ಸುದ್ದಗುಂಟೆ ಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಕೃಷ್ಣಮೂರ್ತಿ ಲೇಔಟ್ನ ವಾಸಿಯಾದ ಪಿರಾದುದಾರರು ದಿನಾಂಕ:23/11/2024 ರಂದು ಸುದ್ದಗುಂಟೆ ಪಾಳ್ಯ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಪಿರಾದುದಾರರು ಹೊಂದಿದ್ದ ರಾಯಲ್ ಎನ್ಫೀಲ್ಡ್ ಕ್ಲಾಸಿಕ್-350 ಯನ್ನು ದಿನಾಂಕ:22/11/2024 ರಂದು ಮನೆಯ ಮುಂಭಾಗ ನಿಲ್ಲಿಸಿದ್ದು, ಮಾರನೆಯ ದಿನ ನೋಡಲಾಗಿ ಪಿರಾದುದಾರರ ದ್ವಿ-ಚಕ್ರ ವಾಹನವನ್ನು ಯಾರೋ ಅಪರಿಚಿತರು ಕಳವು ಮಾಡಿಕೊಂಡು ಹೋಗಿರುತ್ತಾರೆಂದು ದೂರಿನಲ್ಲಿ ತಿಳಿಸಿರುತ್ತಾರೆ. ಈ ಕುರಿತು ಸುದ್ದಗುಂಟೆ ಪಾಳ್ಯ ಪೊಲೀಸ್ ಠಾಣೆಯಲ್ಲಿ ದ್ವಿ-ಚಕ್ರ ವಾಹನ ಕಳವು ಪ್ರಕರಣ ದಾಖಲಾಗಿರುತ್ತದೆ.
ಪ್ರಕರಣದ ತನಿಖೆಯನ್ನು ಮುಂದುವರೆಸಿದ ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು, ಬಾತ್ಮೀಧಾರರಿಂದ ಖಚಿತ ಮಾಹಿತಿಯನ್ನು ಪಡೆದು, ದಿನಾಂಕ:09/12/2024 ರಂದು ಓರ್ವ ವ್ಯಕ್ತಿಯನ್ನು ಆತನು ವಾಸವಿರುವ ತಾವರೆಕೆರೆಯ ಕೃಷ್ಣಮೂರ್ತಿ ಲೇಔಟ್ನ ಮನೆಯಿಂದ ವಶಕ್ಕೆ ಪಡೆಯಲಾಯಿತು. ವಶಕ್ಕೆ ಪಡೆದ ವ್ಯಕ್ತಿಯನ್ನು ವಿಚಾರಣೆಗೊಳಪಡಿಸಿದಾಗ ಈ ಪ್ರಕರಣದಲ್ಲಿ ರಾಯಲ್ ಎನ್ ಫೀಲ್ಡ್ ದ್ವಿ-ಚಕ್ರ ವಾಹನವನ್ನು ಕಳವು ಮಾಡಿರುವುದಾಗಿ ತಪ್ಪಿಪ್ಪಿಕೊಂಡಿರುತ್ತಾನೆ. ಅಲ್ಲದೆ ಇತರೆ 6 ರಾಯಲ್ ಎನ್ ಫೀಲ್ಡ್ ದ್ವಿ-ಚಕ್ರ ವಾಹನಗಳನ್ನು ಕಳವು ಮಾಡಿರುವುದಾಗಿ ತಿಳಿಸಿರುತ್ತಾನೆ.

ದಿನಾಂಕ:10/12/2024 ರಂದು ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ, 18 ದಿನಗಳ ಕಾಲ ಪೊಲೀಸ್ ಅಭಿರಕ್ಷೆಗೆ ಪಡೆಯಲಾಯಿತು.
ಪೊಲೀಸ್ ಅಭಿರಕ್ಷೆಗೆ ಪಡೆದ ಆರೋಪಿಯನ್ನು ಸುದೀರ್ಘವಾಗಿ ವಿಚಾರಣೆಗೊಳಪಡಿಸಿದಾಗ, ಆತನು ಇತರೆ ಇಬ್ಬರು ಸಹಚರರ ಜೊತೆ ಸೇರಿ ದ್ವಿ-ಚಕ್ರ ವಾಹನಗಳನ್ನು ಕಳವು ಮಾಡಿರುವ ಬಗ್ಗೆ ಮಾಹಿತಿಯನ್ನು ನೀಡಿರುತ್ತಾನೆ. ಹಾಗೂ ಕಳವು ಮಾಡಿದ ಒಟ್ಟು 7 ರಾಯಲ್ ಎನ್ ಫೀಲ್ಡ್ ದ್ವಿ-ಚಕ್ರ ವಾಹನಗಳ ಪೈಕಿ, 2-ಬೆಳಗಾವಿ ಸಿಟಿ ಬಸ್ ನಿಲ್ದಾಣದ ಬಳಿ, 3- ಬೆಳಗಾವಿ ಮಾರ್ಕೆಟ್ ಬಸ್ ನಿಲ್ದಾಣದ ಬಳಿ, 1-ಬೆಳಗಾವಿಯ ಫಾರೆಸ್ಟ್ ಕಛೇರಿಯ ಮುಂಭಾಗ ನಿಲ್ಲಿಸಿರುವುದಾಗಿ ತಿಳಿಸಿರುತ್ತಾನೆ. ಹಾಗೂ 1-ರಾಯಲ್ ಎನ್ ಫೀಲ್ಡ್ ದ್ವಿ-ಚಕ್ರ ವಾಹನವನ್ನು ಮಹಾರಾಷ್ಟ್ರ ರಾಜ್ಯದ ನಾಸಿಕ್ ಜಿಲ್ಲೆ, ಸತಾನ ತಾಲ್ಲೂಕು, ತಂಡಲವಾಡಿ ಗ್ರಾಮದಲ್ಲಿ ಮಾರಾಟ ಮಾಡಿರುವುದಾಗಿ ತಿಳಿಸಿರುತ್ತಾನೆ.
ದಿನಾಂಕ:14/12/2024 ರಂದು ಬೆಳಗಾವಿಯ ಸಿಟಿ ಬಸ್ ನಿಲ್ದಾಣದ ಬಳಿ ನಿಲ್ಲಿಸಿದ್ದ 2-ರಾಯಲ್ ಎನ್ ಫೀಲ್ಡ್ ದ್ವಿ-ಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಯಿತು.
ದಿನಾಂಕ:16/12/2024 ರಂದು 1-ರಾಯಲ್ ಎನ್ ಫೀಲ್ಡ್ ದ್ವಿ-ಚಕ್ರ ವಾಹನವನ್ನು ಮಹಾರಾಷ್ಟ್ರ ರಾಜ್ಯದ ನಾಸಿಕ್ ಜಿಲ್ಲೆ ಸತಾನ ತಾಲ್ಲೂಕು, ತಂಡಲವಾಡಿ ಗ್ರಾಮದಲ್ಲಿ ಮಾರಾಟ ಮಾಡಿದ್ದನ್ನು ವಶಪಡಿಸಿಕೊಳ್ಳಲಾಯಿತು.
ದಿನಾಂಕ:24/12/2024 ರಂದು ಬೆಳಗಾವಿಯ ಮಾರ್ಕೆಟ್ ಬಸ್ ನಿಲ್ದಾಣದ ಬಳಿ ನಿಲ್ಲಿಸಿದ್ದ 3-ರಾಯಲ್ ಎನ್ ಫೀಲ್ಡ್ ದ್ವಿ-ಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಯಿತು.
ದಿನಾಂಕ:25/12/2024 ರಂದು ಬೆಳಗಾವಿಯ ಫಾರೆಸ್ಟ್ ಕಛೇರಿಯ ಮುಂಭಾಗ ನಿಲ್ಲಿಸಿದ್ದ 1-ರಾಯಲ್ ಎನ್ ಫೀಲ್ಡ್ ದ್ವಿ-ಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಯಿತು.
ಈ ಪ್ರಕರಣದ ಆರೋಪಿಯ ವಶದಿಂದ ಒಟ್ಟಾರೆಯಾಗಿ 7-ರಾಯಲ್ ಎನ್ ಫೀಲ್ಡ್ ದ್ವಿ-ಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಯಿತು. ಇವುಗಳ ಮೌಲ್ಯ15,00,000/-(ಹದಿನೈದು ಲಕ್ಷ ರೂಪಾಯಿ).
ಈ ಪ್ರಕರಣದ ಆರೋಪಿಯ ಬಂಧನದಿಂದ ಸುದ್ದಗುಂಟೆ ಪಾಳ್ಯ ಪೊಲೀಸ್ ಠಾಣೆಯ 7-ದ್ವಿ-ಚಕ್ರ ವಾಹನ ಕಳವು ಪ್ರಕರಣಗಳು ಪತ್ತೆಯಾಗಿರುತ್ತವೆ.
ದಿನಾಂಕ:27/12/2024 ರಂದು ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತೆ.

ಈ ಕಾರ್ಯಾಚರಣೆಯನ್ನು ಆಗ್ನಿಯ ವಿಭಾದ ಉಪ ಪೊಲೀಸ್ ಆಯುಕ್ತ ರವರಾದ ಶ್ರೀಮತಿ, ಸಾರಾ ಫಾತೀಮಾ, ಐ.ಪಿ.ಎಸ್ ರವರ ನಿರ್ದೇಶನದಲ್ಲಿ, ಶ್ರೀ. ಶಿವಶಂಕರ ರೆಡ್ಡಿ, ಸಹಾಯಕ ಪೊಲೀಸ್ ಕಮೀಷನರ್, ಮೈಕೋಲೇಔಟ್ ಉಪ ವಿಭಾಗ ರವರ ಮಾರ್ಗದರ್ಶನದಲ್ಲಿ ಶ್ರೀ.ಮಾರುತಿ ಜಿ. ನಾಯಕ ಪೊಲೀಸ್ ಇನ್ಸ್ಪೆಕ್ಟರ್ ರವರ ನೇತೃತ್ವದಲ್ಲಿ ಇತರೆ ಅಧಿಕಾರಿ/ಸಿಬ್ಬಂದಿಗಳು ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.









