ಯಲಹಂಕ ಪೊಲೀಸ್ ಠಾಣಾ ಸರಹದ್ದಿನ ಪ್ರಕೃತಿ ನಗರದ ಅಪಾರ್ಟ್ಮೆಂಟ್ ಒಂದರಲ್ಲಿ ವಾಸವಿರುವ ಪಿರ್ಯಾದುದಾರರು ಠಾಣೆಯಲ್ಲಿ ಕಳ್ಳತನದ ಪ್ರಕರಣವನ್ನು ದಾಖಲಿಸಿರುತ್ತಾರೆ
ಬೆಳಗ್ಗೆ ಕೆಲಸಕ್ಕೆ ಹೋಗಿ ಮಧ್ಯಾಹ್ನ ಊಟಕ್ಕೆಂದು ಬಂದು ಊಟ ಮುಗಿಸಿಕೊಂಡು ಫ್ಲ್ಯಾಟ್ನ ಬಾಗಿಲಿಗೆ ಡೋರ್ ಲಾಕ್ ಮಾಡಿಕೊಂಡು ಮತ್ತೆ ಕೆಲಸಕ್ಕೆ ಹೋಗಿರುತ್ತಾರೆ ಸಂಜೆ ಕೆಲಸ ಮುಗಿಸಿಕೊಂಡು ವಾಪಸ್ ಬಂದು ನೋಡಲಾಗಿ ಯಾರೋ ಕಳ್ಳರು ಬಾಗಿಲನ್ನು ಮೀಟಿ ಒಳಗೆ ಪ್ರವೇಶಿಸಿ ಕೊಠಡಿಯ ಬೀರುವಿನಲ್ಲಿಟ್ಟಿದ್ದ ಸುಮಾರು 250 ಗ್ರಾಂ ಚಿನ್ನಾಭರಣಗಳು ಬೆಳ್ಳಿಯ ವಸ್ತುಗಳು ಹಾಗೂ ನಗದನ್ನು ಕಳವು ಮಾಡಿಕೊಂಡು ಹೋಗಿರುವುದಾಗಿ ಪ್ರಕರಣವನ್ನು ಯಲಹಂಕ ಪೊಲೀಸ್ ಠಾಣೆಯಲ್ಲಿ ದಾಖಲಿಸಿರುತ್ತಾರೆ
ಪ್ರಕರಣದ ತನಿಖೆಯನ್ನು ಮುಂದುವರಿಸಿದ ಯಲಹಂಕ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು ಖಚಿತ ಮಾಹಿತಿ ಮೇರೆಗೆ ಗುಜರಾತಿನ ಸೂರತ್ ಸಿಟಿ ಸೆಂಟ್ರಲ್ ಜೈಲಿನಲ್ಲಿದ್ದ ಆರೋಪಿಗಳಿಬ್ಬರನ್ನು ಬಾಡಿ ವಾರೆಂಟ್ ಮೇಲೆ ವಶಕ್ಕೆ ಪಡೆದುಕೊಂಡ ಪೊಲೀಸರು ಇಬ್ಬರು ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿದಾಗ ಈ ಕೃತ್ಯ ಎಸುಗಿರುವುದಾಗಿ ತಪ್ಪು ಒಪ್ಪಿಕೊಂಡಿರುತ್ತಾರೆ
ಆರೋಪಿಗಳನ್ನು ಸುದೀರ್ಘವಾಗಿ ವಿಚಾರಣೆ ಪಡಿಸಿದ ಪೊಲೀಸರು ಮಹಾರಾಷ್ಟ್ರ ರಾಜ್ಯದ
ಓಶಿ ವಾರದಲ್ಲಿರುವ ಆರೋಪಿಗಳ ಮನೆಗಳಲ್ಲಿ ಕಳುವು ಮಾಡಿದ ಚಿನ್ನಾಭರಣಗಳನ್ನು ಕರಗಿಸಿ ಗಟ್ಟಿಯನ್ನಾಗಿಸಿ ಇಟ್ಟಿರುವುದನ್ನು ಆರೋಪಿಗಳು ತಿಳಿಸಿರುತ್ತಾರೆ
ಆರೋಪಿಗಳ ಮಾಹಿತಿ ಮೇರೆಗೆ ವಾಸದ ಮನೆಯಲ್ಲಿಟ್ಟಿದ್ದ 175 ಗ್ರಾಂ ಚಿನ್ನದ ಗಟ್ಟಿ ಐದು ಗ್ರಾಂ ಎರಡು ಚಿನ್ನದ ಉಂಗುರಗಳು ಒಟ್ಟು 16 ಲಕ್ಷ ಮೌಲ್ಯದ 180 ಗ್ರಾಂ ಚಿನ್ನವನ್ನು ಯಲಹಂಕ ಪೊಲೀಸರು ವಶಪಡಿಸಿಕೊಂಡಿರುತ್ತಾರೆ
ಆರೋಪಿಗಳ ಬಂದನದಿಂದ ಯಲಹಂಕ ಪೊಲೀಸ್ ಠಾಣೆಯ ಒಂದು ಹಗಲು ಮನೆ ಕನ್ನ ಕಳುವು ಪ್ರಕರಣ ಪತ್ತೆಯಾಗಿರುತ್ತದೆ
ಯಲಹಂಕ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಎಂಎಲ್ ಕೃಷ್ಣಮೂರ್ತಿ ಹಾಗೂ ಸಿಬ್ಬಂದಿಗಳ ತಂಡ ಈ ಪ್ರಕರಣವನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾದ ಈಶಾನ್ಯ ವಿಭಾಗದ ಉಪ ಪೊಲೀಸ್ ಆಯುಕ್ತರದ ವಿ ಜೇ ಸಜಿತ್ ಐಪಿಎಸ್ ಹಾಗೂ ಎಸಿಪಿ ನರಸಿಂಹಮೂರ್ತಿ ರವರು ಶ್ಲಾಘಿಸಿರುತ್ತಾರೆ.
ವರದಿ
ಶಶಿಕುಮಾರ್ ವಿ









