Namma Police
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
  • Home
  • About
  • National News
  • Bengaluru City Police
  • Crime News
  • Indian Police News
  • Latest News
No Result
View All Result
Namma Police
No Result
View All Result
Home Bengaluru City Police

ರಾಯಲ್ ಎನ್‌ಫೀಲ್ಡ್ ದ್ವಿ-ಚಕ್ರ ವಾಹನ ಕಳವು ಮಾಡುತ್ತಿದ್ದ ಓರ್ವ ವ್ಯಕ್ತಿಯ ಬಂಧನ, 7 ರಾಯಲ್ ಎನ್ಫೀಲ್ಡ್ ದ್ವಿ-ಚಕ್ರ ವಾಹನಗಳ ವಶ. ಮೌಲ್ಯ 15 ಲಕ್ಷ.

CREDOPRESS MEDIA PVT LTD by CREDOPRESS MEDIA PVT LTD
December 31, 2024
in Bengaluru City Police,J. JOHN PREM EDITOR,Latest News,Namma Police,Namma Police News
0
ರಾಯಲ್ ಎನ್‌ಫೀಲ್ಡ್ ದ್ವಿ-ಚಕ್ರ ವಾಹನ ಕಳವು ಮಾಡುತ್ತಿದ್ದ ಓರ್ವ ವ್ಯಕ್ತಿಯ ಬಂಧನ, 7 ರಾಯಲ್ ಎನ್ಫೀಲ್ಡ್ ದ್ವಿ-ಚಕ್ರ ವಾಹನಗಳ ವಶ. ಮೌಲ್ಯ 15 ಲಕ್ಷ.
0
SHARES
31
VIEWS
Share on FacebookShare on Twitter


ಸುದ್ದಗುಂಟೆ ಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಕೃಷ್ಣಮೂರ್ತಿ ಲೇಔಟ್‌ನ ವಾಸಿಯಾದ ಪಿರಾದುದಾರರು ದಿನಾಂಕ:23/11/2024 ರಂದು ಸುದ್ದಗುಂಟೆ ಪಾಳ್ಯ ಪೊಲೀಸ್‌ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಪಿರಾದುದಾರರು ಹೊಂದಿದ್ದ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್-350 ಯನ್ನು ದಿನಾಂಕ:22/11/2024 ರಂದು ಮನೆಯ ಮುಂಭಾಗ ನಿಲ್ಲಿಸಿದ್ದು, ಮಾರನೆಯ ದಿನ ನೋಡಲಾಗಿ ಪಿರಾದುದಾರರ ದ್ವಿ-ಚಕ್ರ ವಾಹನವನ್ನು ಯಾರೋ ಅಪರಿಚಿತರು ಕಳವು ಮಾಡಿಕೊಂಡು ಹೋಗಿರುತ್ತಾರೆಂದು ದೂರಿನಲ್ಲಿ ತಿಳಿಸಿರುತ್ತಾರೆ. ಈ ಕುರಿತು ಸುದ್ದಗುಂಟೆ ಪಾಳ್ಯ ಪೊಲೀಸ್ ಠಾಣೆಯಲ್ಲಿ ದ್ವಿ-ಚಕ್ರ ವಾಹನ ಕಳವು ಪ್ರಕರಣ ದಾಖಲಾಗಿರುತ್ತದೆ.
ಪ್ರಕರಣದ ತನಿಖೆಯನ್ನು ಮುಂದುವರೆಸಿದ ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು, ಬಾತ್ಮೀಧಾರರಿಂದ ಖಚಿತ ಮಾಹಿತಿಯನ್ನು ಪಡೆದು, ದಿನಾಂಕ:09/12/2024 ರಂದು ಓರ್ವ ವ್ಯಕ್ತಿಯನ್ನು ಆತನು ವಾಸವಿರುವ ತಾವರೆಕೆರೆಯ ಕೃಷ್ಣಮೂರ್ತಿ ಲೇಔಟ್‌ನ ಮನೆಯಿಂದ ವಶಕ್ಕೆ ಪಡೆಯಲಾಯಿತು. ವಶಕ್ಕೆ ಪಡೆದ ವ್ಯಕ್ತಿಯನ್ನು ವಿಚಾರಣೆಗೊಳಪಡಿಸಿದಾಗ ಈ ಪ್ರಕರಣದಲ್ಲಿ ರಾಯಲ್ ಎನ್ ಫೀಲ್ಡ್ ದ್ವಿ-ಚಕ್ರ ವಾಹನವನ್ನು ಕಳವು ಮಾಡಿರುವುದಾಗಿ ತಪ್ಪಿಪ್ಪಿಕೊಂಡಿರುತ್ತಾನೆ. ಅಲ್ಲದೆ ಇತರೆ 6 ರಾಯಲ್ ಎನ್ ಫೀಲ್ಡ್ ದ್ವಿ-ಚಕ್ರ ವಾಹನಗಳನ್ನು ಕಳವು ಮಾಡಿರುವುದಾಗಿ ತಿಳಿಸಿರುತ್ತಾನೆ.


ದಿನಾಂಕ:10/12/2024 ರಂದು ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ, 18 ದಿನಗಳ ಕಾಲ ಪೊಲೀಸ್‌ ಅಭಿರಕ್ಷೆಗೆ ಪಡೆಯಲಾಯಿತು.
ಪೊಲೀಸ್‌ ಅಭಿರಕ್ಷೆಗೆ ಪಡೆದ ಆರೋಪಿಯನ್ನು ಸುದೀರ್ಘವಾಗಿ ವಿಚಾರಣೆಗೊಳಪಡಿಸಿದಾಗ, ಆತನು ಇತರೆ ಇಬ್ಬರು ಸಹಚರರ ಜೊತೆ ಸೇರಿ ದ್ವಿ-ಚಕ್ರ ವಾಹನಗಳನ್ನು ಕಳವು ಮಾಡಿರುವ ಬಗ್ಗೆ ಮಾಹಿತಿಯನ್ನು ನೀಡಿರುತ್ತಾನೆ. ಹಾಗೂ ಕಳವು ಮಾಡಿದ ಒಟ್ಟು 7 ರಾಯಲ್ ಎನ್ ಫೀಲ್ಡ್ ದ್ವಿ-ಚಕ್ರ ವಾಹನಗಳ ಪೈಕಿ, 2-ಬೆಳಗಾವಿ ಸಿಟಿ ಬಸ್ ನಿಲ್ದಾಣದ ಬಳಿ, 3- ಬೆಳಗಾವಿ ಮಾರ್ಕೆಟ್ ಬಸ್ ನಿಲ್ದಾಣದ ಬಳಿ, 1-ಬೆಳಗಾವಿಯ ಫಾರೆಸ್ಟ್ ಕಛೇರಿಯ ಮುಂಭಾಗ ನಿಲ್ಲಿಸಿರುವುದಾಗಿ ತಿಳಿಸಿರುತ್ತಾನೆ. ಹಾಗೂ 1-ರಾಯಲ್ ಎನ್ ಫೀಲ್ಡ್ ದ್ವಿ-ಚಕ್ರ ವಾಹನವನ್ನು ಮಹಾರಾಷ್ಟ್ರ ರಾಜ್ಯದ ನಾಸಿಕ್ ಜಿಲ್ಲೆ, ಸತಾನ ತಾಲ್ಲೂಕು, ತಂಡಲವಾಡಿ ಗ್ರಾಮದಲ್ಲಿ ಮಾರಾಟ ಮಾಡಿರುವುದಾಗಿ ತಿಳಿಸಿರುತ್ತಾನೆ.
ದಿನಾಂಕ:14/12/2024 ರಂದು ಬೆಳಗಾವಿಯ ಸಿಟಿ ಬಸ್‌ ನಿಲ್ದಾಣದ ಬಳಿ ನಿಲ್ಲಿಸಿದ್ದ 2-ರಾಯಲ್ ಎನ್ ಫೀಲ್ಡ್ ದ್ವಿ-ಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಯಿತು.
ದಿನಾಂಕ:16/12/2024 ರಂದು 1-ರಾಯಲ್ ಎನ್ ಫೀಲ್ಡ್ ದ್ವಿ-ಚಕ್ರ ವಾಹನವನ್ನು ಮಹಾರಾಷ್ಟ್ರ ರಾಜ್ಯದ ನಾಸಿಕ್ ಜಿಲ್ಲೆ ಸತಾನ ತಾಲ್ಲೂಕು, ತಂಡಲವಾಡಿ ಗ್ರಾಮದಲ್ಲಿ ಮಾರಾಟ ಮಾಡಿದ್ದನ್ನು ವಶಪಡಿಸಿಕೊಳ್ಳಲಾಯಿತು.

ದಿನಾಂಕ:24/12/2024 ರಂದು ಬೆಳಗಾವಿಯ ಮಾರ್ಕೆಟ್ ಬಸ್ ನಿಲ್ದಾಣದ ಬಳಿ ನಿಲ್ಲಿಸಿದ್ದ 3-ರಾಯಲ್ ಎನ್ ಫೀಲ್ಡ್ ದ್ವಿ-ಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಯಿತು.
ದಿನಾಂಕ:25/12/2024 ರಂದು ಬೆಳಗಾವಿಯ ಫಾರೆಸ್ಟ್ ಕಛೇರಿಯ ಮುಂಭಾಗ ನಿಲ್ಲಿಸಿದ್ದ 1-ರಾಯಲ್ ಎನ್ ಫೀಲ್ಡ್ ದ್ವಿ-ಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಯಿತು.
ಈ ಪ್ರಕರಣದ ಆರೋಪಿಯ ವಶದಿಂದ ಒಟ್ಟಾರೆಯಾಗಿ 7-ರಾಯಲ್ ಎನ್ ಫೀಲ್ಡ್ ದ್ವಿ-ಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಯಿತು. ಇವುಗಳ ಮೌಲ್ಯ15,00,000/-(ಹದಿನೈದು ಲಕ್ಷ ರೂಪಾಯಿ).
ಈ ಪ್ರಕರಣದ ಆರೋಪಿಯ ಬಂಧನದಿಂದ ಸುದ್ದಗುಂಟೆ ಪಾಳ್ಯ ಪೊಲೀಸ್ ಠಾಣೆಯ 7-ದ್ವಿ-ಚಕ್ರ ವಾಹನ ಕಳವು ಪ್ರಕರಣಗಳು ಪತ್ತೆಯಾಗಿರುತ್ತವೆ.
ದಿನಾಂಕ:27/12/2024 ರಂದು ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತೆ.


ಈ ಕಾರ್ಯಾಚರಣೆಯನ್ನು ಆಗ್ನಿಯ ವಿಭಾದ ಉಪ ಪೊಲೀಸ್ ಆಯುಕ್ತ ರವರಾದ ಶ್ರೀಮತಿ, ಸಾರಾ ಫಾತೀಮಾ, ಐ.ಪಿ.ಎಸ್ ರವರ ನಿರ್ದೇಶನದಲ್ಲಿ, ಶ್ರೀ. ಶಿವಶಂಕರ ರೆಡ್ಡಿ, ಸಹಾಯಕ ಪೊಲೀಸ್‌ ಕಮೀಷನರ್, ಮೈಕೋಲೇಔಟ್ ಉಪ ವಿಭಾಗ ರವರ ಮಾರ್ಗದರ್ಶನದಲ್ಲಿ ಶ್ರೀ.ಮಾರುತಿ ಜಿ. ನಾಯಕ ಪೊಲೀಸ್ ಇನ್ಸ್‌ಪೆಕ್ಟರ್ ರವರ ನೇತೃತ್ವದಲ್ಲಿ ಇತರೆ ಅಧಿಕಾರಿ/ಸಿಬ್ಬಂದಿಗಳು ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.

    Tags: Bengaluru City PoliceIndian Police NewsKarnataka NewsKarnataka State PoliceLatest NewsNamma PoliceNamma Police NewsPrime NewsSuddagunte palya police
    CREDOPRESS MEDIA PVT LTD

    CREDOPRESS MEDIA PVT LTD

    Related Posts

    ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು
    Bengaluru City Police

    ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು

    July 28, 2026
    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    Bengaluru City Police

    ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    July 24, 2026
    ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ
    Bengaluru District Police

    ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ

    July 23, 2026
    Next Post
    ಜನನಾಯಕ M.N.KARIBASAVANA GOUDA, KSPS. Deputy Commissioner of Police. (Vidhana Soudha Security)

    ಜನನಾಯಕ M.N.KARIBASAVANA GOUDA, KSPS. Deputy Commissioner of Police. (Vidhana Soudha Security)

    ಮಾನ್ಯ ಬೆಂಗಳೂರು ಪೊಲೀಸ್ ಕಮಿಷನರ್ ಬಿ. ದಯಾನಂದ್ ಅವರ ಆದೇಶದಂತೆ ಹೊಸ ವರ್ಷವನ್ನು ಈ ರೀತಿ ಆಚರಣೆ ಮಾಡಿದ್ದಾರೆ ನಮ್ಮ ಮಡಿವಾಳ ಪೊಲೀಸ್ ಠಾಣಾಧಿಕಾರಿ ಮೊಹಮ್ಮದ್ ರವರು.

    ಮಾನ್ಯ ಬೆಂಗಳೂರು ಪೊಲೀಸ್ ಕಮಿಷನರ್ ಬಿ. ದಯಾನಂದ್ ಅವರ ಆದೇಶದಂತೆ ಹೊಸ ವರ್ಷವನ್ನು ಈ ರೀತಿ ಆಚರಣೆ ಮಾಡಿದ್ದಾರೆ ನಮ್ಮ ಮಡಿವಾಳ ಪೊಲೀಸ್ ಠಾಣಾಧಿಕಾರಿ ಮೊಹಮ್ಮದ್ ರವರು.

    FAKE ಕಾಲ್ ಸೆಂಟರ್ ಮೇಲೆ ಹುಳಿಮಾವು ಪೊಲೀಸರು ದಾಳಿ ನಡೆಸಿದ್ದಾರೆ

    FAKE ಕಾಲ್ ಸೆಂಟರ್ ಮೇಲೆ ಹುಳಿಮಾವು ಪೊಲೀಸರು ದಾಳಿ ನಡೆಸಿದ್ದಾರೆ

    Please login to join discussion

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    Topics

    BBMP B Dayananada Begur Police Belagavi Police Bengaluru City Police Bidar District Police Bidar Police ccb CCB Police Cen Police Chikkabalapura Police CM Siddaramaiah Credo Press CREDOPRESS MEDIA Cyber Crime Davangere police drugs news Electronic city Police Hoskote News Hoskote Police Hulimavu Police Indian Police News J. JOHN PREM EDITOR Jayanagar Police Kannada Actor Darshan Karnataka News Karnataka State Police Kodagu Police Kolar Police Koramangala Police KR Puram Police Latest News Madiwala Police Madiwala Police Station Mahadevpura Police Malleshwaram Police MDMA Namma Police Namma Police News Police News Prime News Sadashivnagar Police SG Palya Police Siddapura Police Yelahanka police
    No Result
    View All Result

    • 4.2K
      Fans
      4.2K
      Fans
    • 0.5K
      Subscribers
      0.5K
      Subscribers

    Contact Us

    info@nammapolice.com

    Recent News

    • ನಶಾ ಮುಕ್ತ ಭಾರತ ಅಭಿಯಾನದ ವೇಳೆ ವಿದ್ಯಾರ್ಥಿಗಳ ದೂರಿನ ಮೇರೆಗೆ ಶಾಲೆ ಸಮೀಪದ ತಂಬಾಕು ಅಂಗಡಿ ಮುಚ್ಚಿಸಿ ಪ್ರಕರಣ ದಾಖಲು
    • ಅಂತರರಾಜ್ಯ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    • ಅಲ್ಯೂಮಿನಿಯಂ ಕೇಬಲ್ ಕಳ್ಳತನ ಪ್ರಕರಣ ಭೇದಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು,8 ಮಂದಿ ಬಂಧನ

    Categories

    • Bengaluru City Police
    • Bengaluru District Police
    • Bengaluru Traffic Police
    • Bidar District Police
    • Bidar Police
    • CCB Police
    • CREDOPRESS
    • Crime News
    • Cyber Crime
    • Davangere Police
    • Employee Details
    • Haveri District Police
    • Indian Police News
    • J. JOHN PREM EDITOR
    • Karnataka News
    • Karnataka State Police
    • Kolar Police
    • Latest News
    • Mangaluru Police
    • Namma Police
    • Namma Police News
    • National News
    • News Informer
    • Police News
    • Tumkur District Police
    • Uttara kannada police

    © 2024 Namma Police .All rights are reserved

    No Result
    View All Result
    • Home
    • About
    • National News
    • Bengaluru City Police
    • Crime News
    • Indian Police News
    • Latest News

    © 2024 Namma Police .All rights are reserved