮತ್ತು ಒಂದು ಕಾರ ವಶ

    ಧನ್ನೂರ ಪೊಲೀಸ ರವರಿಂದ ಸುಲಿಗೆ ಪ್ರಕರಣದಲ್ಲಿ ಐದು ಜನ ಆರೋಪಿತರ ಬಂಧನ, 4 ಲಕ್ಷಕ್ಕೂ ಅಧಿಕ ನಗದು ಹಣ ಮತ್ತು ಒಂದು ಕಾರ ವಶ

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    B Dayananada Begur Police Bengaluru City Police Bidar District Police Bidar Police ccb CCB Police Cen Police CM Siddaramaiah Credo Press CREDOPRESS MEDIA Crime News Cyber Crime Davangere police Dr G Parameshwara drugs news Electronic city Police Hebbagodi police Hoskote Police Hulimavu Police Indian Police News J. JOHN PREM J. JOHN PREM EDITOR Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police MDMA Namma Police Namma Police News Police News Prime News Republic Day Sadashivnagar Police SG Palya Police Siddapura Police Traffic Police Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ಕರ್ನಾಟಕ ಪೊಲೀಸ್ ಇಲಾಖೆಯ ಕೀರ್ತಿ ಹೆಚ್ಚಿಸಿದ ಫೆನ್ಸಿಂಗ್ ಸಾಧಕ
    • ಶಿಡ್ಲಘಟ್ಟ: ಐದು ದ್ವಿಚಕ್ರ ವಾಹನಗಳ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು – ಓರ್ವನ ಬಂಧನ
    • ಈಶಾನ್ಯ ವಿಭಾಗದ ಪೊಲೀಸರ ವಿಶೇಷ ಕಾರ್ಯಾಚರಣೆ.

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved